ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟದಲ್ಲಿ 20ಕ್ಕೂ ಹೆಚ್ಚು ದೇವಾಲಯಗಳಿವೆ. ದೊಡ್ಡಬಳ್ಳಾಪುರ ತಾಲ್ಲೂಕಿನ ದೇವಾಲಯಗಳ ತವರೂರು ಎಂದು ಕೊನಘಟ್ಟ ಹೆಸರುವಾಸಿಯಾಗಿದೆ. ಇಲ್ಲಿ ನೆಡೆಯುವ ಕರಗ ಮಹೋತ್ಸವವಂತೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ಪ್ರಖ್ಯಾತಿಯಾಗಿದೆ. ಸಪ್ಪಲಮ್ಮ, ಮಾರಮ್ಮ, ದೊಡ್ಡಮ್ಮ, ಪಳೇಕಮ್ಮ, ಹೀಗೆ ಇನ್ನೂ ಹಲವಾರು ಶಕ್ತಿ ದೇವಾಲಯಗಳಿದ್ದು, ಈಗ ಇಲ್ಲಿರುವ ಶಕ್ತಿ ದೇವಾಲಯಗಳ ಪಟ್ಟಿಗೆ ಕೊನಘಟ್ಟದಲ್ಲಿ ಚೌಡೇಶ್ವರಿ ಅಮ್ಮನವರ ದೇವಾಲಯ ಸಹ ಸೇರ್ಪಡೆಯಾಗಿದೆ.
ಇತ್ತೀಚಿನ ದಿನಗಳಲ್ಲಿ ಚೌಡೇಶ್ವರಿ ಅಮ್ಮನವರ ಸನ್ನಿಧಿಗೆ ಭಕ್ತಾದಿಗಳ ದಂಡು ರಾಜ್ಯದ ಹಲವಾರು ಕಡೆಗಳಿಂದ ಹರಿದು ಬರುತ್ತಿದೆ. ಪ್ರತಿ ಮಂಗಳವಾರ ಮತ್ತು ಶುಕ್ರವಾರ ಅಮ್ಮನವರು ಹೂ ಪ್ರಸಾದ ನೀಡುತ್ತಾರೆ. ಅಮವಾಸ್ಯೆ ಮತ್ತು ಹುಣ್ಣಿಮೆಯ ದಿನಗಳಲ್ಲಿ ತೀರ್ಥ ಸ್ನಾನವಿರುತ್ತದೆ. ಹಾಗೂ ಅಮ್ಮನ ನಂಬಿದರೆ ಸಕಲವೂ ಸುಲಲಿತವಾಗಿ ಭಕ್ತರ ಮನೆಯ ಕಷ್ಟಗಳು ತಂತಾನೆ ಕರಗಿ ಹೋಗುತ್ತಿರುವುದಾಗಿ ತಾಯಿ ಚೌಡೇಶ್ವರಿಯನ್ನ ನಂಬಿರುವ ಭಕ್ತರು ಹೇಳುತ್ತಿದ್ದಾರೆ.
ತಾಯಿ ಚೌಡೇಶ್ವರಿ ಮಾತೆಯ ಆಶೀರ್ವಾದ ಎಲ್ಲರಿಗೂ ಸಿಗುತ್ತಿದ್ದರೂ ಪ್ರಸ್ತುತ ಮಾತೆಗೆ ಒಂದು ನಿಗದಿತ ಗುಡಿ ಇಲ್ಲದಿರುವುದು ನೋವಿನ ವಿಚಾರವಾಗಿದೆಯೆಂದು ಭಕ್ತರು ತಮ್ಮ ನೋವನ್ನ ತೋಡಿಕೊಂಡಿದ್ದು ಮಾತೆಗೆ ಒಂದು ಗುಡಿಯನ್ನ ಕಟ್ಟಬೇಕೆಂದು ಭಕ್ತರು ಬಯಸಿದ್ದು ನಾಡಿನ ಜನರ ತನು ಮನ ಧನವನ್ನು ನಿರೀಕ್ಷಿಸಿದ್ದು ಪ್ರಸ್ತುತ ಅರ್ಚಕರ ಸ್ವಗೃಹದಲ್ಲಿ ದೇವಿಯನ್ನ ಪೂಜಿಸಲಾಗುತ್ತಿದೆ. ಆದಷ್ಟು ಬೇಗ ಸ್ಥಳೀಯ ಆಡಳಿತ ತಾಯಿಗೆ ಒಂದು ಸ್ಥಳವನ್ನ ಗುರುತಿಸಿ ಗುಡಿ ಕಟ್ಟುವ ಕೆಲಸಕ್ಕೆ ಮುಂದಾಗಬೇಕೆಂದು ಭಕ್ತರು ಕೇಳಿಕೊಳುತ್ತಿದ್ದಾರೆ.
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…