ಕೊನಘಟ್ಟ ಕೆರೆ ಒಡಲು ಸೇರುತ್ತಿರುವ ಫಾಕ್ಸ್ ಕಾನ್ ಕಂಪನಿ ಕಲುಷಿತ ನೀರು: ಸ್ಥಳೀಯರಲ್ಲಿ ಮನೆ ಮಾಡಿದ ಆತಂಕ: ಸ್ಥಳಕ್ಕೆ ಶಾಸಕ ಧೀರಜ್ ಮುನಿರಾಜ್ ಭೇಟಿ, ಪರಿಶೀಲನೆ: ಫಾಕ್ಸ್ ಕಾನ್ ಕಂಪನಿಯ ಸಿಬ್ಬಂದಿಗೆ ತರಾಟೆ

ಫಾಕ್ಸ್ ಕಾನ್ ಕಂಪನಿಯ ಕಲುಷಿತ ನೀರು ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಕೆರೆಗಳ ಒಡಲು ಸೇರುತ್ತಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಫಾಕ್ಸ್ ಕಾನ್ ಕಂಪನಿ ಬಳಿ ಮಲ ಮಿಶ್ರಿತ, ಇತರೆ ಕಲುಷಿತ ನೀರಿಗಾಗಿಯೇ‌ ಒಂದು  ಕುಂಟೆಯನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಆ‌ ಕುಂಟೆಯ ಕಟ್ಟೆಯನ್ನು ಹೊಡೆದು ರಾಜಕಾಲುವೆಗೆ ಹರಿಬಿಡಲಾಗಿದೆ. ಈ ಕಲುಷಿತ ನೀರು ನೇರವಾಗಿ ಕೊನಘಟ್ಟ ಗ್ರಾಮದ ಕೆರೆಗೆ ಹರಿದು ಬರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.

ಸ್ಥಳಕ್ಕೆ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ‌ ಪಂಚಾಯಿತಿ ಸಿಇಒ ಅನುರಾಧಾ, ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ, ತಾ.ಪಂ ಇಓ ಮುನಿರಾಜು, ಗ್ರಾ.ಪಂ ಅಧ್ಯಕ್ಷೆ ಜ್ಯೋತಿ, ಪಿಡಿಓ ರಷ್ಮಿ, ನೂರಾರು ಸಾರ್ವಜನಿಕರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸದ್ಯ ಹೊಡೆದಿರುವ ಕುಂಟೆಯ ಕಟ್ಟೆಯನ್ನು ಮುಚ್ಚುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದರು. ಇಲ್ಲಿನ ತ್ಯಾಜ್ಯ ನೀರು ರಾಜಕಾಲುವೆ ಸೇರಿದಂತೆ ಯಾವುದೇ ಮೂಲಗಳಿಂದ ಹೊರಬಾರದಂತೆ ಸಿಮೆಂಟ್ ವಾಲ್ ನಿರ್ಮಿಸುವಂತೆ ಆಗ್ರಹ ಮಾಡಿದರು.

ಆದರೆ, ಶಾಸಕ ಧೀರಜ್ ಮುನಿರಾಜ್, ಅಧಿಕಾರಿಗಳ ಆಗ್ರಹಕ್ಕೆ ಫಾಕ್ಸ್ ಕಾನ್ ಸಿಬ್ಬಂದಿ ಕ್ಯಾರೆ ಎನ್ನದಿರುವುದಕ್ಕೆ ಸ್ಥಳೀಯರು, ಹಾಗೂ ಶಾಸಕರ ಇನ್ನಷ್ಟು ಆಕ್ರೋಶಕ್ಕೆ  ಕಾರಣವಾಗಿತ್ತು.

