ರಾಜ್ ಕೋಟ್ ನ ಅಂಗಳದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ರನ್ ಹೊಳೆ ಹರಿಸಿದ ಆಸ್ಟ್ರೇಲಿಯಾದ ಬ್ಯಾಟಿಂಗ್ ಪಡೆಯ ಮುಂದೆ ಭಾರತೀಯ ಬೌಲಿಂಗ್ ಪಡೆ ಮಂಕಾಗಿತ್ತು ಇದರ ಪರಿಣಾಮವಾಗಿ ಆಸ್ಟ್ರೇಲಿಯಾ 66 ರನ್ ಗಳ ಜಯಗಳಿಸಿದರೂ ಭಾರತ ಮುಡಿಗೆ ಸರಣಿ ಒಲಿಯಿತು.
ಎರಡೂ ತಂಡಗಳು ಹಲವಾರು ಬದಲಾವಣೆಗಳನ್ನು ಮಾಡಿ ಮೈದಾನಕ್ಕೆ ಇಳಿದರು. ಭಾರತ ತಂಡದಲ್ಲಿ ನಾಯಕ ರೋಹಿತ್ ಶರ್ಮಾ, ಹಿರಿಯ ಆಟಗಾರ ವಿರಾಟ್ ಕೋಹ್ಲಿ ಹಾಗೂ ಕುಲದೀಪ್ ಯಾದವ್ ಮರಳಿದರು.
ಆಸ್ಟ್ರೇಲಿಯಾ ಪರವಾಗಿ ಸ್ಪೋಟಕ ಬ್ಯಾಟ್ಸ್ಮನ್ ಹಾಗೂ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸ್ ವೆಲ್, ನಾಯಕ ಪ್ಯಾಟ್ ಕಮ್ಮಿನ್ಸ್ ಹಾಗೂ ವೇಗದ ಬೌಲರ್ ಮಿಚೆಲ್ ಸ್ಟ್ರಾಕ್ ಕಂಬ್ಯಾಕ್ ಮಾಡಿದರು.
ಭಾರತದ ಪರವಾಗಿ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಮೂರು ವಿಕೆಟ್, ಸ್ಪಿನ್ನರ್ ಕುಲದೀಪ್ ಯಾದವ್ ಎರಡು ವಿಕೆಟ್, ಸಿರಾಜ್ ಹಾಗೂ ಪ್ರಸಿದ್ಧ ಕೃಷ್ಣ ತಲಾ ಒಂದು ವಿಕೆಟ್ ಪಡೆದರು.
ಬೃಹತ್ ಮೊತ್ತ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಬಿರುಸಿನ ಆಕರ್ಷಕ ಅರ್ಧಶತಕ ಗಳಿಸಿದರು, ನಾಲ್ಕು ಬೌಂಡರಿ ಹಾಗೂ ಆರು ಸಿಕ್ಸರ್ ಸಿಡಿಸಿ (81) ರನ್ ಗಳಿಸುವ ಮೂಲಕ ಉತ್ತಮ ಅಡಿಪಾಯ ಹಾಕಿದರು.
ಆಸ್ಟ್ರೇಲಿಯಾದ ಪರವಾಗಿ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸ್ ವೆಲ್ ನಾಲ್ಕು ವಿಕೆಟ್, ವೇಗಿ ಜೋಶ್ ಹೆಜಲ್ವುಡ್ ಎರಡು ವಿಕೆಟ್, ವೇಗಿಗಳಾದ ಮಿಚೆಲ್ ಸ್ಟ್ರಾಕ್, ಕೆಮರೂನ್ ಗ್ರೀನ್, ಪ್ಯಾಟ್ ಕಮ್ಮಿನ್ಸ್ ಹಾಗೂ ತನ್ವೀರ್ ಸಂಗ ತಲಾ ಒಂದು ವಿಕೆಟ್ ಪಡೆದರು.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…