ಕೊನಘಟ್ಟದಲ್ಲಿ ನೂತನ ಕೆನರಾ ಬ್ಯಾಂಕ್ ಶಾಖೆ ಉದ್ಘಾಟನೆ: ಪ್ರತಿಯೊಬ್ಬರೂ ಬ್ಯಾಂಕ್ ಖಾತೆ ಹೊಂದುವುದು ಅಗತ್ಯ-ಜಿಲ್ಲೆಯ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಮಧುಕರ್ ಶೆಟ್ಟಿ

ಪ್ರತಿ ಐದು ಸಾವಿರ ಜನಸಂಖ್ಯೆಗೆ ಒಂದು ಬ್ಯಾಂಕ್ ಶಾಖೆ ತೆರೆದು, ಹೆಚ್ಚಿನ ವಾಣಿಜ್ಯ ವ್ಯವಹಾರಗಳನ್ನು ಮಾಡುವ ಮೂಲಕ ಆ ಭಾಗವನ್ನು ಅಭಿವೃದ್ಧಿಪಡಿಸಿ ಬಲಿಷ್ಠ ಭಾರತವನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಜನರ ಅನುಕೂಲಕ್ಕಾಗಿ ಬ್ಯಾಂಕ್ ಶಾಖೆಗಳನ್ನು ತೆರೆಯಲಾಗುತ್ತಿದೆ ಎಂದರು.

ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಕೆನರಾ ಬ್ಯಾಂಕ್ ನ ನೂತನ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ನಗದು ರಹಿತ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಪ್ರತಿಯೊಬ್ಬರೂ ಬ್ಯಾಂಕ್ ಖಾತೆಯನ್ನು ಹೊಂದಿದ್ದರೆ ನಗದು ರಹಿತ ವ್ಯವಹಾರ ಮಾಡಬಹುದಾಗಿದೆ. ಇದರಿಂದ ಸಮಯದ ಉಳಿತಾಯ ಹಾಗೂ ಸುರಕ್ಷಿತ ವ್ಯವಹಾರ ಮಾಡಬಹುದಾಗಿದೆ ಎಂದರು.

ಗೃಹ ಸಾಲ, ವಾಣಿಜ್ಯ ಸಾಲ, ಕೃಷಿ ಸಾಲ, ಹೈನುಗಾರಿಕೆ ಸಾಲ ಹಾಗೂ ಇತರೆ ಸಾಲದ ಸೌಲಭ್ಯವಿದ್ದು, ಕೂಲಿ ಕಾರ್ಮಿಕರಿಗೆ ಶೂನ್ಯ ಮೊತ್ತದ ಖಾತೆಗಳನ್ನು ತೆರೆಯಲು ಅವಕಾಶವಿದೆ. ಈ ಮೂಲಕ ಸರ್ಕಾರದ ಅನುದಾನಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಬಹುದಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 45ನೇ ಕೆನರಾ ಬ್ಯಾಂಕ್ ಶಾಖೆ ಇದಾಗಿದೆ, ಕೊನಘಟ್ಟ ಭಾಗದ ಸುತ್ತಮುತ್ತ ಕೈಗಾರಿಕೆ ಚಟುವಟಿಕೆಗಳು ಪ್ರಾರಂಭವಾಗಿದ್ದು, ಜನಸಾಮನ್ಯರಿಗೆ ಬ್ಯಾಂಕ್ ಸೇವೆ ಒದಗಿಸುವ ನಿಟ್ಟಿನಲ್ಲಿ ಈ ಶಾಖೆಯನ್ನು ತೆರೆಯಲಾಗಿದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬ ನಾಗರಿಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಈ ವೇಳೆ ಕಾರ್ಯಕ್ರಮದಲ್ಲಿ ಬೆಂಗಳೂರು ವೃತ್ತ ಕಚೇರಿಯ  ಪ್ರಬಂಧಕ ವ್ಯವಸ್ಥಾಪಕ ಮಹೇಶ್ ಪೈ, ದೇವನಹಳ್ಳಿ ವಲಯ ಕಚೇರಿಯ ವ್ಯವಸ್ಥಾಪಕ ವೆಂಕಟ ರಾಮುಲು, ಕೊನಘಟ್ಟ ಶಾಖೆಯ ವ್ಯವಸ್ಥಾಪಕ ಉದಯ್ ಕಿರಣ್, ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

12 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

21 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

22 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago