ದೊಡ್ಡಬಳ್ಳಾಪುರದ ಕೊನಘಟ್ಟ ಗ್ರಾಮದಲ್ಲಿ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿದ್ದು, ಬಂಡೆ ಪುಡಿ ಮಾಡಲು ಬೋರ್ ಬ್ಲಾಸ್ಟಿಂಗ್ ಸಾಧನ ಬಳಕೆ ಮಾಡಲಾಗುತ್ತಿದೆ. ಸ್ಥಳೀಯರು ಬೋರ್ ಬ್ಲಾಸ್ಟಿಂಗ್ ಮಾಡುವುದನ್ನು ತಡೆದಿದ್ದಾರೆ…
ಬೋರ್ ಬ್ಲಾಸ್ಟಿಂಗ್ ಮಾಡುವ ಸ್ಥಳದಿಂದ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲೇ ಮನೆಗಳು ಇವೆ. ಮನೆಗಳಲ್ಲಿ ಜನ ವಾಸ ಮಾಡುತ್ತಿದ್ದಾರೆ. ಒಂದು ವೇಳೆ ಬೋರ್ ಬ್ಲಾಸ್ಟಿಂಗ್ ಆದರೆ ಅರ್ಧ ಕಿಲೋ ಮೀಟರ್ ದೂರದಲ್ಲಿರುವ ಮನೆಗಳು ಬಿರುಕು ಬಿಡುತ್ತವೆ. ಕುಸಿದು ಬೀಳುವ ಸಂಭವ ಹೆಚ್ಚಿದೆ ಎಂದು ಊರಿನ ಗ್ರಾಮಸ್ಥರು ತಿಳಿಸಿದ್ದಾರೆ…
ಬೋರ್ ಬ್ಲಾಸ್ಟಿಂಗ್ ನಿಂದ ಎತ್ತಿನಹೊಳೆ ಕಾಲುವೆಗೆ ಬಂಡೆ ಪುಡಿ ಮಾಡಲಾಗುತ್ತಿದೆ. ಒಂದು ಬಾರಿಗೆ 10 ಬಾಂಬ್ ಇಟ್ಟು ಬ್ಲಾಸ್ಟ್ ಮಾಡೋದಕ್ಕೆ ರೆಡಿ ಮಾಡಿದ್ದಾರೆ. ಇದರಿಂದ ಹೆಚ್ಚು ಶಬ್ಧ ಬರುತ್ತೆ ಮತ್ತು ಸುತ್ತು ಇರುವ ಮನೆಗಳು ಅಲುಗಾಡುತ್ತೆ. ಆದರೆ ಸಿಬ್ಬಂದಿಗೆ ಹೇಳಿದರು ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎತ್ತಿನಹೊಳೆ ಕಾಮಗಾರಿ ನಡೀತಿರೋ ಜಾಗದಲ್ಲಿ ಬಂಡೆ ಇದೆ ಬಂಡೆ ಹೊಡೆಯುವ ಕಾರಣ ತುಂಬ ದೊಡ್ಡ ಬಾಂಬುಗಳನ್ನು ಈಟ್ಟು ಸಿಡಿಸುತ್ತಿದ್ದಾರೆ. ಈ ಕಾರಣ ಅಕ್ಕ ಪಕ್ಕದಲ್ಲಿರುವ ಮನೆಗಳಿಗೆ ತೊಂದರೆಯಾಗುತ್ತಿದ್ದು, ಈ ಜಾಗದಲ್ಲಿ ಯಾವೊಬ್ಬ ಇಂಜಿನಿಯರ್ ಇಂಚಾರ್ಜ್ ಇರುವುದಿಲ್ಲ. ಕೇಳಿದರೆ ನಮಗೆ ಇದಕ್ಕೆ ಸಂಬಂಧವಿಲ್ಲ ಎಂದು ಉತ್ತರ ಕೊಡುತ್ತಿದ್ದಾರೆ. ದಯವಿಟ್ಟು ಇದರ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…