ಪ್ರತಿ ಐದು ಸಾವಿರ ಜನಸಂಖ್ಯೆಗೆ ಒಂದು ಬ್ಯಾಂಕ್ ಶಾಖೆ ತೆರೆದು, ಹೆಚ್ಚಿನ ವಾಣಿಜ್ಯ ವ್ಯವಹಾರಗಳನ್ನು ಮಾಡುವ ಮೂಲಕ ಆ ಭಾಗವನ್ನು ಅಭಿವೃದ್ಧಿಪಡಿಸಿ ಬಲಿಷ್ಠ ಭಾರತವನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಜನರ ಅನುಕೂಲಕ್ಕಾಗಿ ಬ್ಯಾಂಕ್ ಶಾಖೆಗಳನ್ನು ತೆರೆಯಲಾಗುತ್ತಿದೆ ಎಂದರು.
ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಕೆನರಾ ಬ್ಯಾಂಕ್ ನ ನೂತನ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ನಗದು ರಹಿತ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಪ್ರತಿಯೊಬ್ಬರೂ ಬ್ಯಾಂಕ್ ಖಾತೆಯನ್ನು ಹೊಂದಿದ್ದರೆ ನಗದು ರಹಿತ ವ್ಯವಹಾರ ಮಾಡಬಹುದಾಗಿದೆ. ಇದರಿಂದ ಸಮಯದ ಉಳಿತಾಯ ಹಾಗೂ ಸುರಕ್ಷಿತ ವ್ಯವಹಾರ ಮಾಡಬಹುದಾಗಿದೆ ಎಂದರು.
ಗೃಹ ಸಾಲ, ವಾಣಿಜ್ಯ ಸಾಲ, ಕೃಷಿ ಸಾಲ, ಹೈನುಗಾರಿಕೆ ಸಾಲ ಹಾಗೂ ಇತರೆ ಸಾಲದ ಸೌಲಭ್ಯವಿದ್ದು, ಕೂಲಿ ಕಾರ್ಮಿಕರಿಗೆ ಶೂನ್ಯ ಮೊತ್ತದ ಖಾತೆಗಳನ್ನು ತೆರೆಯಲು ಅವಕಾಶವಿದೆ. ಈ ಮೂಲಕ ಸರ್ಕಾರದ ಅನುದಾನಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಬಹುದಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 45ನೇ ಕೆನರಾ ಬ್ಯಾಂಕ್ ಶಾಖೆ ಇದಾಗಿದೆ, ಕೊನಘಟ್ಟ ಭಾಗದ ಸುತ್ತಮುತ್ತ ಕೈಗಾರಿಕೆ ಚಟುವಟಿಕೆಗಳು ಪ್ರಾರಂಭವಾಗಿದ್ದು, ಜನಸಾಮನ್ಯರಿಗೆ ಬ್ಯಾಂಕ್ ಸೇವೆ ಒದಗಿಸುವ ನಿಟ್ಟಿನಲ್ಲಿ ಈ ಶಾಖೆಯನ್ನು ತೆರೆಯಲಾಗಿದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬ ನಾಗರಿಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ವೇಳೆ ಕಾರ್ಯಕ್ರಮದಲ್ಲಿ ಬೆಂಗಳೂರು ವೃತ್ತ ಕಚೇರಿಯ ಪ್ರಬಂಧಕ ವ್ಯವಸ್ಥಾಪಕ ಮಹೇಶ್ ಪೈ, ದೇವನಹಳ್ಳಿ ವಲಯ ಕಚೇರಿಯ ವ್ಯವಸ್ಥಾಪಕ ವೆಂಕಟ ರಾಮುಲು, ಕೊನಘಟ್ಟ ಶಾಖೆಯ ವ್ಯವಸ್ಥಾಪಕ ಉದಯ್ ಕಿರಣ್, ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…