ಕೊನಘಟ್ಟ ಕೆರೆ ಒಡಲು ಸೇರುತ್ತಿರುವ ಫಾಕ್ಸ್ ಕಾನ್ ಕಂಪನಿ ಕಲುಷಿತ ನೀರು: ಸ್ಥಳೀಯರಲ್ಲಿ ಮನೆ ಮಾಡಿದ ಆತಂಕ: ಸ್ಥಳಕ್ಕೆ ಶಾಸಕ ಧೀರಜ್ ಮುನಿರಾಜ್ ಭೇಟಿ, ಪರಿಶೀಲನೆ: ಫಾಕ್ಸ್ ಕಾನ್ ಕಂಪನಿಯ ಸಿಬ್ಬಂದಿಗೆ ತರಾಟೆ

ಫಾಕ್ಸ್ ಕಾನ್ ಕಂಪನಿಯ ಕಲುಷಿತ ನೀರು ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಕೆರೆಗಳ ಒಡಲು ಸೇರುತ್ತಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಫಾಕ್ಸ್ ಕಾನ್ ಕಂಪನಿ ಬಳಿ ಮಲ ಮಿಶ್ರಿತ, ಇತರೆ ಕಲುಷಿತ ನೀರಿಗಾಗಿಯೇ‌ ಒಂದು  ಕುಂಟೆಯನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಆ‌ ಕುಂಟೆಯ ಕಟ್ಟೆಯನ್ನು ಹೊಡೆದು ರಾಜಕಾಲುವೆಗೆ ಹರಿಬಿಡಲಾಗಿದೆ. ಈ ಕಲುಷಿತ ನೀರು ನೇರವಾಗಿ ಕೊನಘಟ್ಟ ಗ್ರಾಮದ ಕೆರೆಗೆ ಹರಿದು ಬರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.

ಸ್ಥಳಕ್ಕೆ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ‌ ಪಂಚಾಯಿತಿ ಸಿಇಒ ಅನುರಾಧಾ, ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ, ತಾ.ಪಂ ಇಓ ಮುನಿರಾಜು, ಗ್ರಾ.ಪಂ ಅಧ್ಯಕ್ಷೆ ಜ್ಯೋತಿ, ಪಿಡಿಓ ರಷ್ಮಿ, ನೂರಾರು ಸಾರ್ವಜನಿಕರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸದ್ಯ ಹೊಡೆದಿರುವ ಕುಂಟೆಯ ಕಟ್ಟೆಯನ್ನು ಮುಚ್ಚುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದರು. ಇಲ್ಲಿನ ತ್ಯಾಜ್ಯ ನೀರು ರಾಜಕಾಲುವೆ ಸೇರಿದಂತೆ ಯಾವುದೇ ಮೂಲಗಳಿಂದ ಹೊರಬಾರದಂತೆ ಸಿಮೆಂಟ್ ವಾಲ್ ನಿರ್ಮಿಸುವಂತೆ ಆಗ್ರಹ ಮಾಡಿದರು.

ಆದರೆ, ಶಾಸಕ ಧೀರಜ್ ಮುನಿರಾಜ್, ಅಧಿಕಾರಿಗಳ ಆಗ್ರಹಕ್ಕೆ ಫಾಕ್ಸ್ ಕಾನ್ ಸಿಬ್ಬಂದಿ ಕ್ಯಾರೆ ಎನ್ನದಿರುವುದಕ್ಕೆ ಸ್ಥಳೀಯರು, ಹಾಗೂ ಶಾಸಕರ ಇನ್ನಷ್ಟು ಆಕ್ರೋಶಕ್ಕೆ  ಕಾರಣವಾಗಿತ್ತು.

