ಕೊನಘಟ್ಟ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರೇ ಇಲ್ಲ: ಮಕ್ಕಳ ಪರದಾಟ: ಗ್ರಾಮಸ್ಥರ ಆಕ್ರೋಶ

ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ 2017ರಲ್ಲಿ ಪ್ರೌಢಶಾಲೆ ಕಟ್ಟಡ ಉದ್ಘಾಟನೆಗೊಂಡಿದೆ. ಇದೀಗ ನೆಲ ಹಾಗೂ ಗೋಡೆಗಳಿಗೆ ಹಾಕಲಾಗಿದ್ದ ಸಿಮೆಂಟ್ ಕಿತ್ತು ಬರುತ್ತಿದೆ. ಇದರಿಂದ ಮಕ್ಕಳು ಯಾವುದೇ ತೊಂದರೆ ಇಲ್ಲದೇ ಕುಳಿತುಕೊಂಡು ಪಾಠ ಕೇಳೋದಕ್ಕೆ  ಅಗದ ಪರಿಸ್ಥಿತಿಗೆ ಬಂದು ತಲುಪಿದೆ. ಜೊತೆಗೆ ಕೆಲ ಮೂಲಭೂತ ಸೌಕರ್ಯ‌ ಸೇರಿದಂತೆ ಕಳೆದ ಕೆಲ ತಿಂಗಳುಗಳಿಂದ ಇಂಗ್ಲಿಷ್ ಶಿಕ್ಷಕರು ಇಲ್ಲದೇ ವಿದ್ಯಾರ್ಥಿಗಳು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ತರಗತಿಗಳ ಒಳಭಾಗದಲ್ಲಿ ರಸ್ತೆಗಳಲ್ಲಿ‌ ಗುಂಡಿ ಬಿದ್ದಂತೆ ಗುಂಡಿಗಳು ಬಿದ್ದಿದ್ದು, ಅದರಲ್ಲೇ ಮಕ್ಕಳಿಗೆ ಪಾಠ ಪ್ರವಚನ ನಡೆಯುತ್ತವೆ. ಕಳೆದ ಆರೇಳು ತಿಂಗಳುಗಳಿಂದ ಇಂಗ್ಲಿಷ್ ಶಿಕ್ಷಕರು ಇಲ್ಲ. ಮಕ್ಕಳಿಗೆ ವಿಷಯವಾರು ಬೋಧನೆ ಸಿಗದಿದ್ದರೆ ಶಾಲೆಗೆ ಹಾಗೂ ಮಕ್ಕಳಿಗೆ ಉತ್ತಮ ಫಲಿತಾಂಶ ಬರುವುದಾದರೂ ಹೇಗೆ? ದಯಮಾಡಿ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ‌ ಕೂಡಲೇ ಹಾಳಾಗಿರುವ ನೆಲ ಹಾಗೂ ಗೋಡೆಗಳನ್ನು ದುರಸ್ತಿಗೊಳಿಸಿ, ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಕೂಡಲೇ ಇಂಗ್ಲಿಷ್ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಬೇಕು ಎಂದು ಊರಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕೊನಘಟ್ಟ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ 71 ವಿದ್ಯಾರ್ಥಿಗಳ ಶಿಕ್ಷಣ ಡೋಲಾಯಮಾನವಾಗಿದೆ. ಇನ್ನು ಉತ್ತಮ ಫಲಿತಾಂಶ ನಿರೀಕ್ಷಿಸಲು ಹೇಗೆ ಸಾಧ್ಯ. ಎಸ್ ಡಿಎಂಸಿ ಏಕೋ ಇದರ ಬಗ್ಗೆ ಎಚ್ಚರ ವಹಿಸುತ್ತಿಲ್ಲ. ಇನ್ನಾದರೂ ಸಂಬಂಧಪಟ್ಟವರು ನಿಗಾ ವಹಿಸಬೇಕು ಎಂದು ಹೇಳಿದ್ದಾರೆ.

ಸರ್ಕಾರಿ ಶಾಲೆಗಳನ್ನು ಬೆಳೆಸಬೇಕು. ಮಕ್ಕಳನ್ನ ಸರ್ಕಾರಿ ಶಾಲೆಯಲ್ಲೇ ಓದಿಸಿ ಎಂದು ಹೇಳುವ ರಾಜಕಾರಣಿಗಳು ಸರ್ಕಾರಿ ಶಾಲೆಗಳಿಗೊಮ್ಮೆ ಭೇಟಿ ನೀಡಬೇಕು. ಅಲ್ಲಿನ ಅವ್ಯವಸ್ಥೆ ಪರಿಶೀಲಿಸಿ ಸರಿಪಡಿಸುವ ಕೆಲಸ ಮಾಡಬೇಕು. ಸರ್ಕಾರಿ ಶಾಲೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿದರೆ,  ಖಾಸಗಿ ಶಾಲೆಗಳತ್ತ ಯಾರು ಮುಖ‌ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಶಾಲೆಯಲ್ಲಿ ಇಂಗ್ಲಿಷ್ ಪಾಠ ಮಾಡುವುದಕ್ಕೆ ಅತಿಥಿ ಶಿಕ್ಷಕರನ್ನು ನೇಮಿಸಲಾಗಿತ್ತು, ಅವರು ಕಾರಣಾಂತರಗಳಿಂದ ಬಿಟ್ಟು ಹೋಗಿದ್ದಾರೆ. ಕೂಡಲೇ ಇನ್ನೆರಡು ದಿನಗಳಲ್ಲಿ ಹೊಸ ಅತಿಥಿ ಶಿಕ್ಷಕರನ್ನು ನಿಯೋಜನೆ ಮಾಡಲಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ನೋಡಿಕೊಳ್ಳಲಾಗುವುದು ಎಂದು ಪಬ್ಲಿಕ್ ಮಿರ್ಚಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

1 hour ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

2 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

16 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

20 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago