ಕೊನಘಟ್ಟ ದೇವಾಲುಗಳ ಪಟ್ಟಿಗೆ ಮತ್ತೊಂದು ದೇವಾಲಯ ಸೇರ್ಪಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟದಲ್ಲಿ 20ಕ್ಕೂ ಹೆಚ್ಚು ದೇವಾಲಯಗಳಿವೆ. ದೊಡ್ಡಬಳ್ಳಾಪುರ ತಾಲ್ಲೂಕಿನ ದೇವಾಲಯಗಳ ತವರೂರು ಎಂದು ಕೊನಘಟ್ಟ ಹೆಸರುವಾಸಿಯಾಗಿದೆ. ಇಲ್ಲಿ ನೆಡೆಯುವ ಕರಗ ಮಹೋತ್ಸವವಂತೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ಪ್ರಖ್ಯಾತಿಯಾಗಿದೆ. ಸಪ್ಪಲಮ್ಮ, ಮಾರಮ್ಮ, ದೊಡ್ಡಮ್ಮ, ಪಳೇಕಮ್ಮ, ಹೀಗೆ ಇನ್ನೂ ಹಲವಾರು ಶಕ್ತಿ ದೇವಾಲಯಗಳಿದ್ದು, ಈಗ ಇಲ್ಲಿರುವ ಶಕ್ತಿ ದೇವಾಲಯಗಳ ಪಟ್ಟಿಗೆ ಕೊನಘಟ್ಟದಲ್ಲಿ ಚೌಡೇಶ್ವರಿ ಅಮ್ಮನವರ ದೇವಾಲಯ ಸಹ ಸೇರ್ಪಡೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಚೌಡೇಶ್ವರಿ ಅಮ್ಮನವರ ಸನ್ನಿಧಿಗೆ ಭಕ್ತಾದಿಗಳ ದಂಡು ರಾಜ್ಯದ ಹಲವಾರು ಕಡೆಗಳಿಂದ ಹರಿದು ಬರುತ್ತಿದೆ. ಪ್ರತಿ ಮಂಗಳವಾರ ಮತ್ತು ಶುಕ್ರವಾರ ಅಮ್ಮನವರು ಹೂ ಪ್ರಸಾದ‌ ನೀಡುತ್ತಾರೆ. ಅಮವಾಸ್ಯೆ ಮತ್ತು ಹುಣ್ಣಿಮೆಯ ದಿನಗಳಲ್ಲಿ ತೀರ್ಥ ಸ್ನಾನವಿರುತ್ತದೆ. ಹಾಗೂ ಅಮ್ಮನ ನಂಬಿದರೆ ಸಕಲವೂ ಸುಲಲಿತವಾಗಿ ಭಕ್ತರ ಮನೆಯ ಕಷ್ಟಗಳು ತಂತಾನೆ ಕರಗಿ ಹೋಗುತ್ತಿರುವುದಾಗಿ ತಾಯಿ ಚೌಡೇಶ್ವರಿಯನ್ನ ನಂಬಿರುವ ಭಕ್ತರು ಹೇಳುತ್ತಿದ್ದಾರೆ.

ತಾಯಿ ಚೌಡೇಶ್ವರಿ ಮಾತೆಯ ಆಶೀರ್ವಾದ ಎಲ್ಲರಿಗೂ ಸಿಗುತ್ತಿದ್ದರೂ ಪ್ರಸ್ತುತ ಮಾತೆಗೆ ಒಂದು ನಿಗದಿತ ಗುಡಿ ಇಲ್ಲದಿರುವುದು ನೋವಿನ ವಿಚಾರವಾಗಿದೆಯೆಂದು ಭಕ್ತರು ತಮ್ಮ ನೋವನ್ನ ತೋಡಿಕೊಂಡಿದ್ದು ಮಾತೆಗೆ ಒಂದು ಗುಡಿಯನ್ನ ಕಟ್ಟಬೇಕೆಂದು ಭಕ್ತರು ಬಯಸಿದ್ದು ನಾಡಿನ ಜನರ ತನು ಮನ ಧನವನ್ನು ನಿರೀಕ್ಷಿಸಿದ್ದು ಪ್ರಸ್ತುತ ಅರ್ಚಕರ ಸ್ವಗೃಹದಲ್ಲಿ ದೇವಿಯನ್ನ ಪೂಜಿಸಲಾಗುತ್ತಿದೆ. ಆದಷ್ಟು ಬೇಗ ಸ್ಥಳೀಯ ಆಡಳಿತ ತಾಯಿಗೆ ಒಂದು ಸ್ಥಳವನ್ನ ಗುರುತಿಸಿ ಗುಡಿ ಕಟ್ಟುವ ಕೆಲಸಕ್ಕೆ ಮುಂದಾಗಬೇಕೆಂದು ಭಕ್ತರು ಕೇಳಿಕೊಳುತ್ತಿದ್ದಾರೆ.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

25 minutes ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

11 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

12 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

17 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

19 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

22 hours ago