ಕೊನಘಟ್ಟ ಕೆರೆ ಒಡಲು ಸೇರುತ್ತಿರುವ ಫಾಕ್ಸ್ ಕಾನ್ ಕಂಪನಿ ಕಲುಷಿತ ನೀರು: ಸ್ಥಳೀಯರಲ್ಲಿ ಮನೆ ಮಾಡಿದ ಆತಂಕ: ಸ್ಥಳಕ್ಕೆ ಶಾಸಕ ಧೀರಜ್ ಮುನಿರಾಜ್ ಭೇಟಿ, ಪರಿಶೀಲನೆ: ಫಾಕ್ಸ್ ಕಾನ್ ಕಂಪನಿಯ ಸಿಬ್ಬಂದಿಗೆ ತರಾಟೆ

ಫಾಕ್ಸ್ ಕಾನ್ ಕಂಪನಿಯ ಕಲುಷಿತ ನೀರು ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಕೆರೆಗಳ ಒಡಲು ಸೇರುತ್ತಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಫಾಕ್ಸ್ ಕಾನ್ ಕಂಪನಿ ಬಳಿ ಮಲ ಮಿಶ್ರಿತ, ಇತರೆ ಕಲುಷಿತ ನೀರಿಗಾಗಿಯೇ‌ ಒಂದು  ಕುಂಟೆಯನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಆ‌ ಕುಂಟೆಯ ಕಟ್ಟೆಯನ್ನು ಹೊಡೆದು ರಾಜಕಾಲುವೆಗೆ ಹರಿಬಿಡಲಾಗಿದೆ. ಈ ಕಲುಷಿತ ನೀರು ನೇರವಾಗಿ ಕೊನಘಟ್ಟ ಗ್ರಾಮದ ಕೆರೆಗೆ ಹರಿದು ಬರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.

ಸ್ಥಳಕ್ಕೆ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ‌ ಪಂಚಾಯಿತಿ ಸಿಇಒ ಅನುರಾಧಾ, ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ, ತಾ.ಪಂ ಇಓ ಮುನಿರಾಜು, ಗ್ರಾ.ಪಂ ಅಧ್ಯಕ್ಷೆ ಜ್ಯೋತಿ, ಪಿಡಿಓ ರಷ್ಮಿ, ನೂರಾರು ಸಾರ್ವಜನಿಕರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸದ್ಯ ಹೊಡೆದಿರುವ ಕುಂಟೆಯ ಕಟ್ಟೆಯನ್ನು ಮುಚ್ಚುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದರು. ಇಲ್ಲಿನ ತ್ಯಾಜ್ಯ ನೀರು ರಾಜಕಾಲುವೆ ಸೇರಿದಂತೆ ಯಾವುದೇ ಮೂಲಗಳಿಂದ ಹೊರಬಾರದಂತೆ ಸಿಮೆಂಟ್ ವಾಲ್ ನಿರ್ಮಿಸುವಂತೆ ಆಗ್ರಹ ಮಾಡಿದರು.

ಆದರೆ, ಶಾಸಕ ಧೀರಜ್ ಮುನಿರಾಜ್, ಅಧಿಕಾರಿಗಳ ಆಗ್ರಹಕ್ಕೆ ಫಾಕ್ಸ್ ಕಾನ್ ಸಿಬ್ಬಂದಿ ಕ್ಯಾರೆ ಎನ್ನದಿರುವುದಕ್ಕೆ ಸ್ಥಳೀಯರು, ಹಾಗೂ ಶಾಸಕರ ಇನ್ನಷ್ಟು ಆಕ್ರೋಶಕ್ಕೆ  ಕಾರಣವಾಗಿತ್ತು.

