ಕೊನಘಟ್ಟದ ವೀರಗಲ್ಲು ಹಾಗೂ ಮಾಸ್ತಿಗಲ್ಲು (ವೀರಣೇಶ್ವರ ದೇವಸ್ಥಾನ) ಶಿಲೆಗಳನ್ನು ಜೀರ್ಣೋದ್ಧಾರಕ್ಕಾಗಿ ಸ್ಥಳ ನೀಡುವಂತೆ ಒತ್ತಾಯ: ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಕ್ಯಾರೆ ಎನ್ನದ ಅಧಿಕಾರಿಗಳು: ಗ್ರಾಮಸ್ಥರ ಆಕ್ರೋಶ

ಪುರಾತನ ಕಾಲದ ವೀರಗಲ್ಲುಗಳನ್ನು ಸಂರಕ್ಷಣೆ ಮಾಡಬೇಕೆಂದು ಸರ್ಕಾರದ ಆದೇಶವಿದ್ದು, ಕೊನಘಟ್ಟ ಗ್ರಾಮದಲ್ಲಿರುವ ಪುರಾತನ ಕಾಲದ ವೀರಗಲ್ಲು ಹಾಗೂ ಮಾಸ್ತಿಗಲ್ಲು (ವೀರಣೇಶ್ವರ ದೇವಸ್ಥಾನ) ಶಿಲೆಗಳನ್ನು ಜೀರ್ಣೋದ್ದಾರ ಮಾಡಲು ಸ್ಥಳ ನೀಡುವಂತೆ ಒತ್ತಾಯಿಸಿ ಊರಿನ ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಯಾವ ಕ್ರಮ ಕೈಗೊಂಡಿರುವುದಿಲ್ಲ ಎಂದು ಊರಿನ ಗ್ರಾಮಸ್ಥರು ಆರೋಪಿಸಿದ್ದಾರೆ.

ಸರ್ವೆ ನಂ.361 ಖರಾಬು ಜಾಗ ಆಗಿರುವುದರಿಂದ ಈ ಜಾಗದಲ್ಲಿ ವ್ಯವಸಾಯ ಸಹಕಾರ ಸೇವಾ ಸಂಘ ಇದ್ದು, ಹಾಗೂ ಓವರ್ ಟ್ಯಾಂಕ್ ಇದೆ. ಈ ಜಾಗದಲ್ಲಿ ದೇವಾಸ್ಥಾನ ಸಹ ಇದ್ದು, ಈಗ ದೇವಸ್ಥಾನವು ಶಿಥಿಲಗೊಂಡಿರುತ್ತದೆ. ಇದನ್ನು ಜೀರ್ಣೋದ್ಧಾರ ಮಾಡಬೇಕೆಂದು ಊರಿನ ಗ್ರಾಮಸ್ಥರು 03/11/2023 ರಂದು ಕೊನಘಟ್ಟ ಗ್ರಾಮ ಪಂಚಾಯ್ತಿ, ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ರವರಿಗೆ ಅರ್ಜಿ ಕೊಟ್ಟರೂ ಸಹ ಯಾವುದೇ ಕ್ರಮವನ್ನು ತೆಗೆದುಕೊಂಡಿರುವುದಿಲ್ಲ. ಮತ್ತೆ 06/02/2024ರಂದು ತಹಶೀಲ್ದಾರ್ ರವರಿಗೆ ಮತ್ತೊಂದು ಅರ್ಜಿ ಕೊಟ್ಟರೂ ಸಹ ಇದರ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿರುವುದಿಲ್ಲ. ಈ ಹಿನ್ನೆಲೆ ಇದರ ಬಗ್ಗೆ‌ ಗಮನ ಹರಿಸಬೇಕೆಂದು ಇಂದು ಜಿಲ್ಲಾಧಿಕಾರಿಗೂ ಪತ್ರ ಬರೆಯಲಾಗಿದೆ. ಇನ್ನಾದರೂ ಅಧಿಕಾರಿಗಳು ಕ್ರಮ‌ಕೈಗೊಳ್ಳುತ್ತಾರಾ ಎಂದು ಕಾದುನೋಡಬೇಕಿದೆ….

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

17 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

21 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

21 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago