ದೊಡ್ಡಬಳ್ಳಾಪುರದ ಕೊನಘಟ್ಟ ಗ್ರಾಮದಲ್ಲಿ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿದ್ದು, ಬಂಡೆ ಪುಡಿ ಮಾಡಲು ಬೋರ್ ಬ್ಲಾಸ್ಟಿಂಗ್ ಸಾಧನ ಬಳಕೆ ಮಾಡಲಾಗುತ್ತಿದೆ. ಸ್ಥಳೀಯರು ಬೋರ್ ಬ್ಲಾಸ್ಟಿಂಗ್ ಮಾಡುವುದನ್ನು ತಡೆದಿದ್ದಾರೆ…
ಬೋರ್ ಬ್ಲಾಸ್ಟಿಂಗ್ ಮಾಡುವ ಸ್ಥಳದಿಂದ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲೇ ಮನೆಗಳು ಇವೆ. ಮನೆಗಳಲ್ಲಿ ಜನ ವಾಸ ಮಾಡುತ್ತಿದ್ದಾರೆ. ಒಂದು ವೇಳೆ ಬೋರ್ ಬ್ಲಾಸ್ಟಿಂಗ್ ಆದರೆ ಅರ್ಧ ಕಿಲೋ ಮೀಟರ್ ದೂರದಲ್ಲಿರುವ ಮನೆಗಳು ಬಿರುಕು ಬಿಡುತ್ತವೆ. ಕುಸಿದು ಬೀಳುವ ಸಂಭವ ಹೆಚ್ಚಿದೆ ಎಂದು ಊರಿನ ಗ್ರಾಮಸ್ಥರು ತಿಳಿಸಿದ್ದಾರೆ…
ಬೋರ್ ಬ್ಲಾಸ್ಟಿಂಗ್ ನಿಂದ ಎತ್ತಿನಹೊಳೆ ಕಾಲುವೆಗೆ ಬಂಡೆ ಪುಡಿ ಮಾಡಲಾಗುತ್ತಿದೆ. ಒಂದು ಬಾರಿಗೆ 10 ಬಾಂಬ್ ಇಟ್ಟು ಬ್ಲಾಸ್ಟ್ ಮಾಡೋದಕ್ಕೆ ರೆಡಿ ಮಾಡಿದ್ದಾರೆ. ಇದರಿಂದ ಹೆಚ್ಚು ಶಬ್ಧ ಬರುತ್ತೆ ಮತ್ತು ಸುತ್ತು ಇರುವ ಮನೆಗಳು ಅಲುಗಾಡುತ್ತೆ. ಆದರೆ ಸಿಬ್ಬಂದಿಗೆ ಹೇಳಿದರು ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎತ್ತಿನಹೊಳೆ ಕಾಮಗಾರಿ ನಡೀತಿರೋ ಜಾಗದಲ್ಲಿ ಬಂಡೆ ಇದೆ ಬಂಡೆ ಹೊಡೆಯುವ ಕಾರಣ ತುಂಬ ದೊಡ್ಡ ಬಾಂಬುಗಳನ್ನು ಈಟ್ಟು ಸಿಡಿಸುತ್ತಿದ್ದಾರೆ. ಈ ಕಾರಣ ಅಕ್ಕ ಪಕ್ಕದಲ್ಲಿರುವ ಮನೆಗಳಿಗೆ ತೊಂದರೆಯಾಗುತ್ತಿದ್ದು, ಈ ಜಾಗದಲ್ಲಿ ಯಾವೊಬ್ಬ ಇಂಜಿನಿಯರ್ ಇಂಚಾರ್ಜ್ ಇರುವುದಿಲ್ಲ. ಕೇಳಿದರೆ ನಮಗೆ ಇದಕ್ಕೆ ಸಂಬಂಧವಿಲ್ಲ ಎಂದು ಉತ್ತರ ಕೊಡುತ್ತಿದ್ದಾರೆ. ದಯವಿಟ್ಟು ಇದರ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…