ಬೆಳಗ್ಗೆ 10 ಗಂಟೆಯಿಂದಲೇ ಜನಪ್ರತಿನಿಧಿ, ಅಧಿಕಾರಿಗಳು. ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು. ಆದರೆ, ಫಾಕ್ಸ್ ಕಾನ್ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಬರುವುದಕ್ಕೆ ಮೀನಾಮೇಷ ಎಣಿಸುತ್ತಿದ್ದರು. ಒಬ್ಬರ ಮೇಲೆ ಮತ್ತೊಬ್ಬರು ಹೇಳಿಕೊಂಡು ಕಾಲಹರಣ ಮಾಡುತ್ತಿದ್ದರು.

ಹರಿಯುತ್ತಿರುವ ಕಲುಷಿತ ನೀರು ನಿಲ್ಲುವವರೆಗೂ ಸ್ಥಳದಿಂದ ಹೊರಡುವುದಿಲ್ಲ ಎಂದು ಶಾಸಕ ಧೀರಜ್ ಮುನಿರಾಜ್ ಅವರು ಪಟ್ಟುಹಿಡಿದಿದ್ದರು.

ದೊಡ್ಡಬಳ್ಳಾಪುರ‌ದ ಬಾಶೆಟ್ಟಿಹಳ್ಳಿಯಲ್ಲಿ ಏಷ್ಯಾದ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶವಿದೆ. ಇಲ್ಲಿನ ನೂರಾರು ಕಾರ್ಖಾನೆಗಳ‌ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಬಿಡಲಾಗಿತ್ತಿದೆ. ಇದರಿಂದ ಅರ್ಕಾವತಿ ನದಿ ಪಾತ್ರದ ಕೆರೆಗಳು ಸಂಪೂರ್ಣವಾಗಿ ಕಲುಷಿತಗೊಂಡ ಜನ ಜಾನುವಾರು‌ ಕುಡಿಯಲು ಯೋಗ್ಯವಾಗದ ಸ್ಥಿತಿಗೆ ಬಂದು ತಲುಪಿದೆ‌. ಈ ಕೆರೆಗಳನ್ನು ಶುದ್ಧೀಕರಿಸುವಂತೆ, ಕಾರ್ಖಾನೆಗಳ‌ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನು ಕೆರೆಗಳಿಗೆ ಬಿಡುವವರ ವಿರುದ್ಧ ಕ್ರಮ ಜರುಗಿಸುವಂತೆ ಸ್ಥಳೀಯರು ಅನೇಕ ಹೋರಾಟಗಳು ಮಾಡಿಕೊಂಡು ಬರುತ್ತಿದ್ದಾರೆ. ಈ ಸಮಸ್ಯೆ ಜೊತೆಗೆ ಇದೀಗ ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದ ಕೊನಘಟ್ಟ ಸಮೀಪದಲ್ಲಿನ ಫಾಕ್ಸ್ ಕಾನ್ ಕಂಪನಿ ಮಲ ಮಿಶ್ರಿತ, ಕಲುಷಿತ ನೀರನ್ನು ಸ್ವಚ್ಛವಾಗಿರುವ ಕೊನಘಟ್ಟ ಕೆರೆಗೆ ಹರಿಬಿಟ್ಟಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಪ್ರಾರಂಭದಲ್ಲಿ ಇದಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

ಸ್ವಚ್ಛವಾಗಿರುವ ಜಲ ಮೂಲಗಳು ಕಾರ್ಖಾನೆಗಳ ಕಲುಷಿತ ನೀರಿನಿಂದ ಕಲುಷಿತಗೊಂಡರೆ ಭವಿಷ್ಯದಲ್ಲಿ ದೊಡ್ಡಬಳ್ಳಾಪುರ ಜನರ ಜೀವನ ಅದೋಗತಿಗೆ ಬಂದು ತಲುಪುತ್ತದೆ. ತಾಲೂಕಿನ ಜನರು ಅನಾರೋಗ್ಯದಿಂದ ಬಳಲಿ ಸಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಮುಂದಿನ‌ ಪೀಳಿಗೆ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

3 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

5 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

8 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

9 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

21 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

21 hours ago