ಫಾಕ್ಸ್ ಕಾನ್ ಕಂಪನಿಯ ಕಲುಷಿತ ನೀರು ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಕೆರೆಗಳ ಒಡಲು ಸೇರುತ್ತಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಫಾಕ್ಸ್ ಕಾನ್ ಕಂಪನಿ ಬಳಿ ಮಲ ಮಿಶ್ರಿತ, ಇತರೆ ಕಲುಷಿತ ನೀರಿಗಾಗಿಯೇ ಒಂದು ಕುಂಟೆಯನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಆ ಕುಂಟೆಯ ಕಟ್ಟೆಯನ್ನು ಹೊಡೆದು ರಾಜಕಾಲುವೆಗೆ ಹರಿಬಿಡಲಾಗಿದೆ. ಈ ಕಲುಷಿತ ನೀರು ನೇರವಾಗಿ ಕೊನಘಟ್ಟ ಗ್ರಾಮದ ಕೆರೆಗೆ ಹರಿದು ಬರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.
ಸ್ಥಳಕ್ಕೆ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ ಪಂಚಾಯಿತಿ ಸಿಇಒ ಅನುರಾಧಾ, ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ, ತಾ.ಪಂ ಇಓ ಮುನಿರಾಜು, ಗ್ರಾ.ಪಂ ಅಧ್ಯಕ್ಷೆ ಜ್ಯೋತಿ, ಪಿಡಿಓ ರಷ್ಮಿ, ನೂರಾರು ಸಾರ್ವಜನಿಕರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸದ್ಯ ಹೊಡೆದಿರುವ ಕುಂಟೆಯ ಕಟ್ಟೆಯನ್ನು ಮುಚ್ಚುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದರು. ಇಲ್ಲಿನ ತ್ಯಾಜ್ಯ ನೀರು ರಾಜಕಾಲುವೆ ಸೇರಿದಂತೆ ಯಾವುದೇ ಮೂಲಗಳಿಂದ ಹೊರಬಾರದಂತೆ ಸಿಮೆಂಟ್ ವಾಲ್ ನಿರ್ಮಿಸುವಂತೆ ಆಗ್ರಹ ಮಾಡಿದರು.
ಬೆಳಗ್ಗೆ 10 ಗಂಟೆಯಿಂದಲೇ ಜನಪ್ರತಿನಿಧಿ, ಅಧಿಕಾರಿಗಳು. ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು. ಆದರೆ, ಫಾಕ್ಸ್ ಕಾನ್ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಬರುವುದಕ್ಕೆ ಮೀನಾಮೇಷ ಎಣಿಸುತ್ತಿದ್ದರು. ಒಬ್ಬರ ಮೇಲೆ ಮತ್ತೊಬ್ಬರು ಹೇಳಿಕೊಂಡು ಕಾಲಹರಣ ಮಾಡುತ್ತಿದ್ದರು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಏಷ್ಯಾದ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶವಿದೆ. ಇಲ್ಲಿನ ನೂರಾರು ಕಾರ್ಖಾನೆಗಳ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಬಿಡಲಾಗಿತ್ತಿದೆ. ಇದರಿಂದ ಅರ್ಕಾವತಿ ನದಿ ಪಾತ್ರದ ಕೆರೆಗಳು ಸಂಪೂರ್ಣವಾಗಿ ಕಲುಷಿತಗೊಂಡ ಜನ ಜಾನುವಾರು ಕುಡಿಯಲು ಯೋಗ್ಯವಾಗದ ಸ್ಥಿತಿಗೆ ಬಂದು ತಲುಪಿದೆ. ಈ ಕೆರೆಗಳನ್ನು ಶುದ್ಧೀಕರಿಸುವಂತೆ, ಕಾರ್ಖಾನೆಗಳ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನು ಕೆರೆಗಳಿಗೆ ಬಿಡುವವರ ವಿರುದ್ಧ ಕ್ರಮ ಜರುಗಿಸುವಂತೆ ಸ್ಥಳೀಯರು ಅನೇಕ ಹೋರಾಟಗಳು ಮಾಡಿಕೊಂಡು ಬರುತ್ತಿದ್ದಾರೆ. ಈ ಸಮಸ್ಯೆ ಜೊತೆಗೆ ಇದೀಗ ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದ ಕೊನಘಟ್ಟ ಸಮೀಪದಲ್ಲಿನ ಫಾಕ್ಸ್ ಕಾನ್ ಕಂಪನಿ ಮಲ ಮಿಶ್ರಿತ, ಕಲುಷಿತ ನೀರನ್ನು ಸ್ವಚ್ಛವಾಗಿರುವ ಕೊನಘಟ್ಟ ಕೆರೆಗೆ ಹರಿಬಿಟ್ಟಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಪ್ರಾರಂಭದಲ್ಲಿ ಇದಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…