ಪ್ರತಿ ಐದು ಸಾವಿರ ಜನಸಂಖ್ಯೆಗೆ ಒಂದು ಬ್ಯಾಂಕ್ ಶಾಖೆ ತೆರೆದು, ಹೆಚ್ಚಿನ ವಾಣಿಜ್ಯ ವ್ಯವಹಾರಗಳನ್ನು ಮಾಡುವ ಮೂಲಕ ಆ ಭಾಗವನ್ನು ಅಭಿವೃದ್ಧಿಪಡಿಸಿ ಬಲಿಷ್ಠ ಭಾರತವನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಜನರ ಅನುಕೂಲಕ್ಕಾಗಿ ಬ್ಯಾಂಕ್ ಶಾಖೆಗಳನ್ನು ತೆರೆಯಲಾಗುತ್ತಿದೆ ಎಂದರು.
ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಕೆನರಾ ಬ್ಯಾಂಕ್ ನ ನೂತನ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ನಗದು ರಹಿತ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಪ್ರತಿಯೊಬ್ಬರೂ ಬ್ಯಾಂಕ್ ಖಾತೆಯನ್ನು ಹೊಂದಿದ್ದರೆ ನಗದು ರಹಿತ ವ್ಯವಹಾರ ಮಾಡಬಹುದಾಗಿದೆ. ಇದರಿಂದ ಸಮಯದ ಉಳಿತಾಯ ಹಾಗೂ ಸುರಕ್ಷಿತ ವ್ಯವಹಾರ ಮಾಡಬಹುದಾಗಿದೆ ಎಂದರು.
ಗೃಹ ಸಾಲ, ವಾಣಿಜ್ಯ ಸಾಲ, ಕೃಷಿ ಸಾಲ, ಹೈನುಗಾರಿಕೆ ಸಾಲ ಹಾಗೂ ಇತರೆ ಸಾಲದ ಸೌಲಭ್ಯವಿದ್ದು, ಕೂಲಿ ಕಾರ್ಮಿಕರಿಗೆ ಶೂನ್ಯ ಮೊತ್ತದ ಖಾತೆಗಳನ್ನು ತೆರೆಯಲು ಅವಕಾಶವಿದೆ. ಈ ಮೂಲಕ ಸರ್ಕಾರದ ಅನುದಾನಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಬಹುದಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 45ನೇ ಕೆನರಾ ಬ್ಯಾಂಕ್ ಶಾಖೆ ಇದಾಗಿದೆ, ಕೊನಘಟ್ಟ ಭಾಗದ ಸುತ್ತಮುತ್ತ ಕೈಗಾರಿಕೆ ಚಟುವಟಿಕೆಗಳು ಪ್ರಾರಂಭವಾಗಿದ್ದು, ಜನಸಾಮನ್ಯರಿಗೆ ಬ್ಯಾಂಕ್ ಸೇವೆ ಒದಗಿಸುವ ನಿಟ್ಟಿನಲ್ಲಿ ಈ ಶಾಖೆಯನ್ನು ತೆರೆಯಲಾಗಿದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬ ನಾಗರಿಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ವೇಳೆ ಕಾರ್ಯಕ್ರಮದಲ್ಲಿ ಬೆಂಗಳೂರು ವೃತ್ತ ಕಚೇರಿಯ ಪ್ರಬಂಧಕ ವ್ಯವಸ್ಥಾಪಕ ಮಹೇಶ್ ಪೈ, ದೇವನಹಳ್ಳಿ ವಲಯ ಕಚೇರಿಯ ವ್ಯವಸ್ಥಾಪಕ ವೆಂಕಟ ರಾಮುಲು, ಕೊನಘಟ್ಟ ಶಾಖೆಯ ವ್ಯವಸ್ಥಾಪಕ ಉದಯ್ ಕಿರಣ್, ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…