ಕೊನಘಟ್ಟ ಗ್ರಾಮದಲ್ಲಿ ಎತ್ತಿನಹೊಳೆ ಕಾಮಗಾರಿ: ಬೋರ್ ಬ್ಲಾಸ್ಟಿಂಗ್ ಸಾಧನದಿಂದ ಬಂಡೆ ಪುಡಿ: ಮನೆಗಳಿಗೆ ಹಾನಿಯಾಗುವ ಭಯದಲ್ಲಿ ಗ್ರಾಮಸ್ಥರು

ದೊಡ್ಡಬಳ್ಳಾಪುರದ ಕೊನಘಟ್ಟ ಗ್ರಾಮದಲ್ಲಿ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿದ್ದು, ಬಂಡೆ ಪುಡಿ ಮಾಡಲು ಬೋರ್ ಬ್ಲಾಸ್ಟಿಂಗ್ ಸಾಧನ ಬಳಕೆ ಮಾಡಲಾಗುತ್ತಿದೆ. ಸ್ಥಳೀಯರು ಬೋರ್ ಬ್ಲಾಸ್ಟಿಂಗ್ ಮಾಡುವುದನ್ನು ತಡೆದಿದ್ದಾರೆ…

ಬೋರ್ ಬ್ಲಾಸ್ಟಿಂಗ್ ಮಾಡುವ ಸ್ಥಳದಿಂದ ಸುಮಾರು ಅರ್ಧ ಕಿಲೋ‌ಮೀಟರ್ ದೂರದಲ್ಲೇ ಮನೆಗಳು ಇವೆ. ಮನೆಗಳಲ್ಲಿ ಜನ ವಾಸ ಮಾಡುತ್ತಿದ್ದಾರೆ. ಒಂದು ವೇಳೆ ಬೋರ್ ಬ್ಲಾಸ್ಟಿಂಗ್ ಆದರೆ ಅರ್ಧ ಕಿಲೋ ಮೀಟರ್ ದೂರದಲ್ಲಿರುವ ಮನೆಗಳು ಬಿರುಕು ಬಿಡುತ್ತವೆ. ಕುಸಿದು ಬೀಳುವ ಸಂಭವ ಹೆಚ್ಚಿದೆ ಎಂದು ಊರಿನ ಗ್ರಾಮಸ್ಥರು ತಿಳಿಸಿದ್ದಾರೆ…

ಬೋರ್ ಬ್ಲಾಸ್ಟಿಂಗ್ ನಿಂದ ಎತ್ತಿನಹೊಳೆ ಕಾಲುವೆಗೆ ಬಂಡೆ ಪುಡಿ ಮಾಡಲಾಗುತ್ತಿದೆ. ಒಂದು ಬಾರಿಗೆ 10 ಬಾಂಬ್ ಇಟ್ಟು ಬ್ಲಾಸ್ಟ್ ಮಾಡೋದಕ್ಕೆ ರೆಡಿ ಮಾಡಿದ್ದಾರೆ. ಇದರಿಂದ ಹೆಚ್ಚು ಶಬ್ಧ ಬರುತ್ತೆ ಮತ್ತು ಸುತ್ತು ಇರುವ ಮನೆಗಳು ಅಲುಗಾಡುತ್ತೆ. ಆದರೆ ಸಿಬ್ಬಂದಿಗೆ ಹೇಳಿದರು ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎತ್ತಿನಹೊಳೆ ಕಾಮಗಾರಿ ನಡೀತಿರೋ ಜಾಗದಲ್ಲಿ ಬಂಡೆ ಇದೆ ಬಂಡೆ ಹೊಡೆಯುವ ಕಾರಣ ತುಂಬ ದೊಡ್ಡ ಬಾಂಬುಗಳನ್ನು ಈಟ್ಟು ಸಿಡಿಸುತ್ತಿದ್ದಾರೆ. ಈ ಕಾರಣ ಅಕ್ಕ ಪಕ್ಕದಲ್ಲಿರುವ ಮನೆಗಳಿಗೆ ತೊಂದರೆಯಾಗುತ್ತಿದ್ದು, ಈ ಜಾಗದಲ್ಲಿ ಯಾವೊಬ್ಬ ಇಂಜಿನಿಯರ್ ಇಂಚಾರ್ಜ್ ಇರುವುದಿಲ್ಲ. ಕೇಳಿದರೆ ನಮಗೆ ಇದಕ್ಕೆ ಸಂಬಂಧವಿಲ್ಲ ಎಂದು ಉತ್ತರ ಕೊಡುತ್ತಿದ್ದಾರೆ. ದಯವಿಟ್ಟು ಇದರ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ…

Ramesh Babu

Journalist

Recent Posts

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

2 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

3 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

4 hours ago

ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…

14 hours ago

Accident Update: ನೆಲಮಂಗಲದ ಜಿಂದಾಲ್‌ ಸಮೀಪ ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರ ಸಾವು ಕೇಸ್: ಮೃತರಲ್ಲಿ ಮೂವರ ಕಣ್ಣುಗಳ ದಾನ

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…

15 hours ago

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಫಾರ್ಮ್ ಪಾರ್ಟಿ: ಸಂತಸದಿಂದ ಪ್ರಾಣಿಗಳ ಜೊತೆಯಲ್ಲಿ ಸಮಯ ಕಳೆದ ವಿದ್ಯಾರ್ಥಿಗಳು ಮತ್ತು ಪೋಷಕರು

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಶನಿವಾರದಂದು ನಡೆದ ಸೈನ್ಸ್ ಫೆಸ್ಟ್ ನಂತರ ಮಕ್ಕಳಿಗೆ ಮತ್ತು ಪೋಷಕರಿಗೆ ಮನರಂಜನೆ ಉಣಬಡಿಸುವ ಪ್ರಯುಕ್ತ ಮಧ್ಯಾಹ್ನ…

16 hours ago