ಕೊನಘಟ್ಟ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರೇ ಇಲ್ಲ: ಮಕ್ಕಳ ಪರದಾಟ: ಗ್ರಾಮಸ್ಥರ ಆಕ್ರೋಶ

ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ 2017ರಲ್ಲಿ ಪ್ರೌಢಶಾಲೆ ಕಟ್ಟಡ ಉದ್ಘಾಟನೆಗೊಂಡಿದೆ. ಇದೀಗ ನೆಲ ಹಾಗೂ ಗೋಡೆಗಳಿಗೆ ಹಾಕಲಾಗಿದ್ದ ಸಿಮೆಂಟ್ ಕಿತ್ತು ಬರುತ್ತಿದೆ. ಇದರಿಂದ ಮಕ್ಕಳು ಯಾವುದೇ ತೊಂದರೆ ಇಲ್ಲದೇ ಕುಳಿತುಕೊಂಡು ಪಾಠ ಕೇಳೋದಕ್ಕೆ  ಅಗದ ಪರಿಸ್ಥಿತಿಗೆ ಬಂದು ತಲುಪಿದೆ. ಜೊತೆಗೆ ಕೆಲ ಮೂಲಭೂತ ಸೌಕರ್ಯ‌ ಸೇರಿದಂತೆ ಕಳೆದ ಕೆಲ ತಿಂಗಳುಗಳಿಂದ ಇಂಗ್ಲಿಷ್ ಶಿಕ್ಷಕರು ಇಲ್ಲದೇ ವಿದ್ಯಾರ್ಥಿಗಳು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ತರಗತಿಗಳ ಒಳಭಾಗದಲ್ಲಿ ರಸ್ತೆಗಳಲ್ಲಿ‌ ಗುಂಡಿ ಬಿದ್ದಂತೆ ಗುಂಡಿಗಳು ಬಿದ್ದಿದ್ದು, ಅದರಲ್ಲೇ ಮಕ್ಕಳಿಗೆ ಪಾಠ ಪ್ರವಚನ ನಡೆಯುತ್ತವೆ. ಕಳೆದ ಆರೇಳು ತಿಂಗಳುಗಳಿಂದ ಇಂಗ್ಲಿಷ್ ಶಿಕ್ಷಕರು ಇಲ್ಲ. ಮಕ್ಕಳಿಗೆ ವಿಷಯವಾರು ಬೋಧನೆ ಸಿಗದಿದ್ದರೆ ಶಾಲೆಗೆ ಹಾಗೂ ಮಕ್ಕಳಿಗೆ ಉತ್ತಮ ಫಲಿತಾಂಶ ಬರುವುದಾದರೂ ಹೇಗೆ? ದಯಮಾಡಿ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ‌ ಕೂಡಲೇ ಹಾಳಾಗಿರುವ ನೆಲ ಹಾಗೂ ಗೋಡೆಗಳನ್ನು ದುರಸ್ತಿಗೊಳಿಸಿ, ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಕೂಡಲೇ ಇಂಗ್ಲಿಷ್ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಬೇಕು ಎಂದು ಊರಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕೊನಘಟ್ಟ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ 71 ವಿದ್ಯಾರ್ಥಿಗಳ ಶಿಕ್ಷಣ ಡೋಲಾಯಮಾನವಾಗಿದೆ. ಇನ್ನು ಉತ್ತಮ ಫಲಿತಾಂಶ ನಿರೀಕ್ಷಿಸಲು ಹೇಗೆ ಸಾಧ್ಯ. ಎಸ್ ಡಿಎಂಸಿ ಏಕೋ ಇದರ ಬಗ್ಗೆ ಎಚ್ಚರ ವಹಿಸುತ್ತಿಲ್ಲ. ಇನ್ನಾದರೂ ಸಂಬಂಧಪಟ್ಟವರು ನಿಗಾ ವಹಿಸಬೇಕು ಎಂದು ಹೇಳಿದ್ದಾರೆ.

ಸರ್ಕಾರಿ ಶಾಲೆಗಳನ್ನು ಬೆಳೆಸಬೇಕು. ಮಕ್ಕಳನ್ನ ಸರ್ಕಾರಿ ಶಾಲೆಯಲ್ಲೇ ಓದಿಸಿ ಎಂದು ಹೇಳುವ ರಾಜಕಾರಣಿಗಳು ಸರ್ಕಾರಿ ಶಾಲೆಗಳಿಗೊಮ್ಮೆ ಭೇಟಿ ನೀಡಬೇಕು. ಅಲ್ಲಿನ ಅವ್ಯವಸ್ಥೆ ಪರಿಶೀಲಿಸಿ ಸರಿಪಡಿಸುವ ಕೆಲಸ ಮಾಡಬೇಕು. ಸರ್ಕಾರಿ ಶಾಲೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿದರೆ,  ಖಾಸಗಿ ಶಾಲೆಗಳತ್ತ ಯಾರು ಮುಖ‌ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಶಾಲೆಯಲ್ಲಿ ಇಂಗ್ಲಿಷ್ ಪಾಠ ಮಾಡುವುದಕ್ಕೆ ಅತಿಥಿ ಶಿಕ್ಷಕರನ್ನು ನೇಮಿಸಲಾಗಿತ್ತು, ಅವರು ಕಾರಣಾಂತರಗಳಿಂದ ಬಿಟ್ಟು ಹೋಗಿದ್ದಾರೆ. ಕೂಡಲೇ ಇನ್ನೆರಡು ದಿನಗಳಲ್ಲಿ ಹೊಸ ಅತಿಥಿ ಶಿಕ್ಷಕರನ್ನು ನಿಯೋಜನೆ ಮಾಡಲಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ನೋಡಿಕೊಳ್ಳಲಾಗುವುದು ಎಂದು ಪಬ್ಲಿಕ್ ಮಿರ್ಚಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

1 day ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

4 days ago