ಪ್ರತಿ ಐದು ಸಾವಿರ ಜನಸಂಖ್ಯೆಗೆ ಒಂದು ಬ್ಯಾಂಕ್ ಶಾಖೆ ತೆರೆದು, ಹೆಚ್ಚಿನ ವಾಣಿಜ್ಯ ವ್ಯವಹಾರಗಳನ್ನು ಮಾಡುವ ಮೂಲಕ ಆ ಭಾಗವನ್ನು ಅಭಿವೃದ್ಧಿಪಡಿಸಿ ಬಲಿಷ್ಠ ಭಾರತವನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಜನರ ಅನುಕೂಲಕ್ಕಾಗಿ ಬ್ಯಾಂಕ್ ಶಾಖೆಗಳನ್ನು ತೆರೆಯಲಾಗುತ್ತಿದೆ ಎಂದರು.
ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಕೆನರಾ ಬ್ಯಾಂಕ್ ನ ನೂತನ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ನಗದು ರಹಿತ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಪ್ರತಿಯೊಬ್ಬರೂ ಬ್ಯಾಂಕ್ ಖಾತೆಯನ್ನು ಹೊಂದಿದ್ದರೆ ನಗದು ರಹಿತ ವ್ಯವಹಾರ ಮಾಡಬಹುದಾಗಿದೆ. ಇದರಿಂದ ಸಮಯದ ಉಳಿತಾಯ ಹಾಗೂ ಸುರಕ್ಷಿತ ವ್ಯವಹಾರ ಮಾಡಬಹುದಾಗಿದೆ ಎಂದರು.
ಗೃಹ ಸಾಲ, ವಾಣಿಜ್ಯ ಸಾಲ, ಕೃಷಿ ಸಾಲ, ಹೈನುಗಾರಿಕೆ ಸಾಲ ಹಾಗೂ ಇತರೆ ಸಾಲದ ಸೌಲಭ್ಯವಿದ್ದು, ಕೂಲಿ ಕಾರ್ಮಿಕರಿಗೆ ಶೂನ್ಯ ಮೊತ್ತದ ಖಾತೆಗಳನ್ನು ತೆರೆಯಲು ಅವಕಾಶವಿದೆ. ಈ ಮೂಲಕ ಸರ್ಕಾರದ ಅನುದಾನಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಬಹುದಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 45ನೇ ಕೆನರಾ ಬ್ಯಾಂಕ್ ಶಾಖೆ ಇದಾಗಿದೆ, ಕೊನಘಟ್ಟ ಭಾಗದ ಸುತ್ತಮುತ್ತ ಕೈಗಾರಿಕೆ ಚಟುವಟಿಕೆಗಳು ಪ್ರಾರಂಭವಾಗಿದ್ದು, ಜನಸಾಮನ್ಯರಿಗೆ ಬ್ಯಾಂಕ್ ಸೇವೆ ಒದಗಿಸುವ ನಿಟ್ಟಿನಲ್ಲಿ ಈ ಶಾಖೆಯನ್ನು ತೆರೆಯಲಾಗಿದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬ ನಾಗರಿಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ವೇಳೆ ಕಾರ್ಯಕ್ರಮದಲ್ಲಿ ಬೆಂಗಳೂರು ವೃತ್ತ ಕಚೇರಿಯ ಪ್ರಬಂಧಕ ವ್ಯವಸ್ಥಾಪಕ ಮಹೇಶ್ ಪೈ, ದೇವನಹಳ್ಳಿ ವಲಯ ಕಚೇರಿಯ ವ್ಯವಸ್ಥಾಪಕ ವೆಂಕಟ ರಾಮುಲು, ಕೊನಘಟ್ಟ ಶಾಖೆಯ ವ್ಯವಸ್ಥಾಪಕ ಉದಯ್ ಕಿರಣ್, ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…