ದೊಡ್ಡಬಳ್ಳಾಪುರದ ಕೊನಘಟ್ಟ ಗ್ರಾಮದಲ್ಲಿ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿದ್ದು, ಬಂಡೆ ಪುಡಿ ಮಾಡಲು ಬೋರ್ ಬ್ಲಾಸ್ಟಿಂಗ್ ಸಾಧನ ಬಳಕೆ ಮಾಡಲಾಗುತ್ತಿದೆ. ಸ್ಥಳೀಯರು ಬೋರ್ ಬ್ಲಾಸ್ಟಿಂಗ್ ಮಾಡುವುದನ್ನು ತಡೆದಿದ್ದಾರೆ…
ಬೋರ್ ಬ್ಲಾಸ್ಟಿಂಗ್ ಮಾಡುವ ಸ್ಥಳದಿಂದ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲೇ ಮನೆಗಳು ಇವೆ. ಮನೆಗಳಲ್ಲಿ ಜನ ವಾಸ ಮಾಡುತ್ತಿದ್ದಾರೆ. ಒಂದು ವೇಳೆ ಬೋರ್ ಬ್ಲಾಸ್ಟಿಂಗ್ ಆದರೆ ಅರ್ಧ ಕಿಲೋ ಮೀಟರ್ ದೂರದಲ್ಲಿರುವ ಮನೆಗಳು ಬಿರುಕು ಬಿಡುತ್ತವೆ. ಕುಸಿದು ಬೀಳುವ ಸಂಭವ ಹೆಚ್ಚಿದೆ ಎಂದು ಊರಿನ ಗ್ರಾಮಸ್ಥರು ತಿಳಿಸಿದ್ದಾರೆ…
ಬೋರ್ ಬ್ಲಾಸ್ಟಿಂಗ್ ನಿಂದ ಎತ್ತಿನಹೊಳೆ ಕಾಲುವೆಗೆ ಬಂಡೆ ಪುಡಿ ಮಾಡಲಾಗುತ್ತಿದೆ. ಒಂದು ಬಾರಿಗೆ 10 ಬಾಂಬ್ ಇಟ್ಟು ಬ್ಲಾಸ್ಟ್ ಮಾಡೋದಕ್ಕೆ ರೆಡಿ ಮಾಡಿದ್ದಾರೆ. ಇದರಿಂದ ಹೆಚ್ಚು ಶಬ್ಧ ಬರುತ್ತೆ ಮತ್ತು ಸುತ್ತು ಇರುವ ಮನೆಗಳು ಅಲುಗಾಡುತ್ತೆ. ಆದರೆ ಸಿಬ್ಬಂದಿಗೆ ಹೇಳಿದರು ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎತ್ತಿನಹೊಳೆ ಕಾಮಗಾರಿ ನಡೀತಿರೋ ಜಾಗದಲ್ಲಿ ಬಂಡೆ ಇದೆ ಬಂಡೆ ಹೊಡೆಯುವ ಕಾರಣ ತುಂಬ ದೊಡ್ಡ ಬಾಂಬುಗಳನ್ನು ಈಟ್ಟು ಸಿಡಿಸುತ್ತಿದ್ದಾರೆ. ಈ ಕಾರಣ ಅಕ್ಕ ಪಕ್ಕದಲ್ಲಿರುವ ಮನೆಗಳಿಗೆ ತೊಂದರೆಯಾಗುತ್ತಿದ್ದು, ಈ ಜಾಗದಲ್ಲಿ ಯಾವೊಬ್ಬ ಇಂಜಿನಿಯರ್ ಇಂಚಾರ್ಜ್ ಇರುವುದಿಲ್ಲ. ಕೇಳಿದರೆ ನಮಗೆ ಇದಕ್ಕೆ ಸಂಬಂಧವಿಲ್ಲ ಎಂದು ಉತ್ತರ ಕೊಡುತ್ತಿದ್ದಾರೆ. ದಯವಿಟ್ಟು ಇದರ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…