ಕೊನೆಗೂ ಸಿಕ್ಕಿಬಿದ್ದ ಶನಿಮಹಾತ್ಮ ದೇವಾಲಯಕ್ಕೆ ಮಾಂಸದ ತುಂಡು ತಂದಿದ್ದ ಆರೋಪಿಗಳು

ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಕನಸವಾಡಿ ಶ್ರೀ ಶನಿಮಹಾತ್ಮ ದೇವಸ್ಥಾನಕ್ಕೆ ಮಾಂಸದ ತುಂಡುಗಳನ್ನು ಒಳಗೊಂಡ ಹೂವಿನ ಹಾರ ತಂದಿದ್ದ ಆರೋಪಿಗಳನ್ನು ಶನಿವಾರ ದೇವಾಲಯದ ಸಿಬ್ಬಂದಿ ಪತ್ತೆಹಚ್ಚಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಗಳು ಹೊಸಕೋಟೆ ತಾಲ್ಲೂಕಿನ ಕಂಬಲಹಳ್ಳಿ ರಾಜು ಹಾಗೂ ವೈಟ್ ಫೀಲ್ಡ್ ಮೂಲದ ಆಟೋಚಾಲಕ ಸೋಮಶೇಖರ್ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ಆರೋಪಿಗಳು ಒಂದು ತಿಂಗಳ ಹಿಂದೆಯು ಸಹ ಮಧ್ಯಾಹ್ನದ ಸಮಯದಲ್ಲಿ ದೇವಾಲಯಕ್ಕೆ ಬಂದು ಹೂವಿನ ಹಾರಗಳೊಂದಿಗೆ ಮಾಸಂದ ತುಂಡುಗಳನ್ನು ಪೋಣಿಸಿ ಸಿದ್ಧಪಡಿಸಲಾಗಿದ್ದ ಹಾರವನ್ನು ತಂದಿದ್ದರು.

ಮಧ್ಯಾಹ್ನದ ಸಮಯವಾಗಿದ್ದರಿಂದ ದೇವಾಲಯದ ಸಿಬ್ಬಂದಿ ಹೂವಿನ ಹಾರದ ಪ್ಲಾಸ್ಟಿಕ್ ಕವರ್ ನ್ನು ಬಾಗಿಲಿನಲ್ಲೇ ಪಡೆದು ಸಂಜೆಯ ಅಲಂಕಾರಕ್ಕೆ ಬಳಸಲಾಗುವುದು ಎಂದು ಹೇಳಿ ಕಳುಹಿಸಿದ್ದರು. ಸಂಜೆ ಹಾರಗಳನ್ನು ತೆಗೆದು ನೀರು ಹಾಕುವಾಗ ಮಾಂಸದ ತುಂಡುಗಳನ್ನು ಪೋಣಿಸಿದ್ದು ಬೆಳಕಿಗೆ ಬಂದಿತ್ತು.

ಆರೋಪಿಗಳು ದೇವಾಲಯಕ್ಕೆ ಬಂದು ಹೋಗಿದ್ದ ಎಲ್ಲಾ ದೃಶ್ಯಗಳನ್ನು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದದವು. ಈ ದೃಶ್ಯಗಳನ್ನು ಆದರಿಸಿ ದೊಡ್ಡಬೆಳವಂಗಲ ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ್ದರು ಆರೋಪಿಗಳು ಪತ್ತೆಯಾಗಿರಲಿಲ್ಲ. ಶನಿವಾರ ಮತ್ತೆ ಇದೇ ಆರೋಪಿಗಳು ದೇವಾಲಯಕ್ಕೆ ಹಾರ ಕೊಡಲು ಬಂದಾಗ ಸಿಸಿ ಟಿವಿ ದೃಶ್ಯಗಳ ಮೇಲೆ ತೀವ್ರ ನಿಗಾವಹಿಸಿದ್ದ ದೇವಾಲಯದ ಸಿಬ್ಬಂದಿ ಆರೋಪಿಗಳನ್ನು ಗುರುತಿಸಿ ಹಾರ ಕೊಡುವ ಸಂದರ್ಭದಲ್ಲೇ ಬಂಧಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಧಾರ್ಮಿಕ ಸ್ಥಳ ಅಪವಿತ್ರಗೊಳಿಸಲು ಯತ್ನಿಸಿದ ಆರೋಪದ ಮೇಲೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

6 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

8 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

8 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

9 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

13 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

14 hours ago