ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

.

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಕೊನಘಟ್ಟ ‘ಬಿ’ ತಂಡ ಮುಡಿಗೇರಿಸಿಕೊಂಡಿತು.

ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ 50 ಸಾವಿರ ಬಹುಮಾನ ಜೊತೆಗೆ ಆಕರ್ಷಕ ಟ್ರೋಫಿ, ಕುರಿಯನ್ನು ನೀಡಿ ಪ್ರೋತ್ಸಾಹಿಸಲಾಯಿತು.

ರನ್ನರ ಅಪ್ ತಂಡಕ್ಕೆ 30ಸಾವಿರ ನಗದು, ಆಕರ್ಷಕ ಟ್ರೋಫಿಯನ್ನು ನೀಡಲಾಯಿತು.

ಬಹುಮಾನ ವಿತರಿಸಿ ಕೊನಘಟ್ಟ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ನಾರಾಯಣಸ್ವಾಮಿ ಮಾತನಾಡಿ, ದೈಹಿಕ ಚಟುವಟಿಕೆಯ ಮುಂದುವರಿದ ಭಾಗವೇ ಕ್ರೀಡೆ, ಪ್ರತಿಯೊಬ್ಬರೂ ಚಿಕ್ಕವಯಸ್ಸಿನಿಂದಲೇ ಕ್ರೀಡೆಯ ಬಗ್ಗೆ ಆಸಕ್ತಿ ಹಾಗೂ ಮಹತ್ವವನ್ನು ಅರಿತುಕೊಳ್ಳಬೇಕಾದ ಅಗತ್ಯವಿದೆ. ಇಂದಿನ ಯುವಜನತೆಯು ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಬೇಕು ಎಂದು ತಿಳಿಸಿದರು.

ಯುವಕರು ಉತ್ಸುಕತೆಯಿಂದ ಕ್ರೀಡೆಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಪ್ರತಿಭೆಯನ್ನು ಹೊರಹೊಮ್ಮಿಸಬೇಕು. ಅಲ್ಲದೇ ಯುವ ಶಕ್ತಿ ಸಂಘಟನಾತ್ಮಕ ಕ್ರೀಡಾ ಮನೋಭಾವ ಮೈಗೂಡಿಸಿಕೊಳ್ಳಬೇಕು. ಐಪಿಎಲ್‌, ಕೆಪಿಎಲ್‌, ರಣಜಿ, ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಅವಕಾಶ ದೊರೆಯುವಂತೆ ಆಗಲಿ ಎಂದು ಆಶಿಸಿದರು.

ಯಾವುದೆ ಕ್ರೀಡೆ ಮೋಜಿಗಾಗಿಯಲ್ಲ. ಕ್ರೀಡೆಯನ್ನು ಪ್ರತಿಯೊಬ್ಬರು ಅಭ್ಯಾಸ ಮಾಡುವುದರಿಂದ ಆರೋಗ್ಯ ಮತ್ತು ಪ್ರತಿಭಾವಂತ ಕ್ರೀಡಾಪಟುಗಳಿಗೆ ಉತ್ತಮ ಭವಿಷ್ಯವಿದೆ ಸೋಲು ಗೆಲುವಿನ ಲೆಕ್ಕ ಮಾಡದೇ ಸ್ಪರ್ಧೆಗಳಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೊಡುಗೆ ನೀಡಬೇಕು. ಯುವಕರು ದುಶ್ಚಟಗಳಿಂದ ದೂರ ಇರಬೇಕು. ಉತ್ತಮ ಆರೋಗ್ಯಕ್ಕೆ ಕ್ರೀಡೆ, ವ್ಯಾಯಾಮ, ಪ್ರಾಣಾಯಾಮ ಹಾಗೂ ದೈಹಿಕ ಕಸರತ್ತು ಮಾಡಬೇಕು ಎಂದು ಕ್ರೀಡಾಪಟುಗಳಿಗೆ ಸಲಹೆ ನೀಡಿದರು .

ಈ ಸಂದರ್ಭದಲ್ಲಿ ಊರಿನ‌ ಹಿರಿಯರ ಮುಖಂಡರು, ಯುವಕರು, ಕ್ರೀಡಾ ಸ್ಪರ್ಧಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು..

Ramesh Babu

Journalist

Recent Posts

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

3 hours ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

13 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

16 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

21 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

22 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

22 hours ago