ಕೊನೆಗೂ ಗೆದ್ದ ಆಸ್ಟ್ರೇಲಿಯಾ, ಸರಣಿ ಮುಡಿಗೇರಿಸಿಕೊಂಡ ಭಾರತ!

ರಾಜ್ ಕೋಟ್ ನ ಅಂಗಳದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ರನ್ ಹೊಳೆ ಹರಿಸಿದ ಆಸ್ಟ್ರೇಲಿಯಾದ ಬ್ಯಾಟಿಂಗ್ ಪಡೆಯ ಮುಂದೆ ಭಾರತೀಯ ಬೌಲಿಂಗ್ ಪಡೆ ಮಂಕಾಗಿತ್ತು ಇದರ ಪರಿಣಾಮವಾಗಿ ಆಸ್ಟ್ರೇಲಿಯಾ 66 ರನ್ ಗಳ ಜಯಗಳಿಸಿದರೂ ಭಾರತ ಮುಡಿಗೆ ಸರಣಿ ಒಲಿಯಿತು.

ಎರಡೂ ತಂಡಗಳು ಹಲವಾರು ಬದಲಾವಣೆಗಳನ್ನು ಮಾಡಿ ಮೈದಾನಕ್ಕೆ ಇಳಿದರು. ಭಾರತ ತಂಡದಲ್ಲಿ ನಾಯಕ ರೋಹಿತ್ ಶರ್ಮಾ, ಹಿರಿಯ ಆಟಗಾರ ವಿರಾಟ್ ಕೋಹ್ಲಿ ಹಾಗೂ ಕುಲದೀಪ್ ಯಾದವ್ ಮರಳಿದರು.

ಆಸ್ಟ್ರೇಲಿಯಾ ಪರವಾಗಿ ಸ್ಪೋಟಕ ಬ್ಯಾಟ್ಸ್ಮನ್ ಹಾಗೂ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸ್ ವೆಲ್, ನಾಯಕ ಪ್ಯಾಟ್ ಕಮ್ಮಿನ್ಸ್ ಹಾಗೂ ವೇಗದ ಬೌಲರ್ ಮಿಚೆಲ್ ಸ್ಟ್ರಾಕ್ ಕಂಬ್ಯಾಕ್ ಮಾಡಿದರು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಆಯ್ಕೆ ಉತ್ತಮವಾಗಿತ್ತು, ಆರಂಭಿಕ ಆಟಗಾರರಾದ ಡೇವಿಡ್ ವಾರ್ನರ್ (56) ಹಾಗೂ ಮಿಚೆಲ್ ಮಾಷ್೯ (96), ಮಧ್ಯಮ ಕ್ರಮಾಂಕದ ಆಟಗಾರರಾದ ಸ್ಟೀವನ್ ಸ್ಮಿತ್ (74) ಹಾಗೂ ಲಬುಶನಗೆ (72) ಅವರ ಬ್ಯಾಟಿಂಗ್ ಬಲದಿಂದ 350 ರ ಗಡಿ ದಾಟಿಸಿದರು.

ಭಾರತದ ಪರವಾಗಿ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಮೂರು ವಿಕೆಟ್, ಸ್ಪಿನ್ನರ್ ಕುಲದೀಪ್ ಯಾದವ್ ಎರಡು ವಿಕೆಟ್, ಸಿರಾಜ್ ಹಾಗೂ ಪ್ರಸಿದ್ಧ ಕೃಷ್ಣ ತಲಾ ಒಂದು ವಿಕೆಟ್ ಪಡೆದರು.

ಬೃಹತ್ ಮೊತ್ತ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಬಿರುಸಿನ ಆಕರ್ಷಕ ಅರ್ಧಶತಕ ಗಳಿಸಿದರು, ನಾಲ್ಕು ಬೌಂಡರಿ ಹಾಗೂ ಆರು ಸಿಕ್ಸರ್ ಸಿಡಿಸಿ (81) ರನ್ ಗಳಿಸುವ ಮೂಲಕ ಉತ್ತಮ ಅಡಿಪಾಯ ಹಾಕಿದರು.

ಬ್ಯಾಟಿಂಗ್ ನಲ್ಲಿ ಬಡ್ತಿ ಪಡೆದು ಬಂದ ಆಲ್ ರೌಂಡರ್ ವಾಶಿಂಗ್ಟನ್ ಸುಂದರ್ (18) ರನ್ ಗಳಿಸಿ ನಿರಾಸೆ ಮೂಡಿಸಿದರು. ನಂತರ ಬಂದ ಅನುಭವಿ ಆಟಗಾರ ವಿರಾಟ್ ಕೋಹ್ಲಿ (56), ಶ್ರೇಯಸ್ ಅಯ್ಯರ್ (48) , ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ (26) ಹಾಗೂ ಅಲ್ ರೌಂಡರ್ ರವೀಂದ್ರ ಜಡೇಜಾ (35) ಪ್ರದರ್ಶನ ಫಲ ನೀಡದೇ 286 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಲೌಟ್ ಆಯಿತು.

ಆಸ್ಟ್ರೇಲಿಯಾದ ಪರವಾಗಿ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸ್ ವೆಲ್ ನಾಲ್ಕು ವಿಕೆಟ್, ವೇಗಿ ಜೋಶ್ ಹೆಜಲ್ವುಡ್ ಎರಡು ವಿಕೆಟ್, ವೇಗಿಗಳಾದ ಮಿಚೆಲ್ ಸ್ಟ್ರಾಕ್, ಕೆಮರೂನ್ ಗ್ರೀನ್, ಪ್ಯಾಟ್ ಕಮ್ಮಿನ್ಸ್ ಹಾಗೂ ತನ್ವೀರ್ ಸಂಗ ತಲಾ ಒಂದು ವಿಕೆಟ್ ಪಡೆದರು.

ಪಂದ್ಯದಲ್ಲಿ ಉತ್ತಮ ಬೌಲಿಂಗ್ ಹಾಗೂ ಫೀಲ್ಡಿಂಗ್ ಮಾಡಿದ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸ್ ವೆಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು, ಮೊದಲೆರಡು ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಶುಭ್ಮನ್ ಗಿಲ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

53 minutes ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

2 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

3 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

3 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

7 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

9 hours ago