ಕೊನಘಟ್ಟ ಗ್ರಾಮದಲ್ಲಿ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮನವರ 33ನೇ ವರ್ಷದ ಕರಗ ಮಹೋತ್ಸವ

ತಾಲೂಕಿನ ಕೊನಘಟ್ಟ ಗ್ರಾಮದ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮನವರ 33ನೇ ವರ್ಷದ ಕರಗ ಮಹೋತ್ಸವ ಕಾರ್ಯಕ್ರಮಕ್ಕೆ ಆದಿಶಕ್ತಿ ಮಹಾಸಂಸ್ಥಾನ ಮಠದ ಶ್ರೀಶ್ರೀಶ್ರೀ ಪ್ರಣವಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಗುರುವಾರ ಅದ್ಧೂರಿಯಾಗಿ ನೆರವೇರಿತು.

ಈ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ವಹ್ನಿಕುಲ (ತಿಗಳರ) ಸಂಘದ ನಿರ್ದೇಶಕರಾದ ಕೆ.ಎಂ. ಮಂಜನಾಥ್, ಕೊನಘಟ್ಟ ಹಾಗೂ ಅಕ್ಕ ಪಕ್ಕದ ಗ್ರಾಮಗಳ ಗ್ರಾಮಸ್ಥರು, ಸರ್ವ ಸಮುದಾಯಗಳ ಮುಖಂಡರು ಒಟ್ಟಾಗಿ ಸೇರಿ ಅತ್ಯಂತ ಸಂಭ್ರಮ ಹಾಗೂ ಸಂತೋಷದಿಂದ ಪಕ್ಷಾತೀತವಾಗಿ ಮಹೋತ್ಸವವನ್ನು ಆಚರಿಸುತ್ತಿರುವುದು ವಿಶೇಷ ಸಂಗತಿಯಾಗಿದೆ, ಈ ಬಾರಿ ಶ್ರೀ ವಿನಾಯಕ ಮುತ್ತಿನ ಪಲ್ಲಕ್ಕಿ ಉತ್ಸವ,ಶ್ರೀ ಕೃಷ್ಣದೇವರ ಮುತ್ತಿನ ಪಲ್ಲಕ್ಕಿ ಉತ್ಸವ,ಶ್ರೀ ಆಂಜನೇಯ ಸ್ವಾಮಿ ಮುತ್ತಿನ ಪಲ್ಲಕ್ಕಿ ಉತ್ಸವ,ಕೊನಘಟ್ಟ ಶ್ರೀ ವೀರಭದ್ರ ಸ್ವಾಮಿ ಮುತ್ತಿನ ಪಲ್ಲಕ್ಕಿ ಉತ್ಸವ,ಶ್ರೀ ಭೀಮನ ಮುತ್ತಿನ ಪಲ್ಲಕ್ಕಿ ಉತ್ಸವ ಸೇರಿದಂತೆ ಹಲವು ಉತ್ಸವಗಳು ಅದ್ದೂರಿಯಾಗಿ ನಡೆದವು ಎಂದರು.

ವಹ್ನಿಕುಲ ಕ್ಷತ್ರಿಯ ಗುರುಪೀಠ ಆದಿಶಕ್ತಿ ಮಹಾಸಂಸ್ಥಾನ ಮಠದ ಶ್ರೀಶ್ರೀಶ್ರೀ ಪ್ರಣವಾನಂದಪುರಿ ಮಹಾಸ್ವಾಮಿಗಳು ಕಾರ್ಯಕ್ರಮ ದಿವ್ಯ ಸಾನಿಧ್ಯವಹಿಸಿ ಮಹೋತ್ಸವಕ್ಕೆ ಆಗಮಿಸಿದ ಭಕ್ತಾದಿಗಳನ್ನು ಆಶೀರ್ವದಿಸಿದರು.

ದೇವಾಲಯದಲ್ಲಿ ವಿಶೇಷವಾಗಿ ಹೋಮ, ದೇವಾಲಯಕ್ಕೆ ಸುಣ್ಣ, ಬಣ್ಣ, ಪುಣ್ಯಾಹ ಗುರುಡ ಧ್ವಜಾರೋಹಣ, ಪೂಂಗಲ್ ಸೇವೆ,ಹಸಿಕರಗ, ವರ್ಣರಂಜಿತ ದೀಪಾಲಂಕಾರಗಳಿಂದ ಕೂಡಿದ ಆರತಿಗಳ ಅಗ್ನಿಕುಂಡ ಪ್ರವೇಶ, ಕೀಲು ಕುದುರೆ ನೃತ್ಯ,ವಾದ್ಯಗಳು, ಕಲ್ಯಾಣೋತ್ಸವ, ಕಣದ ಬಳಿ ಬಳೆ ತೊಡಿಸುವ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮಾರ್ಚ್ 9 ರಿಂದ 16 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

ಸಾವಿರಾರು ಸಂಖ್ಯೆಯಲ್ಲಿ ತಾಲ್ಲೂಕಿನ ಜನತೆ ಕರಗ ಮಹೋತ್ಸವದಲ್ಲಿ ಭಾಗವಹಿಸಿ ಸಂಭ್ರಮಿಸಿದರು.

ಕರಗ ಮಹೋತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದ ತಾಲೂಕಿನ ಜನತೆಗೆ ಕೊನಘಟ್ಟ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮಸೇವಾ ಟ್ರಸ್ಟ್ (ರಿ.) ವಹ್ನಿಕುಲ (ತಿಗಳರು) ಗೌಡರು, ಯಜಮಾನರು, ಗಣಾಚಾರರು ಕೋಲುಕಾರ್ ಕುಲಸ್ಥರು ಹಾಗೂ ಕುಮಾರ ಮಕ್ಕಳು ಹಾಗೂ ಕೊನಘಟ್ಟ ಹಾಗೂ ಅಕ್ಕಪಕ್ಕ ಗ್ರಾಮಗಳ ಗ್ರಾಮಸ್ಥರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

9 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

10 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago