ಕೊನಘಟ್ಟ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರೇ ಇಲ್ಲ: ಮಕ್ಕಳ ಪರದಾಟ: ಗ್ರಾಮಸ್ಥರ ಆಕ್ರೋಶ

ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ 2017ರಲ್ಲಿ ಪ್ರೌಢಶಾಲೆ ಕಟ್ಟಡ ಉದ್ಘಾಟನೆಗೊಂಡಿದೆ. ಇದೀಗ ನೆಲ ಹಾಗೂ ಗೋಡೆಗಳಿಗೆ ಹಾಕಲಾಗಿದ್ದ ಸಿಮೆಂಟ್ ಕಿತ್ತು ಬರುತ್ತಿದೆ. ಇದರಿಂದ ಮಕ್ಕಳು ಯಾವುದೇ ತೊಂದರೆ ಇಲ್ಲದೇ ಕುಳಿತುಕೊಂಡು ಪಾಠ ಕೇಳೋದಕ್ಕೆ  ಅಗದ ಪರಿಸ್ಥಿತಿಗೆ ಬಂದು ತಲುಪಿದೆ. ಜೊತೆಗೆ ಕೆಲ ಮೂಲಭೂತ ಸೌಕರ್ಯ‌ ಸೇರಿದಂತೆ ಕಳೆದ ಕೆಲ ತಿಂಗಳುಗಳಿಂದ ಇಂಗ್ಲಿಷ್ ಶಿಕ್ಷಕರು ಇಲ್ಲದೇ ವಿದ್ಯಾರ್ಥಿಗಳು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ತರಗತಿಗಳ ಒಳಭಾಗದಲ್ಲಿ ರಸ್ತೆಗಳಲ್ಲಿ‌ ಗುಂಡಿ ಬಿದ್ದಂತೆ ಗುಂಡಿಗಳು ಬಿದ್ದಿದ್ದು, ಅದರಲ್ಲೇ ಮಕ್ಕಳಿಗೆ ಪಾಠ ಪ್ರವಚನ ನಡೆಯುತ್ತವೆ. ಕಳೆದ ಆರೇಳು ತಿಂಗಳುಗಳಿಂದ ಇಂಗ್ಲಿಷ್ ಶಿಕ್ಷಕರು ಇಲ್ಲ. ಮಕ್ಕಳಿಗೆ ವಿಷಯವಾರು ಬೋಧನೆ ಸಿಗದಿದ್ದರೆ ಶಾಲೆಗೆ ಹಾಗೂ ಮಕ್ಕಳಿಗೆ ಉತ್ತಮ ಫಲಿತಾಂಶ ಬರುವುದಾದರೂ ಹೇಗೆ? ದಯಮಾಡಿ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ‌ ಕೂಡಲೇ ಹಾಳಾಗಿರುವ ನೆಲ ಹಾಗೂ ಗೋಡೆಗಳನ್ನು ದುರಸ್ತಿಗೊಳಿಸಿ, ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಕೂಡಲೇ ಇಂಗ್ಲಿಷ್ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಬೇಕು ಎಂದು ಊರಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕೊನಘಟ್ಟ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ 71 ವಿದ್ಯಾರ್ಥಿಗಳ ಶಿಕ್ಷಣ ಡೋಲಾಯಮಾನವಾಗಿದೆ. ಇನ್ನು ಉತ್ತಮ ಫಲಿತಾಂಶ ನಿರೀಕ್ಷಿಸಲು ಹೇಗೆ ಸಾಧ್ಯ. ಎಸ್ ಡಿಎಂಸಿ ಏಕೋ ಇದರ ಬಗ್ಗೆ ಎಚ್ಚರ ವಹಿಸುತ್ತಿಲ್ಲ. ಇನ್ನಾದರೂ ಸಂಬಂಧಪಟ್ಟವರು ನಿಗಾ ವಹಿಸಬೇಕು ಎಂದು ಹೇಳಿದ್ದಾರೆ.

