ಪ್ರತಿ ಐದು ಸಾವಿರ ಜನಸಂಖ್ಯೆಗೆ ಒಂದು ಬ್ಯಾಂಕ್ ಶಾಖೆ ತೆರೆದು, ಹೆಚ್ಚಿನ ವಾಣಿಜ್ಯ ವ್ಯವಹಾರಗಳನ್ನು ಮಾಡುವ ಮೂಲಕ ಆ ಭಾಗವನ್ನು ಅಭಿವೃದ್ಧಿಪಡಿಸಿ ಬಲಿಷ್ಠ ಭಾರತವನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಜನರ ಅನುಕೂಲಕ್ಕಾಗಿ ಬ್ಯಾಂಕ್ ಶಾಖೆಗಳನ್ನು ತೆರೆಯಲಾಗುತ್ತಿದೆ ಎಂದರು.
ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಕೆನರಾ ಬ್ಯಾಂಕ್ ನ ನೂತನ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ನಗದು ರಹಿತ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಪ್ರತಿಯೊಬ್ಬರೂ ಬ್ಯಾಂಕ್ ಖಾತೆಯನ್ನು ಹೊಂದಿದ್ದರೆ ನಗದು ರಹಿತ ವ್ಯವಹಾರ ಮಾಡಬಹುದಾಗಿದೆ. ಇದರಿಂದ ಸಮಯದ ಉಳಿತಾಯ ಹಾಗೂ ಸುರಕ್ಷಿತ ವ್ಯವಹಾರ ಮಾಡಬಹುದಾಗಿದೆ ಎಂದರು.
ಗೃಹ ಸಾಲ, ವಾಣಿಜ್ಯ ಸಾಲ, ಕೃಷಿ ಸಾಲ, ಹೈನುಗಾರಿಕೆ ಸಾಲ ಹಾಗೂ ಇತರೆ ಸಾಲದ ಸೌಲಭ್ಯವಿದ್ದು, ಕೂಲಿ ಕಾರ್ಮಿಕರಿಗೆ ಶೂನ್ಯ ಮೊತ್ತದ ಖಾತೆಗಳನ್ನು ತೆರೆಯಲು ಅವಕಾಶವಿದೆ. ಈ ಮೂಲಕ ಸರ್ಕಾರದ ಅನುದಾನಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಬಹುದಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 45ನೇ ಕೆನರಾ ಬ್ಯಾಂಕ್ ಶಾಖೆ ಇದಾಗಿದೆ, ಕೊನಘಟ್ಟ ಭಾಗದ ಸುತ್ತಮುತ್ತ ಕೈಗಾರಿಕೆ ಚಟುವಟಿಕೆಗಳು ಪ್ರಾರಂಭವಾಗಿದ್ದು, ಜನಸಾಮನ್ಯರಿಗೆ ಬ್ಯಾಂಕ್ ಸೇವೆ ಒದಗಿಸುವ ನಿಟ್ಟಿನಲ್ಲಿ ಈ ಶಾಖೆಯನ್ನು ತೆರೆಯಲಾಗಿದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬ ನಾಗರಿಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ವೇಳೆ ಕಾರ್ಯಕ್ರಮದಲ್ಲಿ ಬೆಂಗಳೂರು ವೃತ್ತ ಕಚೇರಿಯ ಪ್ರಬಂಧಕ ವ್ಯವಸ್ಥಾಪಕ ಮಹೇಶ್ ಪೈ, ದೇವನಹಳ್ಳಿ ವಲಯ ಕಚೇರಿಯ ವ್ಯವಸ್ಥಾಪಕ ವೆಂಕಟ ರಾಮುಲು, ಕೊನಘಟ್ಟ ಶಾಖೆಯ ವ್ಯವಸ್ಥಾಪಕ ಉದಯ್ ಕಿರಣ್, ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…