ಬೆಳಗ್ಗೆ 10 ಗಂಟೆಯಿಂದಲೇ ಜನಪ್ರತಿನಿಧಿ, ಅಧಿಕಾರಿಗಳು. ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು. ಆದರೆ, ಫಾಕ್ಸ್ ಕಾನ್ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಬರುವುದಕ್ಕೆ ಮೀನಾಮೇಷ ಎಣಿಸುತ್ತಿದ್ದರು. ಒಬ್ಬರ ಮೇಲೆ ಮತ್ತೊಬ್ಬರು ಹೇಳಿಕೊಂಡು ಕಾಲಹರಣ ಮಾಡುತ್ತಿದ್ದರು.

ಹರಿಯುತ್ತಿರುವ ಕಲುಷಿತ ನೀರು ನಿಲ್ಲುವವರೆಗೂ ಸ್ಥಳದಿಂದ ಹೊರಡುವುದಿಲ್ಲ ಎಂದು ಶಾಸಕ ಧೀರಜ್ ಮುನಿರಾಜ್ ಅವರು ಪಟ್ಟುಹಿಡಿದಿದ್ದರು.

ದೊಡ್ಡಬಳ್ಳಾಪುರ‌ದ ಬಾಶೆಟ್ಟಿಹಳ್ಳಿಯಲ್ಲಿ ಏಷ್ಯಾದ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶವಿದೆ. ಇಲ್ಲಿನ ನೂರಾರು ಕಾರ್ಖಾನೆಗಳ‌ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಬಿಡಲಾಗಿತ್ತಿದೆ. ಇದರಿಂದ ಅರ್ಕಾವತಿ ನದಿ ಪಾತ್ರದ ಕೆರೆಗಳು ಸಂಪೂರ್ಣವಾಗಿ ಕಲುಷಿತಗೊಂಡ ಜನ ಜಾನುವಾರು‌ ಕುಡಿಯಲು ಯೋಗ್ಯವಾಗದ ಸ್ಥಿತಿಗೆ ಬಂದು ತಲುಪಿದೆ‌. ಈ ಕೆರೆಗಳನ್ನು ಶುದ್ಧೀಕರಿಸುವಂತೆ, ಕಾರ್ಖಾನೆಗಳ‌ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನು ಕೆರೆಗಳಿಗೆ ಬಿಡುವವರ ವಿರುದ್ಧ ಕ್ರಮ ಜರುಗಿಸುವಂತೆ ಸ್ಥಳೀಯರು ಅನೇಕ ಹೋರಾಟಗಳು ಮಾಡಿಕೊಂಡು ಬರುತ್ತಿದ್ದಾರೆ. ಈ ಸಮಸ್ಯೆ ಜೊತೆಗೆ ಇದೀಗ ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದ ಕೊನಘಟ್ಟ ಸಮೀಪದಲ್ಲಿನ ಫಾಕ್ಸ್ ಕಾನ್ ಕಂಪನಿ ಮಲ ಮಿಶ್ರಿತ, ಕಲುಷಿತ ನೀರನ್ನು ಸ್ವಚ್ಛವಾಗಿರುವ ಕೊನಘಟ್ಟ ಕೆರೆಗೆ ಹರಿಬಿಟ್ಟಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಪ್ರಾರಂಭದಲ್ಲಿ ಇದಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

ಸ್ವಚ್ಛವಾಗಿರುವ ಜಲ ಮೂಲಗಳು ಕಾರ್ಖಾನೆಗಳ ಕಲುಷಿತ ನೀರಿನಿಂದ ಕಲುಷಿತಗೊಂಡರೆ ಭವಿಷ್ಯದಲ್ಲಿ ದೊಡ್ಡಬಳ್ಳಾಪುರ ಜನರ ಜೀವನ ಅದೋಗತಿಗೆ ಬಂದು ತಲುಪುತ್ತದೆ. ತಾಲೂಕಿನ ಜನರು ಅನಾರೋಗ್ಯದಿಂದ ಬಳಲಿ ಸಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಮುಂದಿನ‌ ಪೀಳಿಗೆ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

9 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

14 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago