ಕೊನಘಟ್ಟ ಕೆರೆ ಒಡಲು ಸೇರುತ್ತಿರುವ ಫಾಕ್ಸ್ ಕಾನ್ ಕಂಪನಿ ಕಲುಷಿತ ನೀರು: ಸ್ಥಳೀಯರಲ್ಲಿ ಮನೆ ಮಾಡಿದ ಆತಂಕ: ಸ್ಥಳಕ್ಕೆ ಶಾಸಕ ಧೀರಜ್ ಮುನಿರಾಜ್ ಭೇಟಿ, ಪರಿಶೀಲನೆ: ಫಾಕ್ಸ್ ಕಾನ್ ಕಂಪನಿಯ ಸಿಬ್ಬಂದಿಗೆ ತರಾಟೆ

ಫಾಕ್ಸ್ ಕಾನ್ ಕಂಪನಿಯ ಕಲುಷಿತ ನೀರು ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಕೆರೆಗಳ ಒಡಲು ಸೇರುತ್ತಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಫಾಕ್ಸ್ ಕಾನ್ ಕಂಪನಿ ಬಳಿ ಮಲ ಮಿಶ್ರಿತ, ಇತರೆ ಕಲುಷಿತ ನೀರಿಗಾಗಿಯೇ‌ ಒಂದು  ಕುಂಟೆಯನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಆ‌ ಕುಂಟೆಯ ಕಟ್ಟೆಯನ್ನು ಹೊಡೆದು ರಾಜಕಾಲುವೆಗೆ ಹರಿಬಿಡಲಾಗಿದೆ. ಈ ಕಲುಷಿತ ನೀರು ನೇರವಾಗಿ ಕೊನಘಟ್ಟ ಗ್ರಾಮದ ಕೆರೆಗೆ ಹರಿದು ಬರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.

ಸ್ಥಳಕ್ಕೆ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ‌ ಪಂಚಾಯಿತಿ ಸಿಇಒ ಅನುರಾಧಾ, ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ, ತಾ.ಪಂ ಇಓ ಮುನಿರಾಜು, ಗ್ರಾ.ಪಂ ಅಧ್ಯಕ್ಷೆ ಜ್ಯೋತಿ, ಪಿಡಿಓ ರಷ್ಮಿ, ನೂರಾರು ಸಾರ್ವಜನಿಕರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸದ್ಯ ಹೊಡೆದಿರುವ ಕುಂಟೆಯ ಕಟ್ಟೆಯನ್ನು ಮುಚ್ಚುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದರು. ಇಲ್ಲಿನ ತ್ಯಾಜ್ಯ ನೀರು ರಾಜಕಾಲುವೆ ಸೇರಿದಂತೆ ಯಾವುದೇ ಮೂಲಗಳಿಂದ ಹೊರಬಾರದಂತೆ ಸಿಮೆಂಟ್ ವಾಲ್ ನಿರ್ಮಿಸುವಂತೆ ಆಗ್ರಹ ಮಾಡಿದರು.

ಆದರೆ, ಶಾಸಕ ಧೀರಜ್ ಮುನಿರಾಜ್, ಅಧಿಕಾರಿಗಳ ಆಗ್ರಹಕ್ಕೆ ಫಾಕ್ಸ್ ಕಾನ್ ಸಿಬ್ಬಂದಿ ಕ್ಯಾರೆ ಎನ್ನದಿರುವುದಕ್ಕೆ ಸ್ಥಳೀಯರು, ಹಾಗೂ ಶಾಸಕರ ಇನ್ನಷ್ಟು ಆಕ್ರೋಶಕ್ಕೆ  ಕಾರಣವಾಗಿತ್ತು.

