ಕೊನಘಟ್ಟ ಕೆರೆ ಒಡಲು ಸೇರುತ್ತಿರುವ ಫಾಕ್ಸ್ ಕಾನ್ ಕಂಪನಿ ಕಲುಷಿತ ನೀರು: ಸ್ಥಳೀಯರಲ್ಲಿ ಮನೆ ಮಾಡಿದ ಆತಂಕ: ಸ್ಥಳಕ್ಕೆ ಶಾಸಕ ಧೀರಜ್ ಮುನಿರಾಜ್ ಭೇಟಿ, ಪರಿಶೀಲನೆ: ಫಾಕ್ಸ್ ಕಾನ್ ಕಂಪನಿಯ ಸಿಬ್ಬಂದಿಗೆ ತರಾಟೆ

ಫಾಕ್ಸ್ ಕಾನ್ ಕಂಪನಿಯ ಕಲುಷಿತ ನೀರು ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಕೆರೆಗಳ ಒಡಲು ಸೇರುತ್ತಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಫಾಕ್ಸ್ ಕಾನ್ ಕಂಪನಿ ಬಳಿ ಮಲ ಮಿಶ್ರಿತ, ಇತರೆ ಕಲುಷಿತ ನೀರಿಗಾಗಿಯೇ‌ ಒಂದು  ಕುಂಟೆಯನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಆ‌ ಕುಂಟೆಯ ಕಟ್ಟೆಯನ್ನು ಹೊಡೆದು ರಾಜಕಾಲುವೆಗೆ ಹರಿಬಿಡಲಾಗಿದೆ. ಈ ಕಲುಷಿತ ನೀರು ನೇರವಾಗಿ ಕೊನಘಟ್ಟ ಗ್ರಾಮದ ಕೆರೆಗೆ ಹರಿದು ಬರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.

ಸ್ಥಳಕ್ಕೆ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ‌ ಪಂಚಾಯಿತಿ ಸಿಇಒ ಅನುರಾಧಾ, ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ, ತಾ.ಪಂ ಇಓ ಮುನಿರಾಜು, ಗ್ರಾ.ಪಂ ಅಧ್ಯಕ್ಷೆ ಜ್ಯೋತಿ, ಪಿಡಿಓ ರಷ್ಮಿ, ನೂರಾರು ಸಾರ್ವಜನಿಕರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸದ್ಯ ಹೊಡೆದಿರುವ ಕುಂಟೆಯ ಕಟ್ಟೆಯನ್ನು ಮುಚ್ಚುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದರು. ಇಲ್ಲಿನ ತ್ಯಾಜ್ಯ ನೀರು ರಾಜಕಾಲುವೆ ಸೇರಿದಂತೆ ಯಾವುದೇ ಮೂಲಗಳಿಂದ ಹೊರಬಾರದಂತೆ ಸಿಮೆಂಟ್ ವಾಲ್ ನಿರ್ಮಿಸುವಂತೆ ಆಗ್ರಹ ಮಾಡಿದರು.

ಆದರೆ, ಶಾಸಕ ಧೀರಜ್ ಮುನಿರಾಜ್, ಅಧಿಕಾರಿಗಳ ಆಗ್ರಹಕ್ಕೆ ಫಾಕ್ಸ್ ಕಾನ್ ಸಿಬ್ಬಂದಿ ಕ್ಯಾರೆ ಎನ್ನದಿರುವುದಕ್ಕೆ ಸ್ಥಳೀಯರು, ಹಾಗೂ ಶಾಸಕರ ಇನ್ನಷ್ಟು ಆಕ್ರೋಶಕ್ಕೆ  ಕಾರಣವಾಗಿತ್ತು.

ಬೆಳಗ್ಗೆ 10 ಗಂಟೆಯಿಂದಲೇ ಜನಪ್ರತಿನಿಧಿ, ಅಧಿಕಾರಿಗಳು. ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು. ಆದರೆ, ಫಾಕ್ಸ್ ಕಾನ್ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಬರುವುದಕ್ಕೆ ಮೀನಾಮೇಷ ಎಣಿಸುತ್ತಿದ್ದರು. ಒಬ್ಬರ ಮೇಲೆ ಮತ್ತೊಬ್ಬರು ಹೇಳಿಕೊಂಡು ಕಾಲಹರಣ ಮಾಡುತ್ತಿದ್ದರು.

ಹರಿಯುತ್ತಿರುವ ಕಲುಷಿತ ನೀರು ನಿಲ್ಲುವವರೆಗೂ ಸ್ಥಳದಿಂದ ಹೊರಡುವುದಿಲ್ಲ ಎಂದು ಶಾಸಕ ಧೀರಜ್ ಮುನಿರಾಜ್ ಅವರು ಪಟ್ಟುಹಿಡಿದಿದ್ದರು.

ದೊಡ್ಡಬಳ್ಳಾಪುರ‌ದ ಬಾಶೆಟ್ಟಿಹಳ್ಳಿಯಲ್ಲಿ ಏಷ್ಯಾದ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶವಿದೆ. ಇಲ್ಲಿನ ನೂರಾರು ಕಾರ್ಖಾನೆಗಳ‌ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಬಿಡಲಾಗಿತ್ತಿದೆ. ಇದರಿಂದ ಅರ್ಕಾವತಿ ನದಿ ಪಾತ್ರದ ಕೆರೆಗಳು ಸಂಪೂರ್ಣವಾಗಿ ಕಲುಷಿತಗೊಂಡ ಜನ ಜಾನುವಾರು‌ ಕುಡಿಯಲು ಯೋಗ್ಯವಾಗದ ಸ್ಥಿತಿಗೆ ಬಂದು ತಲುಪಿದೆ‌. ಈ ಕೆರೆಗಳನ್ನು ಶುದ್ಧೀಕರಿಸುವಂತೆ, ಕಾರ್ಖಾನೆಗಳ‌ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನು ಕೆರೆಗಳಿಗೆ ಬಿಡುವವರ ವಿರುದ್ಧ ಕ್ರಮ ಜರುಗಿಸುವಂತೆ ಸ್ಥಳೀಯರು ಅನೇಕ ಹೋರಾಟಗಳು ಮಾಡಿಕೊಂಡು ಬರುತ್ತಿದ್ದಾರೆ. ಈ ಸಮಸ್ಯೆ ಜೊತೆಗೆ ಇದೀಗ ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದ ಕೊನಘಟ್ಟ ಸಮೀಪದಲ್ಲಿನ ಫಾಕ್ಸ್ ಕಾನ್ ಕಂಪನಿ ಮಲ ಮಿಶ್ರಿತ, ಕಲುಷಿತ ನೀರನ್ನು ಸ್ವಚ್ಛವಾಗಿರುವ ಕೊನಘಟ್ಟ ಕೆರೆಗೆ ಹರಿಬಿಟ್ಟಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಪ್ರಾರಂಭದಲ್ಲಿ ಇದಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

ಸ್ವಚ್ಛವಾಗಿರುವ ಜಲ ಮೂಲಗಳು ಕಾರ್ಖಾನೆಗಳ ಕಲುಷಿತ ನೀರಿನಿಂದ ಕಲುಷಿತಗೊಂಡರೆ ಭವಿಷ್ಯದಲ್ಲಿ ದೊಡ್ಡಬಳ್ಳಾಪುರ ಜನರ ಜೀವನ ಅದೋಗತಿಗೆ ಬಂದು ತಲುಪುತ್ತದೆ. ತಾಲೂಕಿನ ಜನರು ಅನಾರೋಗ್ಯದಿಂದ ಬಳಲಿ ಸಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಮುಂದಿನ‌ ಪೀಳಿಗೆ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

17 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago