ಕೊನಘಟ್ಟ ದೇವಾಲುಗಳ ಪಟ್ಟಿಗೆ ಮತ್ತೊಂದು ದೇವಾಲಯ ಸೇರ್ಪಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟದಲ್ಲಿ 20ಕ್ಕೂ ಹೆಚ್ಚು ದೇವಾಲಯಗಳಿವೆ. ದೊಡ್ಡಬಳ್ಳಾಪುರ ತಾಲ್ಲೂಕಿನ ದೇವಾಲಯಗಳ ತವರೂರು ಎಂದು ಕೊನಘಟ್ಟ ಹೆಸರುವಾಸಿಯಾಗಿದೆ. ಇಲ್ಲಿ ನೆಡೆಯುವ ಕರಗ ಮಹೋತ್ಸವವಂತೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ಪ್ರಖ್ಯಾತಿಯಾಗಿದೆ. ಸಪ್ಪಲಮ್ಮ, ಮಾರಮ್ಮ, ದೊಡ್ಡಮ್ಮ, ಪಳೇಕಮ್ಮ, ಹೀಗೆ ಇನ್ನೂ ಹಲವಾರು ಶಕ್ತಿ ದೇವಾಲಯಗಳಿದ್ದು, ಈಗ ಇಲ್ಲಿರುವ ಶಕ್ತಿ ದೇವಾಲಯಗಳ ಪಟ್ಟಿಗೆ ಕೊನಘಟ್ಟದಲ್ಲಿ ಚೌಡೇಶ್ವರಿ ಅಮ್ಮನವರ ದೇವಾಲಯ ಸಹ ಸೇರ್ಪಡೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಚೌಡೇಶ್ವರಿ ಅಮ್ಮನವರ ಸನ್ನಿಧಿಗೆ ಭಕ್ತಾದಿಗಳ ದಂಡು ರಾಜ್ಯದ ಹಲವಾರು ಕಡೆಗಳಿಂದ ಹರಿದು ಬರುತ್ತಿದೆ. ಪ್ರತಿ ಮಂಗಳವಾರ ಮತ್ತು ಶುಕ್ರವಾರ ಅಮ್ಮನವರು ಹೂ ಪ್ರಸಾದ‌ ನೀಡುತ್ತಾರೆ. ಅಮವಾಸ್ಯೆ ಮತ್ತು ಹುಣ್ಣಿಮೆಯ ದಿನಗಳಲ್ಲಿ ತೀರ್ಥ ಸ್ನಾನವಿರುತ್ತದೆ. ಹಾಗೂ ಅಮ್ಮನ ನಂಬಿದರೆ ಸಕಲವೂ ಸುಲಲಿತವಾಗಿ ಭಕ್ತರ ಮನೆಯ ಕಷ್ಟಗಳು ತಂತಾನೆ ಕರಗಿ ಹೋಗುತ್ತಿರುವುದಾಗಿ ತಾಯಿ ಚೌಡೇಶ್ವರಿಯನ್ನ ನಂಬಿರುವ ಭಕ್ತರು ಹೇಳುತ್ತಿದ್ದಾರೆ.

ತಾಯಿ ಚೌಡೇಶ್ವರಿ ಮಾತೆಯ ಆಶೀರ್ವಾದ ಎಲ್ಲರಿಗೂ ಸಿಗುತ್ತಿದ್ದರೂ ಪ್ರಸ್ತುತ ಮಾತೆಗೆ ಒಂದು ನಿಗದಿತ ಗುಡಿ ಇಲ್ಲದಿರುವುದು ನೋವಿನ ವಿಚಾರವಾಗಿದೆಯೆಂದು ಭಕ್ತರು ತಮ್ಮ ನೋವನ್ನ ತೋಡಿಕೊಂಡಿದ್ದು ಮಾತೆಗೆ ಒಂದು ಗುಡಿಯನ್ನ ಕಟ್ಟಬೇಕೆಂದು ಭಕ್ತರು ಬಯಸಿದ್ದು ನಾಡಿನ ಜನರ ತನು ಮನ ಧನವನ್ನು ನಿರೀಕ್ಷಿಸಿದ್ದು ಪ್ರಸ್ತುತ ಅರ್ಚಕರ ಸ್ವಗೃಹದಲ್ಲಿ ದೇವಿಯನ್ನ ಪೂಜಿಸಲಾಗುತ್ತಿದೆ. ಆದಷ್ಟು ಬೇಗ ಸ್ಥಳೀಯ ಆಡಳಿತ ತಾಯಿಗೆ ಒಂದು ಸ್ಥಳವನ್ನ ಗುರುತಿಸಿ ಗುಡಿ ಕಟ್ಟುವ ಕೆಲಸಕ್ಕೆ ಮುಂದಾಗಬೇಕೆಂದು ಭಕ್ತರು ಕೇಳಿಕೊಳುತ್ತಿದ್ದಾರೆ.

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

1 hour ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

2 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

4 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

6 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

8 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

8 hours ago