ಭಾರತದ ಅತಿದೊಡ್ಡ ಸಂಘಟಿತ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸನ್ಸ್ನ ಎಮೆರಿಟಸ್ ಅಧ್ಯಕ್ಷ ರತನ್ ಟಾಟಾ ಅವರು 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ಸೋಮವಾರವಷ್ಟೇ, ಸಾಮಾಜಿಕ ಮಾಧ್ಯಮದ ಪೋಸ್ಟ್ನಲ್ಲಿ ಕೈಗಾರಿಕೋದ್ಯಮಿ ತಮ್ಮ ಆರೋಗ್ಯದ ಬಗ್ಗೆ ಊಹಾಪೋಹಗಳನ್ನು ತಳ್ಳಿಹಾಕಿದ್ದರು. ಆದರೆ, ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಎರಡು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಅಚ್ಚರಿ ವಿಷಯವಾದರೂ ರತನ್ ಟಾಟಾ ಅವರು ತಮ್ಮ ಜೀವನದಲ್ಲಿ ಮದುವೆಯೇ ಆಗಲಿಲ್ಲ. ಈ ಹಿಂದೆ ನಾಲ್ಕೈದು ಬಾರಿ ಮದುವೆ ಚರ್ಚೆ ಬಂದಿತ್ಥಾದರೂ ರತನ್ ಅವರು ಮದುವೆಗೆ ಒಪ್ಪಲಿಲ್ಲ ಎನ್ನಲಾಗಿದೆ.
1961 ರಲ್ಲಿ ತಮ್ಮ ವೃತ್ತಿ ಜೀವನವನ್ನು ರತನ್ ಟಾಟಾ ಪ್ರಾರಂಭಿಸಿದರು. ಟಾಟಾ ಸ್ಟೀಲ್ಸ್ ಮಹಡಿಯಲ್ಲಿ ಸ್ವತಃ ತಾವೇ ಕೆಲಸ ಮಾಡುವ ಮೂಲಕ ತಳಮಟ್ಟದಿಂದ ಕೆಲಸ ಕಲಿತು ಅದರ ಅನುಭವದಿಂದ ಮೇಲೆ ಬಂದರು. ಇದು ಅವರ ಭವಿಷ್ಯದ ನಿರ್ಧಾರಗಳಿಗೆ ದೊಡ್ಡಮಟ್ಟಿನಲ್ಲಿ ನೆರವಾಯಿತು ಎಂದು ಅವರೇ ಸಾಕಷ್ಟು ಬಾರಿ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ.
2024 ರಲ್ಲಿ ಅವರ ಒಟ್ಟಾರೆ ನಿವ್ವಳ ಆಸ್ತಿ ಮೊತ್ತವು 3800 ಕೋಟಿ ರೂಪಾಯಿ ಆಗುತ್ತದೆ. ರತನ್ ಟಾಟಾ ಅವರು ತಮ್ಮ ಸಂಪಾದನೆಯ ಶೇ 60 ಕ್ಕೂ ಹೆಚ್ಚು ಹಣವನ್ನು ಟಾಟಾ ಚಾರಿಟಿಗೆ (ದಾನ) ನೀಡುತ್ತಿದ್ದರು. ದೇಶದ ಕೋವಿಡ್ ಹೋರಾಟಕ್ಕೆ 1,500 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…