ಕೊನಘಟ್ಟ ದೇವಾಲುಗಳ ಪಟ್ಟಿಗೆ ಮತ್ತೊಂದು ದೇವಾಲಯ ಸೇರ್ಪಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟದಲ್ಲಿ 20ಕ್ಕೂ ಹೆಚ್ಚು ದೇವಾಲಯಗಳಿವೆ. ದೊಡ್ಡಬಳ್ಳಾಪುರ ತಾಲ್ಲೂಕಿನ ದೇವಾಲಯಗಳ ತವರೂರು ಎಂದು ಕೊನಘಟ್ಟ ಹೆಸರುವಾಸಿಯಾಗಿದೆ. ಇಲ್ಲಿ ನೆಡೆಯುವ ಕರಗ ಮಹೋತ್ಸವವಂತೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ಪ್ರಖ್ಯಾತಿಯಾಗಿದೆ. ಸಪ್ಪಲಮ್ಮ, ಮಾರಮ್ಮ, ದೊಡ್ಡಮ್ಮ, ಪಳೇಕಮ್ಮ, ಹೀಗೆ ಇನ್ನೂ ಹಲವಾರು ಶಕ್ತಿ ದೇವಾಲಯಗಳಿದ್ದು, ಈಗ ಇಲ್ಲಿರುವ ಶಕ್ತಿ ದೇವಾಲಯಗಳ ಪಟ್ಟಿಗೆ ಕೊನಘಟ್ಟದಲ್ಲಿ ಚೌಡೇಶ್ವರಿ ಅಮ್ಮನವರ ದೇವಾಲಯ ಸಹ ಸೇರ್ಪಡೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಚೌಡೇಶ್ವರಿ ಅಮ್ಮನವರ ಸನ್ನಿಧಿಗೆ ಭಕ್ತಾದಿಗಳ ದಂಡು ರಾಜ್ಯದ ಹಲವಾರು ಕಡೆಗಳಿಂದ ಹರಿದು ಬರುತ್ತಿದೆ. ಪ್ರತಿ ಮಂಗಳವಾರ ಮತ್ತು ಶುಕ್ರವಾರ ಅಮ್ಮನವರು ಹೂ ಪ್ರಸಾದ‌ ನೀಡುತ್ತಾರೆ. ಅಮವಾಸ್ಯೆ ಮತ್ತು ಹುಣ್ಣಿಮೆಯ ದಿನಗಳಲ್ಲಿ ತೀರ್ಥ ಸ್ನಾನವಿರುತ್ತದೆ. ಹಾಗೂ ಅಮ್ಮನ ನಂಬಿದರೆ ಸಕಲವೂ ಸುಲಲಿತವಾಗಿ ಭಕ್ತರ ಮನೆಯ ಕಷ್ಟಗಳು ತಂತಾನೆ ಕರಗಿ ಹೋಗುತ್ತಿರುವುದಾಗಿ ತಾಯಿ ಚೌಡೇಶ್ವರಿಯನ್ನ ನಂಬಿರುವ ಭಕ್ತರು ಹೇಳುತ್ತಿದ್ದಾರೆ.

ತಾಯಿ ಚೌಡೇಶ್ವರಿ ಮಾತೆಯ ಆಶೀರ್ವಾದ ಎಲ್ಲರಿಗೂ ಸಿಗುತ್ತಿದ್ದರೂ ಪ್ರಸ್ತುತ ಮಾತೆಗೆ ಒಂದು ನಿಗದಿತ ಗುಡಿ ಇಲ್ಲದಿರುವುದು ನೋವಿನ ವಿಚಾರವಾಗಿದೆಯೆಂದು ಭಕ್ತರು ತಮ್ಮ ನೋವನ್ನ ತೋಡಿಕೊಂಡಿದ್ದು ಮಾತೆಗೆ ಒಂದು ಗುಡಿಯನ್ನ ಕಟ್ಟಬೇಕೆಂದು ಭಕ್ತರು ಬಯಸಿದ್ದು ನಾಡಿನ ಜನರ ತನು ಮನ ಧನವನ್ನು ನಿರೀಕ್ಷಿಸಿದ್ದು ಪ್ರಸ್ತುತ ಅರ್ಚಕರ ಸ್ವಗೃಹದಲ್ಲಿ ದೇವಿಯನ್ನ ಪೂಜಿಸಲಾಗುತ್ತಿದೆ. ಆದಷ್ಟು ಬೇಗ ಸ್ಥಳೀಯ ಆಡಳಿತ ತಾಯಿಗೆ ಒಂದು ಸ್ಥಳವನ್ನ ಗುರುತಿಸಿ ಗುಡಿ ಕಟ್ಟುವ ಕೆಲಸಕ್ಕೆ ಮುಂದಾಗಬೇಕೆಂದು ಭಕ್ತರು ಕೇಳಿಕೊಳುತ್ತಿದ್ದಾರೆ.

Ramesh Babu

Journalist

Recent Posts

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

14 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

19 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

23 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

23 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

1 day ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

1 day ago