ಫಾಕ್ಸ್ ಕಾನ್ ಕಂಪನಿಯ ಕಲುಷಿತ ನೀರು ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಕೆರೆಗಳ ಒಡಲು ಸೇರುತ್ತಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಫಾಕ್ಸ್ ಕಾನ್ ಕಂಪನಿ ಬಳಿ ಮಲ ಮಿಶ್ರಿತ, ಇತರೆ ಕಲುಷಿತ ನೀರಿಗಾಗಿಯೇ ಒಂದು ಕುಂಟೆಯನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಆ ಕುಂಟೆಯ ಕಟ್ಟೆಯನ್ನು ಹೊಡೆದು ರಾಜಕಾಲುವೆಗೆ ಹರಿಬಿಡಲಾಗಿದೆ. ಈ ಕಲುಷಿತ ನೀರು ನೇರವಾಗಿ ಕೊನಘಟ್ಟ ಗ್ರಾಮದ ಕೆರೆಗೆ ಹರಿದು ಬರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.
ಸ್ಥಳಕ್ಕೆ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ ಪಂಚಾಯಿತಿ ಸಿಇಒ ಅನುರಾಧಾ, ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ, ತಾ.ಪಂ ಇಓ ಮುನಿರಾಜು, ಗ್ರಾ.ಪಂ ಅಧ್ಯಕ್ಷೆ ಜ್ಯೋತಿ, ಪಿಡಿಓ ರಷ್ಮಿ, ನೂರಾರು ಸಾರ್ವಜನಿಕರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸದ್ಯ ಹೊಡೆದಿರುವ ಕುಂಟೆಯ ಕಟ್ಟೆಯನ್ನು ಮುಚ್ಚುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದರು. ಇಲ್ಲಿನ ತ್ಯಾಜ್ಯ ನೀರು ರಾಜಕಾಲುವೆ ಸೇರಿದಂತೆ ಯಾವುದೇ ಮೂಲಗಳಿಂದ ಹೊರಬಾರದಂತೆ ಸಿಮೆಂಟ್ ವಾಲ್ ನಿರ್ಮಿಸುವಂತೆ ಆಗ್ರಹ ಮಾಡಿದರು.
ಬೆಳಗ್ಗೆ 10 ಗಂಟೆಯಿಂದಲೇ ಜನಪ್ರತಿನಿಧಿ, ಅಧಿಕಾರಿಗಳು. ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು. ಆದರೆ, ಫಾಕ್ಸ್ ಕಾನ್ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಬರುವುದಕ್ಕೆ ಮೀನಾಮೇಷ ಎಣಿಸುತ್ತಿದ್ದರು. ಒಬ್ಬರ ಮೇಲೆ ಮತ್ತೊಬ್ಬರು ಹೇಳಿಕೊಂಡು ಕಾಲಹರಣ ಮಾಡುತ್ತಿದ್ದರು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಏಷ್ಯಾದ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶವಿದೆ. ಇಲ್ಲಿನ ನೂರಾರು ಕಾರ್ಖಾನೆಗಳ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಬಿಡಲಾಗಿತ್ತಿದೆ. ಇದರಿಂದ ಅರ್ಕಾವತಿ ನದಿ ಪಾತ್ರದ ಕೆರೆಗಳು ಸಂಪೂರ್ಣವಾಗಿ ಕಲುಷಿತಗೊಂಡ ಜನ ಜಾನುವಾರು ಕುಡಿಯಲು ಯೋಗ್ಯವಾಗದ ಸ್ಥಿತಿಗೆ ಬಂದು ತಲುಪಿದೆ. ಈ ಕೆರೆಗಳನ್ನು ಶುದ್ಧೀಕರಿಸುವಂತೆ, ಕಾರ್ಖಾನೆಗಳ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನು ಕೆರೆಗಳಿಗೆ ಬಿಡುವವರ ವಿರುದ್ಧ ಕ್ರಮ ಜರುಗಿಸುವಂತೆ ಸ್ಥಳೀಯರು ಅನೇಕ ಹೋರಾಟಗಳು ಮಾಡಿಕೊಂಡು ಬರುತ್ತಿದ್ದಾರೆ. ಈ ಸಮಸ್ಯೆ ಜೊತೆಗೆ ಇದೀಗ ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದ ಕೊನಘಟ್ಟ ಸಮೀಪದಲ್ಲಿನ ಫಾಕ್ಸ್ ಕಾನ್ ಕಂಪನಿ ಮಲ ಮಿಶ್ರಿತ, ಕಲುಷಿತ ನೀರನ್ನು ಸ್ವಚ್ಛವಾಗಿರುವ ಕೊನಘಟ್ಟ ಕೆರೆಗೆ ಹರಿಬಿಟ್ಟಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಪ್ರಾರಂಭದಲ್ಲಿ ಇದಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…
ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…