ಕೊನೆಗೂ ಸಿಕ್ಕಿಬಿದ್ದ ಶನಿಮಹಾತ್ಮ ದೇವಾಲಯಕ್ಕೆ ಮಾಂಸದ ತುಂಡು ತಂದಿದ್ದ ಆರೋಪಿಗಳು

ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಕನಸವಾಡಿ ಶ್ರೀ ಶನಿಮಹಾತ್ಮ ದೇವಸ್ಥಾನಕ್ಕೆ ಮಾಂಸದ ತುಂಡುಗಳನ್ನು ಒಳಗೊಂಡ ಹೂವಿನ ಹಾರ ತಂದಿದ್ದ ಆರೋಪಿಗಳನ್ನು ಶನಿವಾರ ದೇವಾಲಯದ ಸಿಬ್ಬಂದಿ ಪತ್ತೆಹಚ್ಚಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಗಳು ಹೊಸಕೋಟೆ ತಾಲ್ಲೂಕಿನ ಕಂಬಲಹಳ್ಳಿ ರಾಜು ಹಾಗೂ ವೈಟ್ ಫೀಲ್ಡ್ ಮೂಲದ ಆಟೋಚಾಲಕ ಸೋಮಶೇಖರ್ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ಆರೋಪಿಗಳು ಒಂದು ತಿಂಗಳ ಹಿಂದೆಯು ಸಹ ಮಧ್ಯಾಹ್ನದ ಸಮಯದಲ್ಲಿ ದೇವಾಲಯಕ್ಕೆ ಬಂದು ಹೂವಿನ ಹಾರಗಳೊಂದಿಗೆ ಮಾಸಂದ ತುಂಡುಗಳನ್ನು ಪೋಣಿಸಿ ಸಿದ್ಧಪಡಿಸಲಾಗಿದ್ದ ಹಾರವನ್ನು ತಂದಿದ್ದರು.

ಮಧ್ಯಾಹ್ನದ ಸಮಯವಾಗಿದ್ದರಿಂದ ದೇವಾಲಯದ ಸಿಬ್ಬಂದಿ ಹೂವಿನ ಹಾರದ ಪ್ಲಾಸ್ಟಿಕ್ ಕವರ್ ನ್ನು ಬಾಗಿಲಿನಲ್ಲೇ ಪಡೆದು ಸಂಜೆಯ ಅಲಂಕಾರಕ್ಕೆ ಬಳಸಲಾಗುವುದು ಎಂದು ಹೇಳಿ ಕಳುಹಿಸಿದ್ದರು. ಸಂಜೆ ಹಾರಗಳನ್ನು ತೆಗೆದು ನೀರು ಹಾಕುವಾಗ ಮಾಂಸದ ತುಂಡುಗಳನ್ನು ಪೋಣಿಸಿದ್ದು ಬೆಳಕಿಗೆ ಬಂದಿತ್ತು.

ಆರೋಪಿಗಳು ದೇವಾಲಯಕ್ಕೆ ಬಂದು ಹೋಗಿದ್ದ ಎಲ್ಲಾ ದೃಶ್ಯಗಳನ್ನು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದದವು. ಈ ದೃಶ್ಯಗಳನ್ನು ಆದರಿಸಿ ದೊಡ್ಡಬೆಳವಂಗಲ ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ್ದರು ಆರೋಪಿಗಳು ಪತ್ತೆಯಾಗಿರಲಿಲ್ಲ. ಶನಿವಾರ ಮತ್ತೆ ಇದೇ ಆರೋಪಿಗಳು ದೇವಾಲಯಕ್ಕೆ ಹಾರ ಕೊಡಲು ಬಂದಾಗ ಸಿಸಿ ಟಿವಿ ದೃಶ್ಯಗಳ ಮೇಲೆ ತೀವ್ರ ನಿಗಾವಹಿಸಿದ್ದ ದೇವಾಲಯದ ಸಿಬ್ಬಂದಿ ಆರೋಪಿಗಳನ್ನು ಗುರುತಿಸಿ ಹಾರ ಕೊಡುವ ಸಂದರ್ಭದಲ್ಲೇ ಬಂಧಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಧಾರ್ಮಿಕ ಸ್ಥಳ ಅಪವಿತ್ರಗೊಳಿಸಲು ಯತ್ನಿಸಿದ ಆರೋಪದ ಮೇಲೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

13 minutes ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

4 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

20 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

20 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago