ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ 2017ರಲ್ಲಿ ಪ್ರೌಢಶಾಲೆ ಕಟ್ಟಡ ಉದ್ಘಾಟನೆಗೊಂಡಿದೆ. ಇದೀಗ ನೆಲ ಹಾಗೂ ಗೋಡೆಗಳಿಗೆ ಹಾಕಲಾಗಿದ್ದ ಸಿಮೆಂಟ್ ಕಿತ್ತು ಬರುತ್ತಿದೆ. ಇದರಿಂದ ಮಕ್ಕಳು ಯಾವುದೇ ತೊಂದರೆ ಇಲ್ಲದೇ ಕುಳಿತುಕೊಂಡು ಪಾಠ ಕೇಳೋದಕ್ಕೆ ಅಗದ ಪರಿಸ್ಥಿತಿಗೆ ಬಂದು ತಲುಪಿದೆ. ಜೊತೆಗೆ ಕೆಲ ಮೂಲಭೂತ ಸೌಕರ್ಯ ಸೇರಿದಂತೆ ಕಳೆದ ಕೆಲ ತಿಂಗಳುಗಳಿಂದ ಇಂಗ್ಲಿಷ್ ಶಿಕ್ಷಕರು ಇಲ್ಲದೇ ವಿದ್ಯಾರ್ಥಿಗಳು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಕೊನಘಟ್ಟ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ 71 ವಿದ್ಯಾರ್ಥಿಗಳ ಶಿಕ್ಷಣ ಡೋಲಾಯಮಾನವಾಗಿದೆ. ಇನ್ನು ಉತ್ತಮ ಫಲಿತಾಂಶ ನಿರೀಕ್ಷಿಸಲು ಹೇಗೆ ಸಾಧ್ಯ. ಎಸ್ ಡಿಎಂಸಿ ಏಕೋ ಇದರ ಬಗ್ಗೆ ಎಚ್ಚರ ವಹಿಸುತ್ತಿಲ್ಲ. ಇನ್ನಾದರೂ ಸಂಬಂಧಪಟ್ಟವರು ನಿಗಾ ವಹಿಸಬೇಕು ಎಂದು ಹೇಳಿದ್ದಾರೆ.
ಸರ್ಕಾರಿ ಶಾಲೆಗಳನ್ನು ಬೆಳೆಸಬೇಕು. ಮಕ್ಕಳನ್ನ ಸರ್ಕಾರಿ ಶಾಲೆಯಲ್ಲೇ ಓದಿಸಿ ಎಂದು ಹೇಳುವ ರಾಜಕಾರಣಿಗಳು ಸರ್ಕಾರಿ ಶಾಲೆಗಳಿಗೊಮ್ಮೆ ಭೇಟಿ ನೀಡಬೇಕು. ಅಲ್ಲಿನ ಅವ್ಯವಸ್ಥೆ ಪರಿಶೀಲಿಸಿ ಸರಿಪಡಿಸುವ ಕೆಲಸ ಮಾಡಬೇಕು. ಸರ್ಕಾರಿ ಶಾಲೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿದರೆ, ಖಾಸಗಿ ಶಾಲೆಗಳತ್ತ ಯಾರು ಮುಖ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಶಾಲೆಯಲ್ಲಿ ಇಂಗ್ಲಿಷ್ ಪಾಠ ಮಾಡುವುದಕ್ಕೆ ಅತಿಥಿ ಶಿಕ್ಷಕರನ್ನು ನೇಮಿಸಲಾಗಿತ್ತು, ಅವರು ಕಾರಣಾಂತರಗಳಿಂದ ಬಿಟ್ಟು ಹೋಗಿದ್ದಾರೆ. ಕೂಡಲೇ ಇನ್ನೆರಡು ದಿನಗಳಲ್ಲಿ ಹೊಸ ಅತಿಥಿ ಶಿಕ್ಷಕರನ್ನು ನಿಯೋಜನೆ ಮಾಡಲಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ನೋಡಿಕೊಳ್ಳಲಾಗುವುದು ಎಂದು ಪಬ್ಲಿಕ್ ಮಿರ್ಚಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…