ಕೊನಘಟ್ಟ ಗ್ರಾಮದಲ್ಲಿ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮನವರ 33ನೇ ವರ್ಷದ ಕರಗ ಮಹೋತ್ಸವ

ತಾಲೂಕಿನ ಕೊನಘಟ್ಟ ಗ್ರಾಮದ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮನವರ 33ನೇ ವರ್ಷದ ಕರಗ ಮಹೋತ್ಸವ ಕಾರ್ಯಕ್ರಮಕ್ಕೆ ಆದಿಶಕ್ತಿ ಮಹಾಸಂಸ್ಥಾನ ಮಠದ ಶ್ರೀಶ್ರೀಶ್ರೀ ಪ್ರಣವಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಗುರುವಾರ ಅದ್ಧೂರಿಯಾಗಿ ನೆರವೇರಿತು.

ಈ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ವಹ್ನಿಕುಲ (ತಿಗಳರ) ಸಂಘದ ನಿರ್ದೇಶಕರಾದ ಕೆ.ಎಂ. ಮಂಜನಾಥ್, ಕೊನಘಟ್ಟ ಹಾಗೂ ಅಕ್ಕ ಪಕ್ಕದ ಗ್ರಾಮಗಳ ಗ್ರಾಮಸ್ಥರು, ಸರ್ವ ಸಮುದಾಯಗಳ ಮುಖಂಡರು ಒಟ್ಟಾಗಿ ಸೇರಿ ಅತ್ಯಂತ ಸಂಭ್ರಮ ಹಾಗೂ ಸಂತೋಷದಿಂದ ಪಕ್ಷಾತೀತವಾಗಿ ಮಹೋತ್ಸವವನ್ನು ಆಚರಿಸುತ್ತಿರುವುದು ವಿಶೇಷ ಸಂಗತಿಯಾಗಿದೆ, ಈ ಬಾರಿ ಶ್ರೀ ವಿನಾಯಕ ಮುತ್ತಿನ ಪಲ್ಲಕ್ಕಿ ಉತ್ಸವ,ಶ್ರೀ ಕೃಷ್ಣದೇವರ ಮುತ್ತಿನ ಪಲ್ಲಕ್ಕಿ ಉತ್ಸವ,ಶ್ರೀ ಆಂಜನೇಯ ಸ್ವಾಮಿ ಮುತ್ತಿನ ಪಲ್ಲಕ್ಕಿ ಉತ್ಸವ,ಕೊನಘಟ್ಟ ಶ್ರೀ ವೀರಭದ್ರ ಸ್ವಾಮಿ ಮುತ್ತಿನ ಪಲ್ಲಕ್ಕಿ ಉತ್ಸವ,ಶ್ರೀ ಭೀಮನ ಮುತ್ತಿನ ಪಲ್ಲಕ್ಕಿ ಉತ್ಸವ ಸೇರಿದಂತೆ ಹಲವು ಉತ್ಸವಗಳು ಅದ್ದೂರಿಯಾಗಿ ನಡೆದವು ಎಂದರು.

ವಹ್ನಿಕುಲ ಕ್ಷತ್ರಿಯ ಗುರುಪೀಠ ಆದಿಶಕ್ತಿ ಮಹಾಸಂಸ್ಥಾನ ಮಠದ ಶ್ರೀಶ್ರೀಶ್ರೀ ಪ್ರಣವಾನಂದಪುರಿ ಮಹಾಸ್ವಾಮಿಗಳು ಕಾರ್ಯಕ್ರಮ ದಿವ್ಯ ಸಾನಿಧ್ಯವಹಿಸಿ ಮಹೋತ್ಸವಕ್ಕೆ ಆಗಮಿಸಿದ ಭಕ್ತಾದಿಗಳನ್ನು ಆಶೀರ್ವದಿಸಿದರು.

ದೇವಾಲಯದಲ್ಲಿ ವಿಶೇಷವಾಗಿ ಹೋಮ, ದೇವಾಲಯಕ್ಕೆ ಸುಣ್ಣ, ಬಣ್ಣ, ಪುಣ್ಯಾಹ ಗುರುಡ ಧ್ವಜಾರೋಹಣ, ಪೂಂಗಲ್ ಸೇವೆ,ಹಸಿಕರಗ, ವರ್ಣರಂಜಿತ ದೀಪಾಲಂಕಾರಗಳಿಂದ ಕೂಡಿದ ಆರತಿಗಳ ಅಗ್ನಿಕುಂಡ ಪ್ರವೇಶ, ಕೀಲು ಕುದುರೆ ನೃತ್ಯ,ವಾದ್ಯಗಳು, ಕಲ್ಯಾಣೋತ್ಸವ, ಕಣದ ಬಳಿ ಬಳೆ ತೊಡಿಸುವ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮಾರ್ಚ್ 9 ರಿಂದ 16 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

ಸಾವಿರಾರು ಸಂಖ್ಯೆಯಲ್ಲಿ ತಾಲ್ಲೂಕಿನ ಜನತೆ ಕರಗ ಮಹೋತ್ಸವದಲ್ಲಿ ಭಾಗವಹಿಸಿ ಸಂಭ್ರಮಿಸಿದರು.

ಕರಗ ಮಹೋತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದ ತಾಲೂಕಿನ ಜನತೆಗೆ ಕೊನಘಟ್ಟ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮಸೇವಾ ಟ್ರಸ್ಟ್ (ರಿ.) ವಹ್ನಿಕುಲ (ತಿಗಳರು) ಗೌಡರು, ಯಜಮಾನರು, ಗಣಾಚಾರರು ಕೋಲುಕಾರ್ ಕುಲಸ್ಥರು ಹಾಗೂ ಕುಮಾರ ಮಕ್ಕಳು ಹಾಗೂ ಕೊನಘಟ್ಟ ಹಾಗೂ ಅಕ್ಕಪಕ್ಕ ಗ್ರಾಮಗಳ ಗ್ರಾಮಸ್ಥರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

Ramesh Babu

Journalist

Recent Posts

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

1 hour ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

12 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

12 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

14 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

15 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

16 hours ago