ಕೊನಘಟ್ಟ ಗ್ರಾಮದಲ್ಲಿ ಎತ್ತಿನಹೊಳೆ ಕಾಮಗಾರಿ: ಬೋರ್ ಬ್ಲಾಸ್ಟಿಂಗ್ ಸಾಧನದಿಂದ ಬಂಡೆ ಪುಡಿ: ಮನೆಗಳಿಗೆ ಹಾನಿಯಾಗುವ ಭಯದಲ್ಲಿ ಗ್ರಾಮಸ್ಥರು

ದೊಡ್ಡಬಳ್ಳಾಪುರದ ಕೊನಘಟ್ಟ ಗ್ರಾಮದಲ್ಲಿ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿದ್ದು, ಬಂಡೆ ಪುಡಿ ಮಾಡಲು ಬೋರ್ ಬ್ಲಾಸ್ಟಿಂಗ್ ಸಾಧನ ಬಳಕೆ ಮಾಡಲಾಗುತ್ತಿದೆ. ಸ್ಥಳೀಯರು ಬೋರ್ ಬ್ಲಾಸ್ಟಿಂಗ್ ಮಾಡುವುದನ್ನು ತಡೆದಿದ್ದಾರೆ…

ಬೋರ್ ಬ್ಲಾಸ್ಟಿಂಗ್ ಮಾಡುವ ಸ್ಥಳದಿಂದ ಸುಮಾರು ಅರ್ಧ ಕಿಲೋ‌ಮೀಟರ್ ದೂರದಲ್ಲೇ ಮನೆಗಳು ಇವೆ. ಮನೆಗಳಲ್ಲಿ ಜನ ವಾಸ ಮಾಡುತ್ತಿದ್ದಾರೆ. ಒಂದು ವೇಳೆ ಬೋರ್ ಬ್ಲಾಸ್ಟಿಂಗ್ ಆದರೆ ಅರ್ಧ ಕಿಲೋ ಮೀಟರ್ ದೂರದಲ್ಲಿರುವ ಮನೆಗಳು ಬಿರುಕು ಬಿಡುತ್ತವೆ. ಕುಸಿದು ಬೀಳುವ ಸಂಭವ ಹೆಚ್ಚಿದೆ ಎಂದು ಊರಿನ ಗ್ರಾಮಸ್ಥರು ತಿಳಿಸಿದ್ದಾರೆ…

ಬೋರ್ ಬ್ಲಾಸ್ಟಿಂಗ್ ನಿಂದ ಎತ್ತಿನಹೊಳೆ ಕಾಲುವೆಗೆ ಬಂಡೆ ಪುಡಿ ಮಾಡಲಾಗುತ್ತಿದೆ. ಒಂದು ಬಾರಿಗೆ 10 ಬಾಂಬ್ ಇಟ್ಟು ಬ್ಲಾಸ್ಟ್ ಮಾಡೋದಕ್ಕೆ ರೆಡಿ ಮಾಡಿದ್ದಾರೆ. ಇದರಿಂದ ಹೆಚ್ಚು ಶಬ್ಧ ಬರುತ್ತೆ ಮತ್ತು ಸುತ್ತು ಇರುವ ಮನೆಗಳು ಅಲುಗಾಡುತ್ತೆ. ಆದರೆ ಸಿಬ್ಬಂದಿಗೆ ಹೇಳಿದರು ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎತ್ತಿನಹೊಳೆ ಕಾಮಗಾರಿ ನಡೀತಿರೋ ಜಾಗದಲ್ಲಿ ಬಂಡೆ ಇದೆ ಬಂಡೆ ಹೊಡೆಯುವ ಕಾರಣ ತುಂಬ ದೊಡ್ಡ ಬಾಂಬುಗಳನ್ನು ಈಟ್ಟು ಸಿಡಿಸುತ್ತಿದ್ದಾರೆ. ಈ ಕಾರಣ ಅಕ್ಕ ಪಕ್ಕದಲ್ಲಿರುವ ಮನೆಗಳಿಗೆ ತೊಂದರೆಯಾಗುತ್ತಿದ್ದು, ಈ ಜಾಗದಲ್ಲಿ ಯಾವೊಬ್ಬ ಇಂಜಿನಿಯರ್ ಇಂಚಾರ್ಜ್ ಇರುವುದಿಲ್ಲ. ಕೇಳಿದರೆ ನಮಗೆ ಇದಕ್ಕೆ ಸಂಬಂಧವಿಲ್ಲ ಎಂದು ಉತ್ತರ ಕೊಡುತ್ತಿದ್ದಾರೆ. ದಯವಿಟ್ಟು ಇದರ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ…

Ramesh Babu

Journalist

Recent Posts

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

1 hour ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

2 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

16 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

19 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago