ಕೊನಘಟ್ಟ ಕೆರೆ ಒಡಲು ಸೇರುತ್ತಿರುವ ಫಾಕ್ಸ್ ಕಾನ್ ಕಂಪನಿ ಕಲುಷಿತ ನೀರು: ಸ್ಥಳೀಯರಲ್ಲಿ ಮನೆ ಮಾಡಿದ ಆತಂಕ: ಸ್ಥಳಕ್ಕೆ ಶಾಸಕ ಧೀರಜ್ ಮುನಿರಾಜ್ ಭೇಟಿ, ಪರಿಶೀಲನೆ: ಫಾಕ್ಸ್ ಕಾನ್ ಕಂಪನಿಯ ಸಿಬ್ಬಂದಿಗೆ ತರಾಟೆ

ಫಾಕ್ಸ್ ಕಾನ್ ಕಂಪನಿಯ ಕಲುಷಿತ ನೀರು ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಕೆರೆಗಳ ಒಡಲು ಸೇರುತ್ತಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಫಾಕ್ಸ್ ಕಾನ್ ಕಂಪನಿ ಬಳಿ ಮಲ ಮಿಶ್ರಿತ, ಇತರೆ ಕಲುಷಿತ ನೀರಿಗಾಗಿಯೇ‌ ಒಂದು  ಕುಂಟೆಯನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಆ‌ ಕುಂಟೆಯ ಕಟ್ಟೆಯನ್ನು ಹೊಡೆದು ರಾಜಕಾಲುವೆಗೆ ಹರಿಬಿಡಲಾಗಿದೆ. ಈ ಕಲುಷಿತ ನೀರು ನೇರವಾಗಿ ಕೊನಘಟ್ಟ ಗ್ರಾಮದ ಕೆರೆಗೆ ಹರಿದು ಬರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.

ಸ್ಥಳಕ್ಕೆ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ‌ ಪಂಚಾಯಿತಿ ಸಿಇಒ ಅನುರಾಧಾ, ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ, ತಾ.ಪಂ ಇಓ ಮುನಿರಾಜು, ಗ್ರಾ.ಪಂ ಅಧ್ಯಕ್ಷೆ ಜ್ಯೋತಿ, ಪಿಡಿಓ ರಷ್ಮಿ, ನೂರಾರು ಸಾರ್ವಜನಿಕರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸದ್ಯ ಹೊಡೆದಿರುವ ಕುಂಟೆಯ ಕಟ್ಟೆಯನ್ನು ಮುಚ್ಚುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದರು. ಇಲ್ಲಿನ ತ್ಯಾಜ್ಯ ನೀರು ರಾಜಕಾಲುವೆ ಸೇರಿದಂತೆ ಯಾವುದೇ ಮೂಲಗಳಿಂದ ಹೊರಬಾರದಂತೆ ಸಿಮೆಂಟ್ ವಾಲ್ ನಿರ್ಮಿಸುವಂತೆ ಆಗ್ರಹ ಮಾಡಿದರು.

ಆದರೆ, ಶಾಸಕ ಧೀರಜ್ ಮುನಿರಾಜ್, ಅಧಿಕಾರಿಗಳ ಆಗ್ರಹಕ್ಕೆ ಫಾಕ್ಸ್ ಕಾನ್ ಸಿಬ್ಬಂದಿ ಕ್ಯಾರೆ ಎನ್ನದಿರುವುದಕ್ಕೆ ಸ್ಥಳೀಯರು, ಹಾಗೂ ಶಾಸಕರ ಇನ್ನಷ್ಟು ಆಕ್ರೋಶಕ್ಕೆ  ಕಾರಣವಾಗಿತ್ತು.

