ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

.

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಕೊನಘಟ್ಟ ‘ಬಿ’ ತಂಡ ಮುಡಿಗೇರಿಸಿಕೊಂಡಿತು.

ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ 50 ಸಾವಿರ ಬಹುಮಾನ ಜೊತೆಗೆ ಆಕರ್ಷಕ ಟ್ರೋಫಿ, ಕುರಿಯನ್ನು ನೀಡಿ ಪ್ರೋತ್ಸಾಹಿಸಲಾಯಿತು.

ರನ್ನರ ಅಪ್ ತಂಡಕ್ಕೆ 30ಸಾವಿರ ನಗದು, ಆಕರ್ಷಕ ಟ್ರೋಫಿಯನ್ನು ನೀಡಲಾಯಿತು.

ಬಹುಮಾನ ವಿತರಿಸಿ ಕೊನಘಟ್ಟ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ನಾರಾಯಣಸ್ವಾಮಿ ಮಾತನಾಡಿ, ದೈಹಿಕ ಚಟುವಟಿಕೆಯ ಮುಂದುವರಿದ ಭಾಗವೇ ಕ್ರೀಡೆ, ಪ್ರತಿಯೊಬ್ಬರೂ ಚಿಕ್ಕವಯಸ್ಸಿನಿಂದಲೇ ಕ್ರೀಡೆಯ ಬಗ್ಗೆ ಆಸಕ್ತಿ ಹಾಗೂ ಮಹತ್ವವನ್ನು ಅರಿತುಕೊಳ್ಳಬೇಕಾದ ಅಗತ್ಯವಿದೆ. ಇಂದಿನ ಯುವಜನತೆಯು ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಬೇಕು ಎಂದು ತಿಳಿಸಿದರು.

ಯುವಕರು ಉತ್ಸುಕತೆಯಿಂದ ಕ್ರೀಡೆಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಪ್ರತಿಭೆಯನ್ನು ಹೊರಹೊಮ್ಮಿಸಬೇಕು. ಅಲ್ಲದೇ ಯುವ ಶಕ್ತಿ ಸಂಘಟನಾತ್ಮಕ ಕ್ರೀಡಾ ಮನೋಭಾವ ಮೈಗೂಡಿಸಿಕೊಳ್ಳಬೇಕು. ಐಪಿಎಲ್‌, ಕೆಪಿಎಲ್‌, ರಣಜಿ, ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಅವಕಾಶ ದೊರೆಯುವಂತೆ ಆಗಲಿ ಎಂದು ಆಶಿಸಿದರು.

ಯಾವುದೆ ಕ್ರೀಡೆ ಮೋಜಿಗಾಗಿಯಲ್ಲ. ಕ್ರೀಡೆಯನ್ನು ಪ್ರತಿಯೊಬ್ಬರು ಅಭ್ಯಾಸ ಮಾಡುವುದರಿಂದ ಆರೋಗ್ಯ ಮತ್ತು ಪ್ರತಿಭಾವಂತ ಕ್ರೀಡಾಪಟುಗಳಿಗೆ ಉತ್ತಮ ಭವಿಷ್ಯವಿದೆ ಸೋಲು ಗೆಲುವಿನ ಲೆಕ್ಕ ಮಾಡದೇ ಸ್ಪರ್ಧೆಗಳಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೊಡುಗೆ ನೀಡಬೇಕು. ಯುವಕರು ದುಶ್ಚಟಗಳಿಂದ ದೂರ ಇರಬೇಕು. ಉತ್ತಮ ಆರೋಗ್ಯಕ್ಕೆ ಕ್ರೀಡೆ, ವ್ಯಾಯಾಮ, ಪ್ರಾಣಾಯಾಮ ಹಾಗೂ ದೈಹಿಕ ಕಸರತ್ತು ಮಾಡಬೇಕು ಎಂದು ಕ್ರೀಡಾಪಟುಗಳಿಗೆ ಸಲಹೆ ನೀಡಿದರು .

ಈ ಸಂದರ್ಭದಲ್ಲಿ ಊರಿನ‌ ಹಿರಿಯರ ಮುಖಂಡರು, ಯುವಕರು, ಕ್ರೀಡಾ ಸ್ಪರ್ಧಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು..

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

19 minutes ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

17 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

17 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

20 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago