ತಾಲೂಕಿನ ಕೊನಘಟ್ಟ ಗ್ರಾಮದ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮನವರ 33ನೇ ವರ್ಷದ ಕರಗ ಮಹೋತ್ಸವ ಕಾರ್ಯಕ್ರಮಕ್ಕೆ ಆದಿಶಕ್ತಿ ಮಹಾಸಂಸ್ಥಾನ ಮಠದ ಶ್ರೀಶ್ರೀಶ್ರೀ ಪ್ರಣವಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಗುರುವಾರ ಅದ್ಧೂರಿಯಾಗಿ ನೆರವೇರಿತು.
ಈ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ವಹ್ನಿಕುಲ (ತಿಗಳರ) ಸಂಘದ ನಿರ್ದೇಶಕರಾದ ಕೆ.ಎಂ. ಮಂಜನಾಥ್, ಕೊನಘಟ್ಟ ಹಾಗೂ ಅಕ್ಕ ಪಕ್ಕದ ಗ್ರಾಮಗಳ ಗ್ರಾಮಸ್ಥರು, ಸರ್ವ ಸಮುದಾಯಗಳ ಮುಖಂಡರು ಒಟ್ಟಾಗಿ ಸೇರಿ ಅತ್ಯಂತ ಸಂಭ್ರಮ ಹಾಗೂ ಸಂತೋಷದಿಂದ ಪಕ್ಷಾತೀತವಾಗಿ ಮಹೋತ್ಸವವನ್ನು ಆಚರಿಸುತ್ತಿರುವುದು ವಿಶೇಷ ಸಂಗತಿಯಾಗಿದೆ, ಈ ಬಾರಿ ಶ್ರೀ ವಿನಾಯಕ ಮುತ್ತಿನ ಪಲ್ಲಕ್ಕಿ ಉತ್ಸವ,ಶ್ರೀ ಕೃಷ್ಣದೇವರ ಮುತ್ತಿನ ಪಲ್ಲಕ್ಕಿ ಉತ್ಸವ,ಶ್ರೀ ಆಂಜನೇಯ ಸ್ವಾಮಿ ಮುತ್ತಿನ ಪಲ್ಲಕ್ಕಿ ಉತ್ಸವ,ಕೊನಘಟ್ಟ ಶ್ರೀ ವೀರಭದ್ರ ಸ್ವಾಮಿ ಮುತ್ತಿನ ಪಲ್ಲಕ್ಕಿ ಉತ್ಸವ,ಶ್ರೀ ಭೀಮನ ಮುತ್ತಿನ ಪಲ್ಲಕ್ಕಿ ಉತ್ಸವ ಸೇರಿದಂತೆ ಹಲವು ಉತ್ಸವಗಳು ಅದ್ದೂರಿಯಾಗಿ ನಡೆದವು ಎಂದರು.
ವಹ್ನಿಕುಲ ಕ್ಷತ್ರಿಯ ಗುರುಪೀಠ ಆದಿಶಕ್ತಿ ಮಹಾಸಂಸ್ಥಾನ ಮಠದ ಶ್ರೀಶ್ರೀಶ್ರೀ ಪ್ರಣವಾನಂದಪುರಿ ಮಹಾಸ್ವಾಮಿಗಳು ಕಾರ್ಯಕ್ರಮ ದಿವ್ಯ ಸಾನಿಧ್ಯವಹಿಸಿ ಮಹೋತ್ಸವಕ್ಕೆ ಆಗಮಿಸಿದ ಭಕ್ತಾದಿಗಳನ್ನು ಆಶೀರ್ವದಿಸಿದರು.
ದೇವಾಲಯದಲ್ಲಿ ವಿಶೇಷವಾಗಿ ಹೋಮ, ದೇವಾಲಯಕ್ಕೆ ಸುಣ್ಣ, ಬಣ್ಣ, ಪುಣ್ಯಾಹ ಗುರುಡ ಧ್ವಜಾರೋಹಣ, ಪೂಂಗಲ್ ಸೇವೆ,ಹಸಿಕರಗ, ವರ್ಣರಂಜಿತ ದೀಪಾಲಂಕಾರಗಳಿಂದ ಕೂಡಿದ ಆರತಿಗಳ ಅಗ್ನಿಕುಂಡ ಪ್ರವೇಶ, ಕೀಲು ಕುದುರೆ ನೃತ್ಯ,ವಾದ್ಯಗಳು, ಕಲ್ಯಾಣೋತ್ಸವ, ಕಣದ ಬಳಿ ಬಳೆ ತೊಡಿಸುವ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮಾರ್ಚ್ 9 ರಿಂದ 16 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಸಾವಿರಾರು ಸಂಖ್ಯೆಯಲ್ಲಿ ತಾಲ್ಲೂಕಿನ ಜನತೆ ಕರಗ ಮಹೋತ್ಸವದಲ್ಲಿ ಭಾಗವಹಿಸಿ ಸಂಭ್ರಮಿಸಿದರು.
ಕರಗ ಮಹೋತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದ ತಾಲೂಕಿನ ಜನತೆಗೆ ಕೊನಘಟ್ಟ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮಸೇವಾ ಟ್ರಸ್ಟ್ (ರಿ.) ವಹ್ನಿಕುಲ (ತಿಗಳರು) ಗೌಡರು, ಯಜಮಾನರು, ಗಣಾಚಾರರು ಕೋಲುಕಾರ್ ಕುಲಸ್ಥರು ಹಾಗೂ ಕುಮಾರ ಮಕ್ಕಳು ಹಾಗೂ ಕೊನಘಟ್ಟ ಹಾಗೂ ಅಕ್ಕಪಕ್ಕ ಗ್ರಾಮಗಳ ಗ್ರಾಮಸ್ಥರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…