ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿಗೆ ಅಧ್ಯಕ್ಷೆ ಮಂಜುಳಾ ಸ್ಥಾನದಿಂದ ತೆರವಾಗಿದ್ದ ಸ್ಥಾನಕ್ಕೆ ಪ್ರಭಾರ ಅಧ್ಯಕ್ಷರಾಗಿ ಆಶ್ವಥ್ ನಾರಾಯಣ್ ಆಯ್ಕೆಯಾಗಿದ್ದಾರೆ. ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.
ಪ್ರಭಾರ ಅಧ್ಯಕ್ಷರಾಗಿ ಆಶ್ವಥ್ ನಾರಾಯಣ್ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿ, ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳ ಸಮಸ್ಯೆಗಳಿಗೆ ಸ್ಪಂಧಿಸಿ ಶೀಘ್ರ ಪರಿಹಾರಕ್ಕಾಗಿ ಶ್ರಮಿಸುತ್ತೇನೆ. ಪಕ್ಷಾತೀತ ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಮೂಲಭೂತ ಸೌಕರ್ಯಗಳಲ್ಲಿ ಯಾವುದೇ ಕುಂದು ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗುವುದು ಎಂದರು.
ಪ್ರಭಾರ ಅಧ್ಯಕ್ಷರಾಗಿ ಆಯ್ಕೆಯಾದ ಆಶ್ವಥ್ ನಾರಾಯಣ್ ಅವರಿಗೆ ವಿಎಸ್ಎಸ್ಎನ್ ಅಧ್ಯಕ್ಷ ಜಿ.ಲಕ್ಷ್ಮೀಪತಿ, ಮಾಜಿ ಅಧ್ಯಕ್ಷ ಕೆ.ಕೆ ಆಂಜಿನಪ್ಪ, ಗ್ರಾಪಂ ಮಾಜಿ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷೆ ಪುಷ್ಪ ಶಿವಕುಮಾರ್ ಸೇರಿದಂತೆ ಸದಸ್ಯರು, ಇತರರು ಪುಷ್ಪಮಾಲೆ ಹಾಕಿ ಸಿಹಿ ತಿನಿಸಿ ಅಭಿನಂಧಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…