ಕೊನೆಗೂ ಸಿಕ್ಕಿಬಿದ್ದ ಶನಿಮಹಾತ್ಮ ದೇವಾಲಯಕ್ಕೆ ಮಾಂಸದ ತುಂಡು ತಂದಿದ್ದ ಆರೋಪಿಗಳು

ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಕನಸವಾಡಿ ಶ್ರೀ ಶನಿಮಹಾತ್ಮ ದೇವಸ್ಥಾನಕ್ಕೆ ಮಾಂಸದ ತುಂಡುಗಳನ್ನು ಒಳಗೊಂಡ ಹೂವಿನ ಹಾರ ತಂದಿದ್ದ ಆರೋಪಿಗಳನ್ನು ಶನಿವಾರ ದೇವಾಲಯದ ಸಿಬ್ಬಂದಿ ಪತ್ತೆಹಚ್ಚಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಗಳು ಹೊಸಕೋಟೆ ತಾಲ್ಲೂಕಿನ ಕಂಬಲಹಳ್ಳಿ ರಾಜು ಹಾಗೂ ವೈಟ್ ಫೀಲ್ಡ್ ಮೂಲದ ಆಟೋಚಾಲಕ ಸೋಮಶೇಖರ್ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ಆರೋಪಿಗಳು ಒಂದು ತಿಂಗಳ ಹಿಂದೆಯು ಸಹ ಮಧ್ಯಾಹ್ನದ ಸಮಯದಲ್ಲಿ ದೇವಾಲಯಕ್ಕೆ ಬಂದು ಹೂವಿನ ಹಾರಗಳೊಂದಿಗೆ ಮಾಸಂದ ತುಂಡುಗಳನ್ನು ಪೋಣಿಸಿ ಸಿದ್ಧಪಡಿಸಲಾಗಿದ್ದ ಹಾರವನ್ನು ತಂದಿದ್ದರು.

ಮಧ್ಯಾಹ್ನದ ಸಮಯವಾಗಿದ್ದರಿಂದ ದೇವಾಲಯದ ಸಿಬ್ಬಂದಿ ಹೂವಿನ ಹಾರದ ಪ್ಲಾಸ್ಟಿಕ್ ಕವರ್ ನ್ನು ಬಾಗಿಲಿನಲ್ಲೇ ಪಡೆದು ಸಂಜೆಯ ಅಲಂಕಾರಕ್ಕೆ ಬಳಸಲಾಗುವುದು ಎಂದು ಹೇಳಿ ಕಳುಹಿಸಿದ್ದರು. ಸಂಜೆ ಹಾರಗಳನ್ನು ತೆಗೆದು ನೀರು ಹಾಕುವಾಗ ಮಾಂಸದ ತುಂಡುಗಳನ್ನು ಪೋಣಿಸಿದ್ದು ಬೆಳಕಿಗೆ ಬಂದಿತ್ತು.

ಆರೋಪಿಗಳು ದೇವಾಲಯಕ್ಕೆ ಬಂದು ಹೋಗಿದ್ದ ಎಲ್ಲಾ ದೃಶ್ಯಗಳನ್ನು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದದವು. ಈ ದೃಶ್ಯಗಳನ್ನು ಆದರಿಸಿ ದೊಡ್ಡಬೆಳವಂಗಲ ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ್ದರು ಆರೋಪಿಗಳು ಪತ್ತೆಯಾಗಿರಲಿಲ್ಲ. ಶನಿವಾರ ಮತ್ತೆ ಇದೇ ಆರೋಪಿಗಳು ದೇವಾಲಯಕ್ಕೆ ಹಾರ ಕೊಡಲು ಬಂದಾಗ ಸಿಸಿ ಟಿವಿ ದೃಶ್ಯಗಳ ಮೇಲೆ ತೀವ್ರ ನಿಗಾವಹಿಸಿದ್ದ ದೇವಾಲಯದ ಸಿಬ್ಬಂದಿ ಆರೋಪಿಗಳನ್ನು ಗುರುತಿಸಿ ಹಾರ ಕೊಡುವ ಸಂದರ್ಭದಲ್ಲೇ ಬಂಧಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಧಾರ್ಮಿಕ ಸ್ಥಳ ಅಪವಿತ್ರಗೊಳಿಸಲು ಯತ್ನಿಸಿದ ಆರೋಪದ ಮೇಲೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

11 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

11 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

14 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago