ಕೊನೆಗೂ ಗೆದ್ದ ಆಸ್ಟ್ರೇಲಿಯಾ, ಸರಣಿ ಮುಡಿಗೇರಿಸಿಕೊಂಡ ಭಾರತ!

ರಾಜ್ ಕೋಟ್ ನ ಅಂಗಳದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ರನ್ ಹೊಳೆ ಹರಿಸಿದ ಆಸ್ಟ್ರೇಲಿಯಾದ ಬ್ಯಾಟಿಂಗ್ ಪಡೆಯ ಮುಂದೆ ಭಾರತೀಯ ಬೌಲಿಂಗ್ ಪಡೆ ಮಂಕಾಗಿತ್ತು ಇದರ ಪರಿಣಾಮವಾಗಿ ಆಸ್ಟ್ರೇಲಿಯಾ 66 ರನ್ ಗಳ ಜಯಗಳಿಸಿದರೂ ಭಾರತ ಮುಡಿಗೆ ಸರಣಿ ಒಲಿಯಿತು.

ಎರಡೂ ತಂಡಗಳು ಹಲವಾರು ಬದಲಾವಣೆಗಳನ್ನು ಮಾಡಿ ಮೈದಾನಕ್ಕೆ ಇಳಿದರು. ಭಾರತ ತಂಡದಲ್ಲಿ ನಾಯಕ ರೋಹಿತ್ ಶರ್ಮಾ, ಹಿರಿಯ ಆಟಗಾರ ವಿರಾಟ್ ಕೋಹ್ಲಿ ಹಾಗೂ ಕುಲದೀಪ್ ಯಾದವ್ ಮರಳಿದರು.

ಆಸ್ಟ್ರೇಲಿಯಾ ಪರವಾಗಿ ಸ್ಪೋಟಕ ಬ್ಯಾಟ್ಸ್ಮನ್ ಹಾಗೂ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸ್ ವೆಲ್, ನಾಯಕ ಪ್ಯಾಟ್ ಕಮ್ಮಿನ್ಸ್ ಹಾಗೂ ವೇಗದ ಬೌಲರ್ ಮಿಚೆಲ್ ಸ್ಟ್ರಾಕ್ ಕಂಬ್ಯಾಕ್ ಮಾಡಿದರು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಆಯ್ಕೆ ಉತ್ತಮವಾಗಿತ್ತು, ಆರಂಭಿಕ ಆಟಗಾರರಾದ ಡೇವಿಡ್ ವಾರ್ನರ್ (56) ಹಾಗೂ ಮಿಚೆಲ್ ಮಾಷ್೯ (96), ಮಧ್ಯಮ ಕ್ರಮಾಂಕದ ಆಟಗಾರರಾದ ಸ್ಟೀವನ್ ಸ್ಮಿತ್ (74) ಹಾಗೂ ಲಬುಶನಗೆ (72) ಅವರ ಬ್ಯಾಟಿಂಗ್ ಬಲದಿಂದ 350 ರ ಗಡಿ ದಾಟಿಸಿದರು.

ಭಾರತದ ಪರವಾಗಿ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಮೂರು ವಿಕೆಟ್, ಸ್ಪಿನ್ನರ್ ಕುಲದೀಪ್ ಯಾದವ್ ಎರಡು ವಿಕೆಟ್, ಸಿರಾಜ್ ಹಾಗೂ ಪ್ರಸಿದ್ಧ ಕೃಷ್ಣ ತಲಾ ಒಂದು ವಿಕೆಟ್ ಪಡೆದರು.

ಬೃಹತ್ ಮೊತ್ತ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಬಿರುಸಿನ ಆಕರ್ಷಕ ಅರ್ಧಶತಕ ಗಳಿಸಿದರು, ನಾಲ್ಕು ಬೌಂಡರಿ ಹಾಗೂ ಆರು ಸಿಕ್ಸರ್ ಸಿಡಿಸಿ (81) ರನ್ ಗಳಿಸುವ ಮೂಲಕ ಉತ್ತಮ ಅಡಿಪಾಯ ಹಾಕಿದರು.

ಬ್ಯಾಟಿಂಗ್ ನಲ್ಲಿ ಬಡ್ತಿ ಪಡೆದು ಬಂದ ಆಲ್ ರೌಂಡರ್ ವಾಶಿಂಗ್ಟನ್ ಸುಂದರ್ (18) ರನ್ ಗಳಿಸಿ ನಿರಾಸೆ ಮೂಡಿಸಿದರು. ನಂತರ ಬಂದ ಅನುಭವಿ ಆಟಗಾರ ವಿರಾಟ್ ಕೋಹ್ಲಿ (56), ಶ್ರೇಯಸ್ ಅಯ್ಯರ್ (48) , ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ (26) ಹಾಗೂ ಅಲ್ ರೌಂಡರ್ ರವೀಂದ್ರ ಜಡೇಜಾ (35) ಪ್ರದರ್ಶನ ಫಲ ನೀಡದೇ 286 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಲೌಟ್ ಆಯಿತು.

ಆಸ್ಟ್ರೇಲಿಯಾದ ಪರವಾಗಿ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸ್ ವೆಲ್ ನಾಲ್ಕು ವಿಕೆಟ್, ವೇಗಿ ಜೋಶ್ ಹೆಜಲ್ವುಡ್ ಎರಡು ವಿಕೆಟ್, ವೇಗಿಗಳಾದ ಮಿಚೆಲ್ ಸ್ಟ್ರಾಕ್, ಕೆಮರೂನ್ ಗ್ರೀನ್, ಪ್ಯಾಟ್ ಕಮ್ಮಿನ್ಸ್ ಹಾಗೂ ತನ್ವೀರ್ ಸಂಗ ತಲಾ ಒಂದು ವಿಕೆಟ್ ಪಡೆದರು.

ಪಂದ್ಯದಲ್ಲಿ ಉತ್ತಮ ಬೌಲಿಂಗ್ ಹಾಗೂ ಫೀಲ್ಡಿಂಗ್ ಮಾಡಿದ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸ್ ವೆಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು, ಮೊದಲೆರಡು ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಶುಭ್ಮನ್ ಗಿಲ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

34 minutes ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

2 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

6 hours ago

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…

6 hours ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ವೈದ್ಯ, ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

1 day ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರು ಸೇರಿದಂತೆ ಇತರೆ ಸಾಧಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

1 day ago