ಕೊನಘಟ್ಟ ದೇವಾಲುಗಳ ಪಟ್ಟಿಗೆ ಮತ್ತೊಂದು ದೇವಾಲಯ ಸೇರ್ಪಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟದಲ್ಲಿ 20ಕ್ಕೂ ಹೆಚ್ಚು ದೇವಾಲಯಗಳಿವೆ. ದೊಡ್ಡಬಳ್ಳಾಪುರ ತಾಲ್ಲೂಕಿನ ದೇವಾಲಯಗಳ ತವರೂರು ಎಂದು ಕೊನಘಟ್ಟ ಹೆಸರುವಾಸಿಯಾಗಿದೆ. ಇಲ್ಲಿ ನೆಡೆಯುವ ಕರಗ ಮಹೋತ್ಸವವಂತೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ಪ್ರಖ್ಯಾತಿಯಾಗಿದೆ. ಸಪ್ಪಲಮ್ಮ, ಮಾರಮ್ಮ, ದೊಡ್ಡಮ್ಮ, ಪಳೇಕಮ್ಮ, ಹೀಗೆ ಇನ್ನೂ ಹಲವಾರು ಶಕ್ತಿ ದೇವಾಲಯಗಳಿದ್ದು, ಈಗ ಇಲ್ಲಿರುವ ಶಕ್ತಿ ದೇವಾಲಯಗಳ ಪಟ್ಟಿಗೆ ಕೊನಘಟ್ಟದಲ್ಲಿ ಚೌಡೇಶ್ವರಿ ಅಮ್ಮನವರ ದೇವಾಲಯ ಸಹ ಸೇರ್ಪಡೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಚೌಡೇಶ್ವರಿ ಅಮ್ಮನವರ ಸನ್ನಿಧಿಗೆ ಭಕ್ತಾದಿಗಳ ದಂಡು ರಾಜ್ಯದ ಹಲವಾರು ಕಡೆಗಳಿಂದ ಹರಿದು ಬರುತ್ತಿದೆ. ಪ್ರತಿ ಮಂಗಳವಾರ ಮತ್ತು ಶುಕ್ರವಾರ ಅಮ್ಮನವರು ಹೂ ಪ್ರಸಾದ‌ ನೀಡುತ್ತಾರೆ. ಅಮವಾಸ್ಯೆ ಮತ್ತು ಹುಣ್ಣಿಮೆಯ ದಿನಗಳಲ್ಲಿ ತೀರ್ಥ ಸ್ನಾನವಿರುತ್ತದೆ. ಹಾಗೂ ಅಮ್ಮನ ನಂಬಿದರೆ ಸಕಲವೂ ಸುಲಲಿತವಾಗಿ ಭಕ್ತರ ಮನೆಯ ಕಷ್ಟಗಳು ತಂತಾನೆ ಕರಗಿ ಹೋಗುತ್ತಿರುವುದಾಗಿ ತಾಯಿ ಚೌಡೇಶ್ವರಿಯನ್ನ ನಂಬಿರುವ ಭಕ್ತರು ಹೇಳುತ್ತಿದ್ದಾರೆ.

ತಾಯಿ ಚೌಡೇಶ್ವರಿ ಮಾತೆಯ ಆಶೀರ್ವಾದ ಎಲ್ಲರಿಗೂ ಸಿಗುತ್ತಿದ್ದರೂ ಪ್ರಸ್ತುತ ಮಾತೆಗೆ ಒಂದು ನಿಗದಿತ ಗುಡಿ ಇಲ್ಲದಿರುವುದು ನೋವಿನ ವಿಚಾರವಾಗಿದೆಯೆಂದು ಭಕ್ತರು ತಮ್ಮ ನೋವನ್ನ ತೋಡಿಕೊಂಡಿದ್ದು ಮಾತೆಗೆ ಒಂದು ಗುಡಿಯನ್ನ ಕಟ್ಟಬೇಕೆಂದು ಭಕ್ತರು ಬಯಸಿದ್ದು ನಾಡಿನ ಜನರ ತನು ಮನ ಧನವನ್ನು ನಿರೀಕ್ಷಿಸಿದ್ದು ಪ್ರಸ್ತುತ ಅರ್ಚಕರ ಸ್ವಗೃಹದಲ್ಲಿ ದೇವಿಯನ್ನ ಪೂಜಿಸಲಾಗುತ್ತಿದೆ. ಆದಷ್ಟು ಬೇಗ ಸ್ಥಳೀಯ ಆಡಳಿತ ತಾಯಿಗೆ ಒಂದು ಸ್ಥಳವನ್ನ ಗುರುತಿಸಿ ಗುಡಿ ಕಟ್ಟುವ ಕೆಲಸಕ್ಕೆ ಮುಂದಾಗಬೇಕೆಂದು ಭಕ್ತರು ಕೇಳಿಕೊಳುತ್ತಿದ್ದಾರೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

16 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago