ಕೊನಘಟ್ಟದ ವೀರಗಲ್ಲು ಹಾಗೂ ಮಾಸ್ತಿಗಲ್ಲು (ವೀರಣೇಶ್ವರ ದೇವಸ್ಥಾನ) ಶಿಲೆಗಳನ್ನು ಜೀರ್ಣೋದ್ಧಾರಕ್ಕಾಗಿ ಸ್ಥಳ ನೀಡುವಂತೆ ಒತ್ತಾಯ: ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಕ್ಯಾರೆ ಎನ್ನದ ಅಧಿಕಾರಿಗಳು: ಗ್ರಾಮಸ್ಥರ ಆಕ್ರೋಶ

ಪುರಾತನ ಕಾಲದ ವೀರಗಲ್ಲುಗಳನ್ನು ಸಂರಕ್ಷಣೆ ಮಾಡಬೇಕೆಂದು ಸರ್ಕಾರದ ಆದೇಶವಿದ್ದು, ಕೊನಘಟ್ಟ ಗ್ರಾಮದಲ್ಲಿರುವ ಪುರಾತನ ಕಾಲದ ವೀರಗಲ್ಲು ಹಾಗೂ ಮಾಸ್ತಿಗಲ್ಲು (ವೀರಣೇಶ್ವರ ದೇವಸ್ಥಾನ) ಶಿಲೆಗಳನ್ನು ಜೀರ್ಣೋದ್ದಾರ ಮಾಡಲು ಸ್ಥಳ ನೀಡುವಂತೆ ಒತ್ತಾಯಿಸಿ ಊರಿನ ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಯಾವ ಕ್ರಮ ಕೈಗೊಂಡಿರುವುದಿಲ್ಲ ಎಂದು ಊರಿನ ಗ್ರಾಮಸ್ಥರು ಆರೋಪಿಸಿದ್ದಾರೆ.

ಸರ್ವೆ ನಂ.361 ಖರಾಬು ಜಾಗ ಆಗಿರುವುದರಿಂದ ಈ ಜಾಗದಲ್ಲಿ ವ್ಯವಸಾಯ ಸಹಕಾರ ಸೇವಾ ಸಂಘ ಇದ್ದು, ಹಾಗೂ ಓವರ್ ಟ್ಯಾಂಕ್ ಇದೆ. ಈ ಜಾಗದಲ್ಲಿ ದೇವಾಸ್ಥಾನ ಸಹ ಇದ್ದು, ಈಗ ದೇವಸ್ಥಾನವು ಶಿಥಿಲಗೊಂಡಿರುತ್ತದೆ. ಇದನ್ನು ಜೀರ್ಣೋದ್ಧಾರ ಮಾಡಬೇಕೆಂದು ಊರಿನ ಗ್ರಾಮಸ್ಥರು 03/11/2023 ರಂದು ಕೊನಘಟ್ಟ ಗ್ರಾಮ ಪಂಚಾಯ್ತಿ, ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ರವರಿಗೆ ಅರ್ಜಿ ಕೊಟ್ಟರೂ ಸಹ ಯಾವುದೇ ಕ್ರಮವನ್ನು ತೆಗೆದುಕೊಂಡಿರುವುದಿಲ್ಲ. ಮತ್ತೆ 06/02/2024ರಂದು ತಹಶೀಲ್ದಾರ್ ರವರಿಗೆ ಮತ್ತೊಂದು ಅರ್ಜಿ ಕೊಟ್ಟರೂ ಸಹ ಇದರ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿರುವುದಿಲ್ಲ. ಈ ಹಿನ್ನೆಲೆ ಇದರ ಬಗ್ಗೆ‌ ಗಮನ ಹರಿಸಬೇಕೆಂದು ಇಂದು ಜಿಲ್ಲಾಧಿಕಾರಿಗೂ ಪತ್ರ ಬರೆಯಲಾಗಿದೆ. ಇನ್ನಾದರೂ ಅಧಿಕಾರಿಗಳು ಕ್ರಮ‌ಕೈಗೊಳ್ಳುತ್ತಾರಾ ಎಂದು ಕಾದುನೋಡಬೇಕಿದೆ….

Ramesh Babu

Journalist

Recent Posts

“ಕುವೆಂಪು”….. ಸಾಹಿತ್ಯ – ವಿಶ್ವ ಮಾನವ ಪ್ರಜ್ಞೆ……

ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…

1 hour ago

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

1 day ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

1 day ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

2 days ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

2 days ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

2 days ago