ಫಾಕ್ಸ್ ಕಾನ್ ಕಂಪನಿಯ ಕಲುಷಿತ ನೀರು ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಕೆರೆಗಳ ಒಡಲು ಸೇರುತ್ತಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಫಾಕ್ಸ್ ಕಾನ್ ಕಂಪನಿ ಬಳಿ ಮಲ ಮಿಶ್ರಿತ, ಇತರೆ ಕಲುಷಿತ ನೀರಿಗಾಗಿಯೇ ಒಂದು ಕುಂಟೆಯನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಆ ಕುಂಟೆಯ ಕಟ್ಟೆಯನ್ನು ಹೊಡೆದು ರಾಜಕಾಲುವೆಗೆ ಹರಿಬಿಡಲಾಗಿದೆ. ಈ ಕಲುಷಿತ ನೀರು ನೇರವಾಗಿ ಕೊನಘಟ್ಟ ಗ್ರಾಮದ ಕೆರೆಗೆ ಹರಿದು ಬರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.
ಸ್ಥಳಕ್ಕೆ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ ಪಂಚಾಯಿತಿ ಸಿಇಒ ಅನುರಾಧಾ, ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ, ತಾ.ಪಂ ಇಓ ಮುನಿರಾಜು, ಗ್ರಾ.ಪಂ ಅಧ್ಯಕ್ಷೆ ಜ್ಯೋತಿ, ಪಿಡಿಓ ರಷ್ಮಿ, ನೂರಾರು ಸಾರ್ವಜನಿಕರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸದ್ಯ ಹೊಡೆದಿರುವ ಕುಂಟೆಯ ಕಟ್ಟೆಯನ್ನು ಮುಚ್ಚುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದರು. ಇಲ್ಲಿನ ತ್ಯಾಜ್ಯ ನೀರು ರಾಜಕಾಲುವೆ ಸೇರಿದಂತೆ ಯಾವುದೇ ಮೂಲಗಳಿಂದ ಹೊರಬಾರದಂತೆ ಸಿಮೆಂಟ್ ವಾಲ್ ನಿರ್ಮಿಸುವಂತೆ ಆಗ್ರಹ ಮಾಡಿದರು.
ಬೆಳಗ್ಗೆ 10 ಗಂಟೆಯಿಂದಲೇ ಜನಪ್ರತಿನಿಧಿ, ಅಧಿಕಾರಿಗಳು. ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು. ಆದರೆ, ಫಾಕ್ಸ್ ಕಾನ್ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಬರುವುದಕ್ಕೆ ಮೀನಾಮೇಷ ಎಣಿಸುತ್ತಿದ್ದರು. ಒಬ್ಬರ ಮೇಲೆ ಮತ್ತೊಬ್ಬರು ಹೇಳಿಕೊಂಡು ಕಾಲಹರಣ ಮಾಡುತ್ತಿದ್ದರು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಏಷ್ಯಾದ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶವಿದೆ. ಇಲ್ಲಿನ ನೂರಾರು ಕಾರ್ಖಾನೆಗಳ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಬಿಡಲಾಗಿತ್ತಿದೆ. ಇದರಿಂದ ಅರ್ಕಾವತಿ ನದಿ ಪಾತ್ರದ ಕೆರೆಗಳು ಸಂಪೂರ್ಣವಾಗಿ ಕಲುಷಿತಗೊಂಡ ಜನ ಜಾನುವಾರು ಕುಡಿಯಲು ಯೋಗ್ಯವಾಗದ ಸ್ಥಿತಿಗೆ ಬಂದು ತಲುಪಿದೆ. ಈ ಕೆರೆಗಳನ್ನು ಶುದ್ಧೀಕರಿಸುವಂತೆ, ಕಾರ್ಖಾನೆಗಳ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನು ಕೆರೆಗಳಿಗೆ ಬಿಡುವವರ ವಿರುದ್ಧ ಕ್ರಮ ಜರುಗಿಸುವಂತೆ ಸ್ಥಳೀಯರು ಅನೇಕ ಹೋರಾಟಗಳು ಮಾಡಿಕೊಂಡು ಬರುತ್ತಿದ್ದಾರೆ. ಈ ಸಮಸ್ಯೆ ಜೊತೆಗೆ ಇದೀಗ ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದ ಕೊನಘಟ್ಟ ಸಮೀಪದಲ್ಲಿನ ಫಾಕ್ಸ್ ಕಾನ್ ಕಂಪನಿ ಮಲ ಮಿಶ್ರಿತ, ಕಲುಷಿತ ನೀರನ್ನು ಸ್ವಚ್ಛವಾಗಿರುವ ಕೊನಘಟ್ಟ ಕೆರೆಗೆ ಹರಿಬಿಟ್ಟಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಪ್ರಾರಂಭದಲ್ಲಿ ಇದಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…