ಬೆಳಗ್ಗೆ 10 ಗಂಟೆಯಿಂದಲೇ ಜನಪ್ರತಿನಿಧಿ, ಅಧಿಕಾರಿಗಳು. ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು. ಆದರೆ, ಫಾಕ್ಸ್ ಕಾನ್ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಬರುವುದಕ್ಕೆ ಮೀನಾಮೇಷ ಎಣಿಸುತ್ತಿದ್ದರು. ಒಬ್ಬರ ಮೇಲೆ ಮತ್ತೊಬ್ಬರು ಹೇಳಿಕೊಂಡು ಕಾಲಹರಣ ಮಾಡುತ್ತಿದ್ದರು.

ಹರಿಯುತ್ತಿರುವ ಕಲುಷಿತ ನೀರು ನಿಲ್ಲುವವರೆಗೂ ಸ್ಥಳದಿಂದ ಹೊರಡುವುದಿಲ್ಲ ಎಂದು ಶಾಸಕ ಧೀರಜ್ ಮುನಿರಾಜ್ ಅವರು ಪಟ್ಟುಹಿಡಿದಿದ್ದರು.

ದೊಡ್ಡಬಳ್ಳಾಪುರ‌ದ ಬಾಶೆಟ್ಟಿಹಳ್ಳಿಯಲ್ಲಿ ಏಷ್ಯಾದ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶವಿದೆ. ಇಲ್ಲಿನ ನೂರಾರು ಕಾರ್ಖಾನೆಗಳ‌ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಬಿಡಲಾಗಿತ್ತಿದೆ. ಇದರಿಂದ ಅರ್ಕಾವತಿ ನದಿ ಪಾತ್ರದ ಕೆರೆಗಳು ಸಂಪೂರ್ಣವಾಗಿ ಕಲುಷಿತಗೊಂಡ ಜನ ಜಾನುವಾರು‌ ಕುಡಿಯಲು ಯೋಗ್ಯವಾಗದ ಸ್ಥಿತಿಗೆ ಬಂದು ತಲುಪಿದೆ‌. ಈ ಕೆರೆಗಳನ್ನು ಶುದ್ಧೀಕರಿಸುವಂತೆ, ಕಾರ್ಖಾನೆಗಳ‌ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನು ಕೆರೆಗಳಿಗೆ ಬಿಡುವವರ ವಿರುದ್ಧ ಕ್ರಮ ಜರುಗಿಸುವಂತೆ ಸ್ಥಳೀಯರು ಅನೇಕ ಹೋರಾಟಗಳು ಮಾಡಿಕೊಂಡು ಬರುತ್ತಿದ್ದಾರೆ. ಈ ಸಮಸ್ಯೆ ಜೊತೆಗೆ ಇದೀಗ ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದ ಕೊನಘಟ್ಟ ಸಮೀಪದಲ್ಲಿನ ಫಾಕ್ಸ್ ಕಾನ್ ಕಂಪನಿ ಮಲ ಮಿಶ್ರಿತ, ಕಲುಷಿತ ನೀರನ್ನು ಸ್ವಚ್ಛವಾಗಿರುವ ಕೊನಘಟ್ಟ ಕೆರೆಗೆ ಹರಿಬಿಟ್ಟಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಪ್ರಾರಂಭದಲ್ಲಿ ಇದಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

ಸ್ವಚ್ಛವಾಗಿರುವ ಜಲ ಮೂಲಗಳು ಕಾರ್ಖಾನೆಗಳ ಕಲುಷಿತ ನೀರಿನಿಂದ ಕಲುಷಿತಗೊಂಡರೆ ಭವಿಷ್ಯದಲ್ಲಿ ದೊಡ್ಡಬಳ್ಳಾಪುರ ಜನರ ಜೀವನ ಅದೋಗತಿಗೆ ಬಂದು ತಲುಪುತ್ತದೆ. ತಾಲೂಕಿನ ಜನರು ಅನಾರೋಗ್ಯದಿಂದ ಬಳಲಿ ಸಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಮುಂದಿನ‌ ಪೀಳಿಗೆ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

8 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

10 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

11 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

1 day ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

1 day ago