ಬೆಳಗ್ಗೆ 10 ಗಂಟೆಯಿಂದಲೇ ಜನಪ್ರತಿನಿಧಿ, ಅಧಿಕಾರಿಗಳು. ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು. ಆದರೆ, ಫಾಕ್ಸ್ ಕಾನ್ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಬರುವುದಕ್ಕೆ ಮೀನಾಮೇಷ ಎಣಿಸುತ್ತಿದ್ದರು. ಒಬ್ಬರ ಮೇಲೆ ಮತ್ತೊಬ್ಬರು ಹೇಳಿಕೊಂಡು ಕಾಲಹರಣ ಮಾಡುತ್ತಿದ್ದರು.

ಹರಿಯುತ್ತಿರುವ ಕಲುಷಿತ ನೀರು ನಿಲ್ಲುವವರೆಗೂ ಸ್ಥಳದಿಂದ ಹೊರಡುವುದಿಲ್ಲ ಎಂದು ಶಾಸಕ ಧೀರಜ್ ಮುನಿರಾಜ್ ಅವರು ಪಟ್ಟುಹಿಡಿದಿದ್ದರು.

ದೊಡ್ಡಬಳ್ಳಾಪುರ‌ದ ಬಾಶೆಟ್ಟಿಹಳ್ಳಿಯಲ್ಲಿ ಏಷ್ಯಾದ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶವಿದೆ. ಇಲ್ಲಿನ ನೂರಾರು ಕಾರ್ಖಾನೆಗಳ‌ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಬಿಡಲಾಗಿತ್ತಿದೆ. ಇದರಿಂದ ಅರ್ಕಾವತಿ ನದಿ ಪಾತ್ರದ ಕೆರೆಗಳು ಸಂಪೂರ್ಣವಾಗಿ ಕಲುಷಿತಗೊಂಡ ಜನ ಜಾನುವಾರು‌ ಕುಡಿಯಲು ಯೋಗ್ಯವಾಗದ ಸ್ಥಿತಿಗೆ ಬಂದು ತಲುಪಿದೆ‌. ಈ ಕೆರೆಗಳನ್ನು ಶುದ್ಧೀಕರಿಸುವಂತೆ, ಕಾರ್ಖಾನೆಗಳ‌ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನು ಕೆರೆಗಳಿಗೆ ಬಿಡುವವರ ವಿರುದ್ಧ ಕ್ರಮ ಜರುಗಿಸುವಂತೆ ಸ್ಥಳೀಯರು ಅನೇಕ ಹೋರಾಟಗಳು ಮಾಡಿಕೊಂಡು ಬರುತ್ತಿದ್ದಾರೆ. ಈ ಸಮಸ್ಯೆ ಜೊತೆಗೆ ಇದೀಗ ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದ ಕೊನಘಟ್ಟ ಸಮೀಪದಲ್ಲಿನ ಫಾಕ್ಸ್ ಕಾನ್ ಕಂಪನಿ ಮಲ ಮಿಶ್ರಿತ, ಕಲುಷಿತ ನೀರನ್ನು ಸ್ವಚ್ಛವಾಗಿರುವ ಕೊನಘಟ್ಟ ಕೆರೆಗೆ ಹರಿಬಿಟ್ಟಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಪ್ರಾರಂಭದಲ್ಲಿ ಇದಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

ಸ್ವಚ್ಛವಾಗಿರುವ ಜಲ ಮೂಲಗಳು ಕಾರ್ಖಾನೆಗಳ ಕಲುಷಿತ ನೀರಿನಿಂದ ಕಲುಷಿತಗೊಂಡರೆ ಭವಿಷ್ಯದಲ್ಲಿ ದೊಡ್ಡಬಳ್ಳಾಪುರ ಜನರ ಜೀವನ ಅದೋಗತಿಗೆ ಬಂದು ತಲುಪುತ್ತದೆ. ತಾಲೂಕಿನ ಜನರು ಅನಾರೋಗ್ಯದಿಂದ ಬಳಲಿ ಸಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಮುಂದಿನ‌ ಪೀಳಿಗೆ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

2 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

7 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

7 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

12 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

23 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

24 hours ago