ಕೊನೆಗೂ ಸಿಕ್ಕಿಬಿದ್ದ ಶನಿಮಹಾತ್ಮ ದೇವಾಲಯಕ್ಕೆ ಮಾಂಸದ ತುಂಡು ತಂದಿದ್ದ ಆರೋಪಿಗಳು

ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಕನಸವಾಡಿ ಶ್ರೀ ಶನಿಮಹಾತ್ಮ ದೇವಸ್ಥಾನಕ್ಕೆ ಮಾಂಸದ ತುಂಡುಗಳನ್ನು ಒಳಗೊಂಡ ಹೂವಿನ ಹಾರ ತಂದಿದ್ದ ಆರೋಪಿಗಳನ್ನು ಶನಿವಾರ ದೇವಾಲಯದ ಸಿಬ್ಬಂದಿ ಪತ್ತೆಹಚ್ಚಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಗಳು ಹೊಸಕೋಟೆ ತಾಲ್ಲೂಕಿನ ಕಂಬಲಹಳ್ಳಿ ರಾಜು ಹಾಗೂ ವೈಟ್ ಫೀಲ್ಡ್ ಮೂಲದ ಆಟೋಚಾಲಕ ಸೋಮಶೇಖರ್ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ಆರೋಪಿಗಳು ಒಂದು ತಿಂಗಳ ಹಿಂದೆಯು ಸಹ ಮಧ್ಯಾಹ್ನದ ಸಮಯದಲ್ಲಿ ದೇವಾಲಯಕ್ಕೆ ಬಂದು ಹೂವಿನ ಹಾರಗಳೊಂದಿಗೆ ಮಾಸಂದ ತುಂಡುಗಳನ್ನು ಪೋಣಿಸಿ ಸಿದ್ಧಪಡಿಸಲಾಗಿದ್ದ ಹಾರವನ್ನು ತಂದಿದ್ದರು.

ಮಧ್ಯಾಹ್ನದ ಸಮಯವಾಗಿದ್ದರಿಂದ ದೇವಾಲಯದ ಸಿಬ್ಬಂದಿ ಹೂವಿನ ಹಾರದ ಪ್ಲಾಸ್ಟಿಕ್ ಕವರ್ ನ್ನು ಬಾಗಿಲಿನಲ್ಲೇ ಪಡೆದು ಸಂಜೆಯ ಅಲಂಕಾರಕ್ಕೆ ಬಳಸಲಾಗುವುದು ಎಂದು ಹೇಳಿ ಕಳುಹಿಸಿದ್ದರು. ಸಂಜೆ ಹಾರಗಳನ್ನು ತೆಗೆದು ನೀರು ಹಾಕುವಾಗ ಮಾಂಸದ ತುಂಡುಗಳನ್ನು ಪೋಣಿಸಿದ್ದು ಬೆಳಕಿಗೆ ಬಂದಿತ್ತು.

ಆರೋಪಿಗಳು ದೇವಾಲಯಕ್ಕೆ ಬಂದು ಹೋಗಿದ್ದ ಎಲ್ಲಾ ದೃಶ್ಯಗಳನ್ನು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದದವು. ಈ ದೃಶ್ಯಗಳನ್ನು ಆದರಿಸಿ ದೊಡ್ಡಬೆಳವಂಗಲ ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ್ದರು ಆರೋಪಿಗಳು ಪತ್ತೆಯಾಗಿರಲಿಲ್ಲ. ಶನಿವಾರ ಮತ್ತೆ ಇದೇ ಆರೋಪಿಗಳು ದೇವಾಲಯಕ್ಕೆ ಹಾರ ಕೊಡಲು ಬಂದಾಗ ಸಿಸಿ ಟಿವಿ ದೃಶ್ಯಗಳ ಮೇಲೆ ತೀವ್ರ ನಿಗಾವಹಿಸಿದ್ದ ದೇವಾಲಯದ ಸಿಬ್ಬಂದಿ ಆರೋಪಿಗಳನ್ನು ಗುರುತಿಸಿ ಹಾರ ಕೊಡುವ ಸಂದರ್ಭದಲ್ಲೇ ಬಂಧಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಧಾರ್ಮಿಕ ಸ್ಥಳ ಅಪವಿತ್ರಗೊಳಿಸಲು ಯತ್ನಿಸಿದ ಆರೋಪದ ಮೇಲೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

26 minutes ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

17 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

17 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

20 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago