ಕೊನಘಟ್ಟ ಕೆರೆ ಒಡಲು ಸೇರುತ್ತಿರುವ ಫಾಕ್ಸ್ ಕಾನ್ ಕಂಪನಿ ಕಲುಷಿತ ನೀರು: ಸ್ಥಳೀಯರಲ್ಲಿ ಮನೆ ಮಾಡಿದ ಆತಂಕ: ಸ್ಥಳಕ್ಕೆ ಶಾಸಕ ಧೀರಜ್ ಮುನಿರಾಜ್ ಭೇಟಿ, ಪರಿಶೀಲನೆ: ಫಾಕ್ಸ್ ಕಾನ್ ಕಂಪನಿಯ ಸಿಬ್ಬಂದಿಗೆ ತರಾಟೆ

ಫಾಕ್ಸ್ ಕಾನ್ ಕಂಪನಿಯ ಕಲುಷಿತ ನೀರು ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಕೆರೆಗಳ ಒಡಲು ಸೇರುತ್ತಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಫಾಕ್ಸ್ ಕಾನ್ ಕಂಪನಿ ಬಳಿ ಮಲ ಮಿಶ್ರಿತ, ಇತರೆ ಕಲುಷಿತ ನೀರಿಗಾಗಿಯೇ‌ ಒಂದು  ಕುಂಟೆಯನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಆ‌ ಕುಂಟೆಯ ಕಟ್ಟೆಯನ್ನು ಹೊಡೆದು ರಾಜಕಾಲುವೆಗೆ ಹರಿಬಿಡಲಾಗಿದೆ. ಈ ಕಲುಷಿತ ನೀರು ನೇರವಾಗಿ ಕೊನಘಟ್ಟ ಗ್ರಾಮದ ಕೆರೆಗೆ ಹರಿದು ಬರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.

ಸ್ಥಳಕ್ಕೆ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ‌ ಪಂಚಾಯಿತಿ ಸಿಇಒ ಅನುರಾಧಾ, ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ, ತಾ.ಪಂ ಇಓ ಮುನಿರಾಜು, ಗ್ರಾ.ಪಂ ಅಧ್ಯಕ್ಷೆ ಜ್ಯೋತಿ, ಪಿಡಿಓ ರಷ್ಮಿ, ನೂರಾರು ಸಾರ್ವಜನಿಕರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸದ್ಯ ಹೊಡೆದಿರುವ ಕುಂಟೆಯ ಕಟ್ಟೆಯನ್ನು ಮುಚ್ಚುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದರು. ಇಲ್ಲಿನ ತ್ಯಾಜ್ಯ ನೀರು ರಾಜಕಾಲುವೆ ಸೇರಿದಂತೆ ಯಾವುದೇ ಮೂಲಗಳಿಂದ ಹೊರಬಾರದಂತೆ ಸಿಮೆಂಟ್ ವಾಲ್ ನಿರ್ಮಿಸುವಂತೆ ಆಗ್ರಹ ಮಾಡಿದರು.

ಆದರೆ, ಶಾಸಕ ಧೀರಜ್ ಮುನಿರಾಜ್, ಅಧಿಕಾರಿಗಳ ಆಗ್ರಹಕ್ಕೆ ಫಾಕ್ಸ್ ಕಾನ್ ಸಿಬ್ಬಂದಿ ಕ್ಯಾರೆ ಎನ್ನದಿರುವುದಕ್ಕೆ ಸ್ಥಳೀಯರು, ಹಾಗೂ ಶಾಸಕರ ಇನ್ನಷ್ಟು ಆಕ್ರೋಶಕ್ಕೆ  ಕಾರಣವಾಗಿತ್ತು.

ಬೆಳಗ್ಗೆ 10 ಗಂಟೆಯಿಂದಲೇ ಜನಪ್ರತಿನಿಧಿ, ಅಧಿಕಾರಿಗಳು. ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು. ಆದರೆ, ಫಾಕ್ಸ್ ಕಾನ್ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಬರುವುದಕ್ಕೆ ಮೀನಾಮೇಷ ಎಣಿಸುತ್ತಿದ್ದರು. ಒಬ್ಬರ ಮೇಲೆ ಮತ್ತೊಬ್ಬರು ಹೇಳಿಕೊಂಡು ಕಾಲಹರಣ ಮಾಡುತ್ತಿದ್ದರು.

ಹರಿಯುತ್ತಿರುವ ಕಲುಷಿತ ನೀರು ನಿಲ್ಲುವವರೆಗೂ ಸ್ಥಳದಿಂದ ಹೊರಡುವುದಿಲ್ಲ ಎಂದು ಶಾಸಕ ಧೀರಜ್ ಮುನಿರಾಜ್ ಅವರು ಪಟ್ಟುಹಿಡಿದಿದ್ದರು.

ದೊಡ್ಡಬಳ್ಳಾಪುರ‌ದ ಬಾಶೆಟ್ಟಿಹಳ್ಳಿಯಲ್ಲಿ ಏಷ್ಯಾದ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶವಿದೆ. ಇಲ್ಲಿನ ನೂರಾರು ಕಾರ್ಖಾನೆಗಳ‌ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಬಿಡಲಾಗಿತ್ತಿದೆ. ಇದರಿಂದ ಅರ್ಕಾವತಿ ನದಿ ಪಾತ್ರದ ಕೆರೆಗಳು ಸಂಪೂರ್ಣವಾಗಿ ಕಲುಷಿತಗೊಂಡ ಜನ ಜಾನುವಾರು‌ ಕುಡಿಯಲು ಯೋಗ್ಯವಾಗದ ಸ್ಥಿತಿಗೆ ಬಂದು ತಲುಪಿದೆ‌. ಈ ಕೆರೆಗಳನ್ನು ಶುದ್ಧೀಕರಿಸುವಂತೆ, ಕಾರ್ಖಾನೆಗಳ‌ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನು ಕೆರೆಗಳಿಗೆ ಬಿಡುವವರ ವಿರುದ್ಧ ಕ್ರಮ ಜರುಗಿಸುವಂತೆ ಸ್ಥಳೀಯರು ಅನೇಕ ಹೋರಾಟಗಳು ಮಾಡಿಕೊಂಡು ಬರುತ್ತಿದ್ದಾರೆ. ಈ ಸಮಸ್ಯೆ ಜೊತೆಗೆ ಇದೀಗ ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದ ಕೊನಘಟ್ಟ ಸಮೀಪದಲ್ಲಿನ ಫಾಕ್ಸ್ ಕಾನ್ ಕಂಪನಿ ಮಲ ಮಿಶ್ರಿತ, ಕಲುಷಿತ ನೀರನ್ನು ಸ್ವಚ್ಛವಾಗಿರುವ ಕೊನಘಟ್ಟ ಕೆರೆಗೆ ಹರಿಬಿಟ್ಟಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಪ್ರಾರಂಭದಲ್ಲಿ ಇದಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

ಸ್ವಚ್ಛವಾಗಿರುವ ಜಲ ಮೂಲಗಳು ಕಾರ್ಖಾನೆಗಳ ಕಲುಷಿತ ನೀರಿನಿಂದ ಕಲುಷಿತಗೊಂಡರೆ ಭವಿಷ್ಯದಲ್ಲಿ ದೊಡ್ಡಬಳ್ಳಾಪುರ ಜನರ ಜೀವನ ಅದೋಗತಿಗೆ ಬಂದು ತಲುಪುತ್ತದೆ. ತಾಲೂಕಿನ ಜನರು ಅನಾರೋಗ್ಯದಿಂದ ಬಳಲಿ ಸಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಮುಂದಿನ‌ ಪೀಳಿಗೆ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

9 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

9 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

12 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

13 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

17 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

21 hours ago