ರಾಜ್ ಕೋಟ್ ನ ಅಂಗಳದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ರನ್ ಹೊಳೆ ಹರಿಸಿದ ಆಸ್ಟ್ರೇಲಿಯಾದ ಬ್ಯಾಟಿಂಗ್ ಪಡೆಯ ಮುಂದೆ ಭಾರತೀಯ ಬೌಲಿಂಗ್ ಪಡೆ ಮಂಕಾಗಿತ್ತು ಇದರ ಪರಿಣಾಮವಾಗಿ ಆಸ್ಟ್ರೇಲಿಯಾ 66 ರನ್ ಗಳ ಜಯಗಳಿಸಿದರೂ ಭಾರತ ಮುಡಿಗೆ ಸರಣಿ ಒಲಿಯಿತು.
ಎರಡೂ ತಂಡಗಳು ಹಲವಾರು ಬದಲಾವಣೆಗಳನ್ನು ಮಾಡಿ ಮೈದಾನಕ್ಕೆ ಇಳಿದರು. ಭಾರತ ತಂಡದಲ್ಲಿ ನಾಯಕ ರೋಹಿತ್ ಶರ್ಮಾ, ಹಿರಿಯ ಆಟಗಾರ ವಿರಾಟ್ ಕೋಹ್ಲಿ ಹಾಗೂ ಕುಲದೀಪ್ ಯಾದವ್ ಮರಳಿದರು.
ಆಸ್ಟ್ರೇಲಿಯಾ ಪರವಾಗಿ ಸ್ಪೋಟಕ ಬ್ಯಾಟ್ಸ್ಮನ್ ಹಾಗೂ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸ್ ವೆಲ್, ನಾಯಕ ಪ್ಯಾಟ್ ಕಮ್ಮಿನ್ಸ್ ಹಾಗೂ ವೇಗದ ಬೌಲರ್ ಮಿಚೆಲ್ ಸ್ಟ್ರಾಕ್ ಕಂಬ್ಯಾಕ್ ಮಾಡಿದರು.
ಭಾರತದ ಪರವಾಗಿ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಮೂರು ವಿಕೆಟ್, ಸ್ಪಿನ್ನರ್ ಕುಲದೀಪ್ ಯಾದವ್ ಎರಡು ವಿಕೆಟ್, ಸಿರಾಜ್ ಹಾಗೂ ಪ್ರಸಿದ್ಧ ಕೃಷ್ಣ ತಲಾ ಒಂದು ವಿಕೆಟ್ ಪಡೆದರು.
ಬೃಹತ್ ಮೊತ್ತ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಬಿರುಸಿನ ಆಕರ್ಷಕ ಅರ್ಧಶತಕ ಗಳಿಸಿದರು, ನಾಲ್ಕು ಬೌಂಡರಿ ಹಾಗೂ ಆರು ಸಿಕ್ಸರ್ ಸಿಡಿಸಿ (81) ರನ್ ಗಳಿಸುವ ಮೂಲಕ ಉತ್ತಮ ಅಡಿಪಾಯ ಹಾಕಿದರು.
ಆಸ್ಟ್ರೇಲಿಯಾದ ಪರವಾಗಿ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸ್ ವೆಲ್ ನಾಲ್ಕು ವಿಕೆಟ್, ವೇಗಿ ಜೋಶ್ ಹೆಜಲ್ವುಡ್ ಎರಡು ವಿಕೆಟ್, ವೇಗಿಗಳಾದ ಮಿಚೆಲ್ ಸ್ಟ್ರಾಕ್, ಕೆಮರೂನ್ ಗ್ರೀನ್, ಪ್ಯಾಟ್ ಕಮ್ಮಿನ್ಸ್ ಹಾಗೂ ತನ್ವೀರ್ ಸಂಗ ತಲಾ ಒಂದು ವಿಕೆಟ್ ಪಡೆದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…