ಕೊನಘಟ್ಟದಲ್ಲಿ ನೂತನ ಕೆನರಾ ಬ್ಯಾಂಕ್ ಶಾಖೆ ಉದ್ಘಾಟನೆ: ಪ್ರತಿಯೊಬ್ಬರೂ ಬ್ಯಾಂಕ್ ಖಾತೆ ಹೊಂದುವುದು ಅಗತ್ಯ-ಜಿಲ್ಲೆಯ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಮಧುಕರ್ ಶೆಟ್ಟಿ

ಪ್ರತಿ ಐದು ಸಾವಿರ ಜನಸಂಖ್ಯೆಗೆ ಒಂದು ಬ್ಯಾಂಕ್ ಶಾಖೆ ತೆರೆದು, ಹೆಚ್ಚಿನ ವಾಣಿಜ್ಯ ವ್ಯವಹಾರಗಳನ್ನು ಮಾಡುವ ಮೂಲಕ ಆ ಭಾಗವನ್ನು ಅಭಿವೃದ್ಧಿಪಡಿಸಿ ಬಲಿಷ್ಠ ಭಾರತವನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಜನರ ಅನುಕೂಲಕ್ಕಾಗಿ ಬ್ಯಾಂಕ್ ಶಾಖೆಗಳನ್ನು ತೆರೆಯಲಾಗುತ್ತಿದೆ ಎಂದರು.

ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಕೆನರಾ ಬ್ಯಾಂಕ್ ನ ನೂತನ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ನಗದು ರಹಿತ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಪ್ರತಿಯೊಬ್ಬರೂ ಬ್ಯಾಂಕ್ ಖಾತೆಯನ್ನು ಹೊಂದಿದ್ದರೆ ನಗದು ರಹಿತ ವ್ಯವಹಾರ ಮಾಡಬಹುದಾಗಿದೆ. ಇದರಿಂದ ಸಮಯದ ಉಳಿತಾಯ ಹಾಗೂ ಸುರಕ್ಷಿತ ವ್ಯವಹಾರ ಮಾಡಬಹುದಾಗಿದೆ ಎಂದರು.

ಗೃಹ ಸಾಲ, ವಾಣಿಜ್ಯ ಸಾಲ, ಕೃಷಿ ಸಾಲ, ಹೈನುಗಾರಿಕೆ ಸಾಲ ಹಾಗೂ ಇತರೆ ಸಾಲದ ಸೌಲಭ್ಯವಿದ್ದು, ಕೂಲಿ ಕಾರ್ಮಿಕರಿಗೆ ಶೂನ್ಯ ಮೊತ್ತದ ಖಾತೆಗಳನ್ನು ತೆರೆಯಲು ಅವಕಾಶವಿದೆ. ಈ ಮೂಲಕ ಸರ್ಕಾರದ ಅನುದಾನಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಬಹುದಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 45ನೇ ಕೆನರಾ ಬ್ಯಾಂಕ್ ಶಾಖೆ ಇದಾಗಿದೆ, ಕೊನಘಟ್ಟ ಭಾಗದ ಸುತ್ತಮುತ್ತ ಕೈಗಾರಿಕೆ ಚಟುವಟಿಕೆಗಳು ಪ್ರಾರಂಭವಾಗಿದ್ದು, ಜನಸಾಮನ್ಯರಿಗೆ ಬ್ಯಾಂಕ್ ಸೇವೆ ಒದಗಿಸುವ ನಿಟ್ಟಿನಲ್ಲಿ ಈ ಶಾಖೆಯನ್ನು ತೆರೆಯಲಾಗಿದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬ ನಾಗರಿಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಈ ವೇಳೆ ಕಾರ್ಯಕ್ರಮದಲ್ಲಿ ಬೆಂಗಳೂರು ವೃತ್ತ ಕಚೇರಿಯ  ಪ್ರಬಂಧಕ ವ್ಯವಸ್ಥಾಪಕ ಮಹೇಶ್ ಪೈ, ದೇವನಹಳ್ಳಿ ವಲಯ ಕಚೇರಿಯ ವ್ಯವಸ್ಥಾಪಕ ವೆಂಕಟ ರಾಮುಲು, ಕೊನಘಟ್ಟ ಶಾಖೆಯ ವ್ಯವಸ್ಥಾಪಕ ಉದಯ್ ಕಿರಣ್, ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

3 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

5 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

6 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

11 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

14 hours ago