ಬೆಳಗ್ಗೆ 10 ಗಂಟೆಯಿಂದಲೇ ಜನಪ್ರತಿನಿಧಿ, ಅಧಿಕಾರಿಗಳು. ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು. ಆದರೆ, ಫಾಕ್ಸ್ ಕಾನ್ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಬರುವುದಕ್ಕೆ ಮೀನಾಮೇಷ ಎಣಿಸುತ್ತಿದ್ದರು. ಒಬ್ಬರ ಮೇಲೆ ಮತ್ತೊಬ್ಬರು ಹೇಳಿಕೊಂಡು ಕಾಲಹರಣ ಮಾಡುತ್ತಿದ್ದರು.

ಹರಿಯುತ್ತಿರುವ ಕಲುಷಿತ ನೀರು ನಿಲ್ಲುವವರೆಗೂ ಸ್ಥಳದಿಂದ ಹೊರಡುವುದಿಲ್ಲ ಎಂದು ಶಾಸಕ ಧೀರಜ್ ಮುನಿರಾಜ್ ಅವರು ಪಟ್ಟುಹಿಡಿದಿದ್ದರು.

ದೊಡ್ಡಬಳ್ಳಾಪುರ‌ದ ಬಾಶೆಟ್ಟಿಹಳ್ಳಿಯಲ್ಲಿ ಏಷ್ಯಾದ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶವಿದೆ. ಇಲ್ಲಿನ ನೂರಾರು ಕಾರ್ಖಾನೆಗಳ‌ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಬಿಡಲಾಗಿತ್ತಿದೆ. ಇದರಿಂದ ಅರ್ಕಾವತಿ ನದಿ ಪಾತ್ರದ ಕೆರೆಗಳು ಸಂಪೂರ್ಣವಾಗಿ ಕಲುಷಿತಗೊಂಡ ಜನ ಜಾನುವಾರು‌ ಕುಡಿಯಲು ಯೋಗ್ಯವಾಗದ ಸ್ಥಿತಿಗೆ ಬಂದು ತಲುಪಿದೆ‌. ಈ ಕೆರೆಗಳನ್ನು ಶುದ್ಧೀಕರಿಸುವಂತೆ, ಕಾರ್ಖಾನೆಗಳ‌ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನು ಕೆರೆಗಳಿಗೆ ಬಿಡುವವರ ವಿರುದ್ಧ ಕ್ರಮ ಜರುಗಿಸುವಂತೆ ಸ್ಥಳೀಯರು ಅನೇಕ ಹೋರಾಟಗಳು ಮಾಡಿಕೊಂಡು ಬರುತ್ತಿದ್ದಾರೆ. ಈ ಸಮಸ್ಯೆ ಜೊತೆಗೆ ಇದೀಗ ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದ ಕೊನಘಟ್ಟ ಸಮೀಪದಲ್ಲಿನ ಫಾಕ್ಸ್ ಕಾನ್ ಕಂಪನಿ ಮಲ ಮಿಶ್ರಿತ, ಕಲುಷಿತ ನೀರನ್ನು ಸ್ವಚ್ಛವಾಗಿರುವ ಕೊನಘಟ್ಟ ಕೆರೆಗೆ ಹರಿಬಿಟ್ಟಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಪ್ರಾರಂಭದಲ್ಲಿ ಇದಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

ಸ್ವಚ್ಛವಾಗಿರುವ ಜಲ ಮೂಲಗಳು ಕಾರ್ಖಾನೆಗಳ ಕಲುಷಿತ ನೀರಿನಿಂದ ಕಲುಷಿತಗೊಂಡರೆ ಭವಿಷ್ಯದಲ್ಲಿ ದೊಡ್ಡಬಳ್ಳಾಪುರ ಜನರ ಜೀವನ ಅದೋಗತಿಗೆ ಬಂದು ತಲುಪುತ್ತದೆ. ತಾಲೂಕಿನ ಜನರು ಅನಾರೋಗ್ಯದಿಂದ ಬಳಲಿ ಸಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಮುಂದಿನ‌ ಪೀಳಿಗೆ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

15 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago