ಕೊನಘಟ್ಟ ಗ್ರಾಮದಲ್ಲಿ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮನವರ 33ನೇ ವರ್ಷದ ಕರಗ ಮಹೋತ್ಸವ

ತಾಲೂಕಿನ ಕೊನಘಟ್ಟ ಗ್ರಾಮದ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮನವರ 33ನೇ ವರ್ಷದ ಕರಗ ಮಹೋತ್ಸವ ಕಾರ್ಯಕ್ರಮಕ್ಕೆ ಆದಿಶಕ್ತಿ ಮಹಾಸಂಸ್ಥಾನ ಮಠದ ಶ್ರೀಶ್ರೀಶ್ರೀ ಪ್ರಣವಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಗುರುವಾರ ಅದ್ಧೂರಿಯಾಗಿ ನೆರವೇರಿತು.

ಈ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ವಹ್ನಿಕುಲ (ತಿಗಳರ) ಸಂಘದ ನಿರ್ದೇಶಕರಾದ ಕೆ.ಎಂ. ಮಂಜನಾಥ್, ಕೊನಘಟ್ಟ ಹಾಗೂ ಅಕ್ಕ ಪಕ್ಕದ ಗ್ರಾಮಗಳ ಗ್ರಾಮಸ್ಥರು, ಸರ್ವ ಸಮುದಾಯಗಳ ಮುಖಂಡರು ಒಟ್ಟಾಗಿ ಸೇರಿ ಅತ್ಯಂತ ಸಂಭ್ರಮ ಹಾಗೂ ಸಂತೋಷದಿಂದ ಪಕ್ಷಾತೀತವಾಗಿ ಮಹೋತ್ಸವವನ್ನು ಆಚರಿಸುತ್ತಿರುವುದು ವಿಶೇಷ ಸಂಗತಿಯಾಗಿದೆ, ಈ ಬಾರಿ ಶ್ರೀ ವಿನಾಯಕ ಮುತ್ತಿನ ಪಲ್ಲಕ್ಕಿ ಉತ್ಸವ,ಶ್ರೀ ಕೃಷ್ಣದೇವರ ಮುತ್ತಿನ ಪಲ್ಲಕ್ಕಿ ಉತ್ಸವ,ಶ್ರೀ ಆಂಜನೇಯ ಸ್ವಾಮಿ ಮುತ್ತಿನ ಪಲ್ಲಕ್ಕಿ ಉತ್ಸವ,ಕೊನಘಟ್ಟ ಶ್ರೀ ವೀರಭದ್ರ ಸ್ವಾಮಿ ಮುತ್ತಿನ ಪಲ್ಲಕ್ಕಿ ಉತ್ಸವ,ಶ್ರೀ ಭೀಮನ ಮುತ್ತಿನ ಪಲ್ಲಕ್ಕಿ ಉತ್ಸವ ಸೇರಿದಂತೆ ಹಲವು ಉತ್ಸವಗಳು ಅದ್ದೂರಿಯಾಗಿ ನಡೆದವು ಎಂದರು.

ವಹ್ನಿಕುಲ ಕ್ಷತ್ರಿಯ ಗುರುಪೀಠ ಆದಿಶಕ್ತಿ ಮಹಾಸಂಸ್ಥಾನ ಮಠದ ಶ್ರೀಶ್ರೀಶ್ರೀ ಪ್ರಣವಾನಂದಪುರಿ ಮಹಾಸ್ವಾಮಿಗಳು ಕಾರ್ಯಕ್ರಮ ದಿವ್ಯ ಸಾನಿಧ್ಯವಹಿಸಿ ಮಹೋತ್ಸವಕ್ಕೆ ಆಗಮಿಸಿದ ಭಕ್ತಾದಿಗಳನ್ನು ಆಶೀರ್ವದಿಸಿದರು.

ದೇವಾಲಯದಲ್ಲಿ ವಿಶೇಷವಾಗಿ ಹೋಮ, ದೇವಾಲಯಕ್ಕೆ ಸುಣ್ಣ, ಬಣ್ಣ, ಪುಣ್ಯಾಹ ಗುರುಡ ಧ್ವಜಾರೋಹಣ, ಪೂಂಗಲ್ ಸೇವೆ,ಹಸಿಕರಗ, ವರ್ಣರಂಜಿತ ದೀಪಾಲಂಕಾರಗಳಿಂದ ಕೂಡಿದ ಆರತಿಗಳ ಅಗ್ನಿಕುಂಡ ಪ್ರವೇಶ, ಕೀಲು ಕುದುರೆ ನೃತ್ಯ,ವಾದ್ಯಗಳು, ಕಲ್ಯಾಣೋತ್ಸವ, ಕಣದ ಬಳಿ ಬಳೆ ತೊಡಿಸುವ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮಾರ್ಚ್ 9 ರಿಂದ 16 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

ಸಾವಿರಾರು ಸಂಖ್ಯೆಯಲ್ಲಿ ತಾಲ್ಲೂಕಿನ ಜನತೆ ಕರಗ ಮಹೋತ್ಸವದಲ್ಲಿ ಭಾಗವಹಿಸಿ ಸಂಭ್ರಮಿಸಿದರು.

ಕರಗ ಮಹೋತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದ ತಾಲೂಕಿನ ಜನತೆಗೆ ಕೊನಘಟ್ಟ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮಸೇವಾ ಟ್ರಸ್ಟ್ (ರಿ.) ವಹ್ನಿಕುಲ (ತಿಗಳರು) ಗೌಡರು, ಯಜಮಾನರು, ಗಣಾಚಾರರು ಕೋಲುಕಾರ್ ಕುಲಸ್ಥರು ಹಾಗೂ ಕುಮಾರ ಮಕ್ಕಳು ಹಾಗೂ ಕೊನಘಟ್ಟ ಹಾಗೂ ಅಕ್ಕಪಕ್ಕ ಗ್ರಾಮಗಳ ಗ್ರಾಮಸ್ಥರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

8 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

10 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

11 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

12 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

13 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

19 hours ago