ಸರ್ಕಾರಿ ಶಾಲೆಗಳನ್ನು ಬೆಳೆಸಬೇಕು. ಮಕ್ಕಳನ್ನ ಸರ್ಕಾರಿ ಶಾಲೆಯಲ್ಲೇ ಓದಿಸಿ ಎಂದು ಹೇಳುವ ರಾಜಕಾರಣಿಗಳು ಸರ್ಕಾರಿ ಶಾಲೆಗಳಿಗೊಮ್ಮೆ ಭೇಟಿ ನೀಡಬೇಕು. ಅಲ್ಲಿನ ಅವ್ಯವಸ್ಥೆ ಪರಿಶೀಲಿಸಿ ಸರಿಪಡಿಸುವ ಕೆಲಸ ಮಾಡಬೇಕು. ಸರ್ಕಾರಿ ಶಾಲೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿದರೆ,  ಖಾಸಗಿ ಶಾಲೆಗಳತ್ತ ಯಾರು ಮುಖ‌ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಶಾಲೆಯಲ್ಲಿ ಇಂಗ್ಲಿಷ್ ಪಾಠ ಮಾಡುವುದಕ್ಕೆ ಅತಿಥಿ ಶಿಕ್ಷಕರನ್ನು ನೇಮಿಸಲಾಗಿತ್ತು, ಅವರು ಕಾರಣಾಂತರಗಳಿಂದ ಬಿಟ್ಟು ಹೋಗಿದ್ದಾರೆ. ಕೂಡಲೇ ಇನ್ನೆರಡು ದಿನಗಳಲ್ಲಿ ಹೊಸ ಅತಿಥಿ ಶಿಕ್ಷಕರನ್ನು ನಿಯೋಜನೆ ಮಾಡಲಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ನೋಡಿಕೊಳ್ಳಲಾಗುವುದು ಎಂದು ಪಬ್ಲಿಕ್ ಮಿರ್ಚಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮಹಿಳೆಯ ದಾರುಣ ಸಾವು

ರೆಸಾರ್ಟ್‌ ಸ್ವಿಮ್ಮಿಂಗ್ ಪೂಲ್ ಗೆ ಧುಮುಕಿದ ಮಹಿಳೆಯೊಬ್ಬರು ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ…

6 hours ago

ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ವಿದ್ಯುತ್ ಕಂಬ

ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬ ಉರುಳಿಬಿದ್ದಿದೆ. ದೊಡ್ಡಬಳ್ಳಾಪುರ ತಾಲೂಕಿನ…

6 hours ago

ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

ಕೊಡಗು ಜಿಲ್ಲೆಯ ವಿವಿಧೆಡೆ ಇಂದು ಸಂಜೆ ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ವಿರಾಜಪೇಟೆ ತಾಲೂಕಿನ ವಿವಿಧ ಭಾಗಗಳು ಪೊನ್ನಂಪೇಟೆ…

8 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 6.5 ಕೋಟಿ ರೂ. ಮೌಲ್ಯದ 18.6 ಕೆಜಿ ಹೈಡ್ರೋಪೋನಿಕ್ ಗಾಂಜಾ ಸೀಜ್

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಎರಡು‌ ಪ್ರತ್ಯೇಕ ಪ್ರಕರಣಗಳಲ್ಲಿ‌ ಕೋಟಿ ಕೋಟಿ ಮೌಲ್ಯದ…

8 hours ago

ಚರಂಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ..!

ಚರಂಡಿಯಲ್ಲಿ‌ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸ್ವರ್ಣಾದ್ರಿ ಹೋಟೆಲ್ ಮುಂಭಾಗದಲ್ಲಿ ನಡೆದಿದೆ... ಮಹಿಳೆ…

12 hours ago

ಮಾ.6ರಂದು ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ: ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹ

ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…

15 hours ago