ಕೊನಘಟ್ಟ ದೇವಾಲುಗಳ ಪಟ್ಟಿಗೆ ಮತ್ತೊಂದು ದೇವಾಲಯ ಸೇರ್ಪಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟದಲ್ಲಿ 20ಕ್ಕೂ ಹೆಚ್ಚು ದೇವಾಲಯಗಳಿವೆ. ದೊಡ್ಡಬಳ್ಳಾಪುರ ತಾಲ್ಲೂಕಿನ ದೇವಾಲಯಗಳ ತವರೂರು ಎಂದು ಕೊನಘಟ್ಟ ಹೆಸರುವಾಸಿಯಾಗಿದೆ. ಇಲ್ಲಿ ನೆಡೆಯುವ ಕರಗ ಮಹೋತ್ಸವವಂತೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ಪ್ರಖ್ಯಾತಿಯಾಗಿದೆ. ಸಪ್ಪಲಮ್ಮ, ಮಾರಮ್ಮ, ದೊಡ್ಡಮ್ಮ, ಪಳೇಕಮ್ಮ, ಹೀಗೆ ಇನ್ನೂ ಹಲವಾರು ಶಕ್ತಿ ದೇವಾಲಯಗಳಿದ್ದು, ಈಗ ಇಲ್ಲಿರುವ ಶಕ್ತಿ ದೇವಾಲಯಗಳ ಪಟ್ಟಿಗೆ ಕೊನಘಟ್ಟದಲ್ಲಿ ಚೌಡೇಶ್ವರಿ ಅಮ್ಮನವರ ದೇವಾಲಯ ಸಹ ಸೇರ್ಪಡೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಚೌಡೇಶ್ವರಿ ಅಮ್ಮನವರ ಸನ್ನಿಧಿಗೆ ಭಕ್ತಾದಿಗಳ ದಂಡು ರಾಜ್ಯದ ಹಲವಾರು ಕಡೆಗಳಿಂದ ಹರಿದು ಬರುತ್ತಿದೆ. ಪ್ರತಿ ಮಂಗಳವಾರ ಮತ್ತು ಶುಕ್ರವಾರ ಅಮ್ಮನವರು ಹೂ ಪ್ರಸಾದ‌ ನೀಡುತ್ತಾರೆ. ಅಮವಾಸ್ಯೆ ಮತ್ತು ಹುಣ್ಣಿಮೆಯ ದಿನಗಳಲ್ಲಿ ತೀರ್ಥ ಸ್ನಾನವಿರುತ್ತದೆ. ಹಾಗೂ ಅಮ್ಮನ ನಂಬಿದರೆ ಸಕಲವೂ ಸುಲಲಿತವಾಗಿ ಭಕ್ತರ ಮನೆಯ ಕಷ್ಟಗಳು ತಂತಾನೆ ಕರಗಿ ಹೋಗುತ್ತಿರುವುದಾಗಿ ತಾಯಿ ಚೌಡೇಶ್ವರಿಯನ್ನ ನಂಬಿರುವ ಭಕ್ತರು ಹೇಳುತ್ತಿದ್ದಾರೆ.

ತಾಯಿ ಚೌಡೇಶ್ವರಿ ಮಾತೆಯ ಆಶೀರ್ವಾದ ಎಲ್ಲರಿಗೂ ಸಿಗುತ್ತಿದ್ದರೂ ಪ್ರಸ್ತುತ ಮಾತೆಗೆ ಒಂದು ನಿಗದಿತ ಗುಡಿ ಇಲ್ಲದಿರುವುದು ನೋವಿನ ವಿಚಾರವಾಗಿದೆಯೆಂದು ಭಕ್ತರು ತಮ್ಮ ನೋವನ್ನ ತೋಡಿಕೊಂಡಿದ್ದು ಮಾತೆಗೆ ಒಂದು ಗುಡಿಯನ್ನ ಕಟ್ಟಬೇಕೆಂದು ಭಕ್ತರು ಬಯಸಿದ್ದು ನಾಡಿನ ಜನರ ತನು ಮನ ಧನವನ್ನು ನಿರೀಕ್ಷಿಸಿದ್ದು ಪ್ರಸ್ತುತ ಅರ್ಚಕರ ಸ್ವಗೃಹದಲ್ಲಿ ದೇವಿಯನ್ನ ಪೂಜಿಸಲಾಗುತ್ತಿದೆ. ಆದಷ್ಟು ಬೇಗ ಸ್ಥಳೀಯ ಆಡಳಿತ ತಾಯಿಗೆ ಒಂದು ಸ್ಥಳವನ್ನ ಗುರುತಿಸಿ ಗುಡಿ ಕಟ್ಟುವ ಕೆಲಸಕ್ಕೆ ಮುಂದಾಗಬೇಕೆಂದು ಭಕ್ತರು ಕೇಳಿಕೊಳುತ್ತಿದ್ದಾರೆ.

Ramesh Babu

Journalist

Recent Posts

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

42 minutes ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

1 hour ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

8 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

9 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

20 hours ago

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

1 day ago