ದೂರದೃಷ್ಟಿಯುಳ್ಳ, ಕೊಡುಗೈ ದಾನಿ, ಉದ್ಯಮ‌ ಲೋಕದ ದಿಗ್ಗಜ, ಸರಳ ಸಜ್ಜನಿಕೆ ವ್ಯಕ್ತಿತ್ವದ ರತನ್ ಟಾಟಾ ಇನ್ನಿಲ್ಲ

ಭಾರತದ ಅತಿದೊಡ್ಡ ಸಂಘಟಿತ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸನ್ಸ್‌ನ ಎಮೆರಿಟಸ್ ಅಧ್ಯಕ್ಷ ರತನ್ ಟಾಟಾ ಅವರು 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಸೋಮವಾರವಷ್ಟೇ, ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಕೈಗಾರಿಕೋದ್ಯಮಿ ತಮ್ಮ ಆರೋಗ್ಯದ ಬಗ್ಗೆ ಊಹಾಪೋಹಗಳನ್ನು ತಳ್ಳಿಹಾಕಿದ್ದರು. ಆದರೆ, ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಎರಡು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಟಾಟಾ ಗ್ರೂಪ್ ಅನ್ನು ಸ್ಥಾಪಿಸಿದ ಜಮ್‌ಸೆಟ್ಜಿ ಟಾಟಾ ಅವರ ಮರಿ ಮೊಮ್ಮಗ ರತನ್ ನೇವಲ್ ಟಾಟಾ. ಡಿಸೆಂಬರ್ 28, 1937 ರಂದು ಮುಂಬೈನಲ್ಲಿ ಜನಸಿದ್ದು, ಇವರ ತಂದೆ ನೇವಲ್ ಟಾಟಾ ಮತ್ತು ತಾಯಿ ಸೂನಿ ಟಾಟಾ.

ಅಚ್ಚರಿ ವಿಷಯವಾದರೂ ರತನ್‌ ಟಾಟಾ ಅವರು ತಮ್ಮ ಜೀವನದಲ್ಲಿ ಮದುವೆಯೇ ಆಗಲಿಲ್ಲ. ಈ ಹಿಂದೆ ನಾಲ್ಕೈದು ಬಾರಿ ಮದುವೆ ಚರ್ಚೆ ಬಂದಿತ್ಥಾದರೂ ರತನ್ ಅವರು ಮದುವೆಗೆ ಒಪ್ಪಲಿಲ್ಲ ಎನ್ನಲಾಗಿದೆ.

1961 ರಲ್ಲಿ ತಮ್ಮ ವೃತ್ತಿ ಜೀವನವನ್ನು ರತನ್‌ ಟಾಟಾ ಪ್ರಾರಂಭಿಸಿದರು. ಟಾಟಾ ಸ್ಟೀಲ್ಸ್‌ ಮಹಡಿಯಲ್ಲಿ ಸ್ವತಃ ತಾವೇ ಕೆಲಸ ಮಾಡುವ ಮೂಲಕ ತಳಮಟ್ಟದಿಂದ ಕೆಲಸ ಕಲಿತು ಅದರ ಅನುಭವದಿಂದ ಮೇಲೆ ಬಂದರು. ಇದು ಅವರ ಭವಿಷ್ಯದ ನಿರ್ಧಾರಗಳಿಗೆ ದೊಡ್ಡಮಟ್ಟಿನಲ್ಲಿ ನೆರವಾಯಿತು ಎಂದು ಅವರೇ ಸಾಕಷ್ಟು ಬಾರಿ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ.

ಜನರಿಗೆ ಅನುಕೂಲವಾಗುವ ಮನೆ ಮಾತಾಗಿರುವ ಟಾಟಾ ಟೀ, ಟಾಟಾ ಮೋಟಾರ್ಸ್ ಮತ್ತು ಟಾಟಾ ಸ್ಟೀಲ್ ಸ್ಥಾಪಿಸಿದ್ದು ರತನ್‌ ಟಾಟಾ. ಉದ್ಯಮ ಸಾಧನೆ, ಸೇವಾ ಕಾರ್ಯಕ್ಕೆ ಮೆಚ್ಚಿ ಕೇಂದ್ರ ಸರ್ಕಾರವು ಪದ್ಮಭೂಷಣ, ಪದ್ಮ ವಿಭೂಷಣ ನೀಡಿ ಗೌರವಿಸಿದೆ.

2024 ರಲ್ಲಿ ಅವರ ಒಟ್ಟಾರೆ ನಿವ್ವಳ ಆಸ್ತಿ ಮೊತ್ತವು 3800 ಕೋಟಿ ರೂಪಾಯಿ ಆಗುತ್ತದೆ. ರತನ್‌ ಟಾಟಾ ಅವರು ತಮ್ಮ ಸಂಪಾದನೆಯ ಶೇ 60 ಕ್ಕೂ ಹೆಚ್ಚು ಹಣವನ್ನು ಟಾಟಾ ಚಾರಿಟಿಗೆ (ದಾನ) ನೀಡುತ್ತಿದ್ದರು. ದೇಶದ ಕೋವಿಡ್‌ ಹೋರಾಟಕ್ಕೆ 1,500 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

Ramesh Babu

Journalist

Recent Posts

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

39 minutes ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

2 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

6 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

7 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

15 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

23 hours ago